Home ಶಿಕ್ಷಣ ಸಾವಿತ್ರಿಬಾಯಿ ಪುಲೆ ಶಿಕ್ಷಕಿಯರ ಸಂಘ, ಸರ್ಕಾರಿ ನೌಕರರ ಸಂಘದಿಂದ ವಿನೂತನ ಪ್ರಯತ್ನ
ಶಿಕ್ಷಣ

ಸಾವಿತ್ರಿಬಾಯಿ ಪುಲೆ ಶಿಕ್ಷಕಿಯರ ಸಂಘ, ಸರ್ಕಾರಿ ನೌಕರರ ಸಂಘದಿಂದ ವಿನೂತನ ಪ್ರಯತ್ನ

Share
ನೌಕರರ ಭವನ ಹರಪನಹಳ್ಳಿ
Share

ಹರಪನಹಳ್ಳಿ: ಸರ್ಕಾರಿ ಶಾಲೆಗಳಲ್ಲಿ ಓದುವ ವಿದ್ಯಾರ್ಥಿಗಳಲ್ಲಿ ಸೃಜನಾತ್ಮಕ ಕೌಶಲ್ಯ ಬೆಳೆಸುವ ಹಾಗೂ ಓದುವ ಹವ್ಯಾಸವನ್ನು ಹೆಚ್ಚಿಸುವ ಸದುದ್ದೇಶದಿಂದ, ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ ಹಾಗೂ ರಾಜ್ಯ ಸರ್ಕಾರಿ ನೌಕರರ ಸಂಘದ ಸಹಯೋಗದಲ್ಲಿ ಉಚಿತ ಬೇಸಿಗೆ ಶಿಬಿರ ಆರಂಭಿಸಿ ವಿನೂತನ ಪ್ರಯತ್ನಕ್ಕೆ ಚಾಲನೆ ನೀಡಲಾಯಿತು.

ಶಿಬಿರದ ನೇತೃತ್ವವಹಿಸಿರುವ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ಜಿಲ್ಲಾಧ್ಯಕ್ಷೆ ಲತಾ ಟಿ.ಹೆಚ್.ಎಂ. ಮಾತನಾಡಿ, ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ, ಅವರಲ್ಲಿ ಏಕಾಗ್ರತೆ ಹಾಗೂ ಓದುವ ಹವ್ಯಾಸವನ್ನು ಹೆಚ್ಚಿಸಲು ಯಾವುದೇ ಫಲಾಪೇಕ್ಷೆಯಿಲ್ಲದೆ ಈ ಶಿಬಿರ ಆಯೋಜಿಸಲಾಗಿದೆ. ನಮ್ಮ ಸಂಘಟನೆಯ ಪದಾಧಿಕಾರಿಗಳು ಹಾಗೂ ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ಮಕ್ಕಳಿಗೆ ಜ್ಞಾನಧಾರೆ ಎರೆಯಲಾಗುತ್ತಿದೆ ಎಂದು ತಿಳಿಸಿದರು.

ಅಧ್ಯಕ್ಷತೆ ವಹಿಸಿದ್ದ ಸರ್ಕಾರಿ ನೌಕರರ ಸಂಘದ ರಾಜ್ಯ ಸಮಿತಿ ಸದಸ್ಯ ಮಂಜುನಾಥ ಪೂಜಾರ ಮಾತನಾಡಿ, ‘ಸರ್ಕಾರಿ ಶಾಲಾ ಮಕ್ಕಳಲ್ಲಿ ಶಿಕ್ಷಣದ ಜೊತೆ ಕೌಶಲ ಹೆಚ್ಚಿಸಲು ಶಿಬಿರದಲ್ಲಿ ಕಲಿಸಲಾಗುವುದು’ ಎಂದರು.  ಶಾಲಾ ಶಿಕ್ಷಣ ಇಲಾಖೆ ಸಂಘದ ಅಧ್ಯಕ್ಷ  ಗಿರಿರಾಜ್,  ‘ಸೃಜನಾತ್ಮಕ ಕಾರ್ಯಕ್ರಮಗಳ ಮೂಲಕ ಸಂಘಟನೆಯ ಬಲವರ್ಧನೆಯಾಗುತ್ತಿದೆ. ಇಂತಹ ಉತ್ತಮ ಕೆಲಸಗಳನ್ನು ಹತ್ತಿಕ್ಕಲು ಯಾರಿಂದಲೂ ಸಾಧ್ಯವಿಲ್ಲ. ಮುಂದಿನ ದಿನಗಳಲ್ಲಿ ಇನ್ನಷ್ಟು ಕಾರ್ಯಕ್ರಮಗಳು ರೂಪುಗೊಳ್ಳಲಿ’ ಎಂದರು.

