ವಿಜಯನಗರ (ಹೊಸಪೇಟೆ): ಭಾರತೀಯ ಸೇನೆ ಹಾಗೂ ಯುನಿಫಾರ್ಮ್ ಸೇವೆಗಳಿಗೆ ಸೇರಬಯಸುವ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಆಯ್ಕೆ ಪೂರ್ವ ಸಿದ್ಧತೆಗಾಗಿ ಉಚಿತ ವೃತ್ತಿ ಮಾರ್ಗದರ್ಶನ ಮತ್ತು ತರಬೇತಿ ನೀಡಲು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅರ್ಜಿ ಆಹ್ವಾನಿಸಿದೆ.
ಅರ್ಹತೆಗಳು:
-
ವರ್ಗ: ಪ್ರವರ್ಗ-1, 2ಎ, 3ಎ ಹಾಗೂ 3ಬಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
-
ವಿದ್ಯಾರ್ಹತೆ: 10ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ಪ್ರತಿ ವಿಷಯದಲ್ಲಿ ಕನಿಷ್ಠ 33 ಅಂಕ ಹಾಗೂ ಸರಾಸರಿ ಶೇ. 45ರಷ್ಟು ಅಂಕ ಗಳಿಸಿರುವುದು ಕಡ್ಡಾಯ.
-
ಆದಾಯ ಮಿತಿ: ಪ್ರವರ್ಗ-1ರ ಅಭ್ಯರ್ಥಿಗಳ ಕುಟುಂಬದ ವಾರ್ಷಿಕ ಆದಾಯ ₹2.50 ಲಕ್ಷ ಹಾಗೂ ಇತರ ಪ್ರವರ್ಗಗಳ ಅಭ್ಯರ್ಥಿಗಳ ಆದಾಯ ₹1 ಲಕ್ಷ ಮೀರಬಾರದು.
ದಕ್ಷಿಣ ಕನ್ನಡ ಜಿಲ್ಲೆಯನ್ನು ಆಯ್ಕೆ ಮಾಡಿಕೊಂಡ ಅಭ್ಯರ್ಥಿಗಳಿಗೆ ಆ ಜಿಲ್ಲೆಯಲ್ಲಿಯೇ ತರಬೇತಿ ನೀಡಲಾಗುವುದು. ಆಸಕ್ತರು ಸಂಬಂಧಿಸಿದ ಜಿಲ್ಲಾ ಅಥವಾ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ಕಚೇರಿಯಿಂದ ಅರ್ಜಿ ನಮೂನೆ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ನೇರವಾಗಿ ಅಥವಾ ನೋಂದಾಯಿತ ಅಂಚೆ ಮೂಲಕ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಮೇ 16 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0824-2225078 ಅನ್ನು ಸಂಪರ್ಕಿಸಬಹುದು.
Leave a comment