Home ಸುದ್ದಿಗಳು ಬೇಸಿಗೆ ಬಿಸಿಲು : ನೀರಿನ ಅರವಟಿಗೆ ಆರಂಭ  
ಸುದ್ದಿಗಳು

ಬೇಸಿಗೆ ಬಿಸಿಲು : ನೀರಿನ ಅರವಟಿಗೆ ಆರಂಭ  

Share
harapanahalli nagarasabe
Share

ಹರಪನಹಳ್ಳಿ : ಬಿಸಿಲಿನ ತಾಪಮಾನ ಹೆಚ್ಚುತ್ತಿರುವ ಕಾರಣ ನಗರದ ವಿವಿಧೆಡೆ ಇಲ್ಲಿಯ ನಗರಸಭೆ ಅಧಿಕಾರಿಗಳು ಸಾರ್ವಜನಿಕರಿಗಾಗಿ ಉಚಿತ ನೀರಿನ ಅರವಟಿಗೆ ಶನಿವಾರ ಸ್ಥಾಪಿಸಿದ್ದಾರೆ.

ನಿತ್ಯ ತಾಪಮಾನ ಏರಿಕೆ ಆಗುತ್ತಿರುವ ಕಾರಣ, ಸಾರ್ವಜನಿಕರು ನೀರಿನ ದಾಹ ಪೂರೈಸಲು ಈ ಕ್ರಮ ಕೈಗೊಳ್ಳಲಾಗಿದೆ. ನಗರದ ಇಜಾರಿ ಶಿರಸಪ್ಪ ವೃತ್ತ (ಬಸ್ ನಿಲ್ದಾಣ)ದ ಬಳಿ,  ಕೊಟ್ಟೂರು ರಸ್ತೆಯ ಬಸ್ ನಿಲ್ದಾಣ ಹಾಗೂ ಡಾ.ಬಿ.ಆರ್.ಅಂಬೇಡ್ಕರ ವೃತ್ತದ ಬಳಿ ಆರಂಭಿಸಲಾಗಿದ್ದು, ನಗರದಲ್ಲಿ ಓಡಾಡುವ ಸಾರ್ವಜನಿಕರು ಈ ಅವಕಾಶ ಬಳಸಿಕೊಂಡು, ನೀರು ಸೇವಿಸಿ ಎಂದು ಪೌರಾಯುಕ್ತೆ ರೇಣುಕಾ ಎಸ್‍ ದೇಸಾಯಿ ಅವರು ಮಾಹಿತಿ ನೀಡಿದರು.

ನೀರಿನ ಅರವಟಿಗೆ ಸ್ಥಾಪಿಸಲು ಆಗ್ರಹಿಸಿ ಏ 16ರಂದು ಭಾರತ ಕಮ್ಯುನಿಷ್ಟ್ ಪಕ್ಷ ಪ್ರತಿಭಟನೆ ನಡೆಸಿ ಪೌರಾಯುಕ್ತರಿಗೆ ಮನವಿ ಸಲ್ಲಿಸಿತ್ತು. ಇದು ನಾವು ಮಾಡಿದ ಹೋರಾಟದ ಪ್ರತಿಫಲ ಎಂದು ಅಖಿಲ ಭಾರತ ಕಿಸಾನ್ ಸಭಾ ಜಿಲ್ಲಾಧ್ಯಕ್ಷ ಗುಡಿಹಳ್ಳಿ ಹಾಲೇಶ್ ತಿಳಿಸಿದರು.  ನಗರಸಭೆ ಕಚೇರಿ ವ್ಯವಸ್ಥಾಪಕ ಅಶೋಕ ಅವರು ಹಾಗೂ ಸಿಬ್ಬಂದಿ ಇದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಜೂ.18 ರಂದು ಪರಿಶಿಷ್ಟ ಜಾತಿ ಜನಾಂಗದವರ ಕುಂದು-ಕೊರತೆ ಆಲಿಕೆ ಸಭೆ

ಬಳ್ಳಾರಿ : ಜಿಲ್ಲೆಯ ಪರಿಶಿಷ್ಟ ಜಾತಿ ಜನಾಂಗದವರ ಸಮಸ್ಯೆಗಳನ್ನು ಆಲಿಸಿ, ಪರಿಹರಿಸಲು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ...

ಹರಪನಹಳ್ಳಿ ಪೊಲೀಸ್‌
Homeಸುದ್ದಿಗಳು

ಹರಪನಹಳ್ಳಿಯಲ್ಲಿ ಪೊಲೀಸರ ‘ಕಾಲ್ನಡಿಗೆ ಗಸ್ತು’

ಹರಪನಹಳ್ಳಿ : ನಗರದಲ್ಲಿ ಅಪರಾಧ ಪ್ರಕರಣಗಳಿಗೆ ಬ್ರೇಕ್ ಹಾಕಲು ನಮ್ಮ ಪೊಲೀಸ್ ಇಲಾಖೆ ಒಂದು ಸೂಪರ್...

dc hosapete
Homeಸುದ್ದಿಗಳು

ನಿರ್ಲಕ್ಷ್ಯ ತೋರಿದರೆ ಕಠಿಣ ಕ್ರಮ – ಕವಿತಾ ಎಸ್. ಮನ್ನಿಕೇರಿ ಖಡಕ್ ಎಚ್ಚರಿಕೆ

ಹೊಸಪೇಟೆ (ವಿಜಯನಗರ): ಜಿಲ್ಲೆಯಲ್ಲಿ ಕುಂಠಿತಗೊಂಡಿರುವ 7ನೇ ಸಣ್ಣ ನೀರಾವರಿ ಹಾಗೂ 2ನೇ ಜಲಮೂಲಗಳ ಗಣತಿಯನ್ನು ಸರ್ಕಾರದ...

harapanahallipdo
ಸುದ್ದಿಗಳು

ಪಂಚಾಯತ್ ಇಲಾಖೆ ನೌಕರರ ಸಂಘಕ್ಕೆ ಆಯ್ಕೆ

ಹರಪನಹಳ್ಳಿ :  ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಇಲಾಖೆಯ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷರಾಗಿ ಹಲವಾಗಲು...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.