ಪ್ರೌಢಶಾಲಾ ಸಹ ಶಿಕ್ಷಕರ ಸಂಘ ಅಧ್ಯಕ್ಷ   ಗುರುಮೂರ್ತಿ,  “ಎಲ್ಲಾ ವಿದ್ಯಾರ್ಥಿಗಳು ಈ ಶಿಬಿರದ ಸದುಪಯೋಗ ಪಡೆದುಕೊಂಡು ಶಿಬಿರವನ್ನು ಯಶಸ್ವಿಗೊಳಿಸಬೇಕು.” ಎಂದು ಹೇಳಿದರು. ಪ್ರೌಢಶಾಲಾ ಸಹ ಶಿಕ್ಷಕರ ಸಂಘ  ಸಂಘಟನಾ ಕಾರ್ಯದರ್ಶಿ ಮಕ್ಬುಲ್ ಭಾಷಾ,ಮಕ್ಕಳಿಗೆ ಕೇವಲ ಪಠ್ಯವಲ್ಲದೆ ನೀತಿ ಶಿಕ್ಷಣ, ಮೌಲ್ಯಗಳು, ಸಂಸ್ಕೃತಿ, ಯೋಗ ಮತ್ತು ಆರೋಗ್ಯದ ಬಗ್ಗೆ ಅರಿವು ಮೂಡಿಸುತ್ತಿರುವ ಸಂಘಟನೆಯ ಕಾರ್ಯ ನಿಜಕ್ಕೂ ಸಂತೋಷದಾಯಕ.’ ಎಂದು ತಿಳಿಸಿದರು. ಪ್ರಮುಖರಾದ ಮಲ್ಲಮ್ಮ ವಡ್ಡರ್, ಸವಿತಾ, ಶೋಭಾ ಕುಮಾರಿ, ರೇಷ್ಮಾ, ಮಂಜುಳಾ, ಹುಸೇನ್ ಬಾಷಾ, ಹಿರಿಯರಾದ ನಾಗರಾಜ್, ಒಕ್ಕೂಟದ ಕಾರ್ಯದರ್ಶಿ ಕೊಟ್ರಯ್ಯ ಇದ್ದರು. ಶಿಕ್ಷಕಿ ಕವಿತಾ ಐ.ಜಿ. ಸ್ವಾಗತಿಸಿದರು. ಜಯಲಕ್ಷ್ಮಿ  ನಿರೂಪಿಸಿದರೆ, ರೇಣುಕಾ ವಂದನೆ ಸಲ್ಲಿಸಿದರು.

 

Share

Leave a comment

Leave a Reply

Your email address will not be published. Required fields are marked *

Related Articles
Homeಶಿಕ್ಷಣ

ಬಿ.ಐ.ಇ.ಟಿ. ಯಲ್ಲಿ ನೈಲಿಟ್‌ನ 90 ಗಂಟೆಗಳ ‘ಚಿಪ್‌ಕ್ರಾಫ್ಟ್’ ಸೆಮಿಕಂಡಕ್ಟರ್ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ

ದಾವಣಗೆರೆ : ಬಾಪೂಜಿ ಇಂಜಿನಿಯರಿಂಗ್  ಮತ್ತು ತಾಂತ್ರಿಕ ಮಹಾವಿದ್ಯಾಲಯ ಸಂಸ್ಥೆಯ ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಷನ್ ಇಂಜಿನಿಯರಿಂಗ್...

Homeಶಿಕ್ಷಣ

ವಿದ್ಯಾರ್ಥಿ ದೆಸೆಯಲ್ಲೇ ದೊಡ್ಡಮಟ್ಟದ ಸಾಧನೆಯ ಗುರಿ ಇರಲಿ

ಹರಪನಹಳ್ಳಿ: ಶಿಕ್ಷಣ ಪಡೆಯುವಾಗಲೇ ವಿದ್ಯಾರ್ಥಿಗಳು ದೊಡ್ಡಮಟ್ಟದ ಸಾಧನೆಯ ಗುರಿ ಇಟ್ಟುಕೊಳ್ಳಬೇಕು ಎಂದು ಸ್ಥಳೀಯ ಸಲಹಾ ಸಮಿತಿಯ ಅಧ್ಯಕ್ಷರಾದ ಪಿ. ಮಹಾಬಲೇಶ್ವರಗೌಡ್ರು ಕಿವಿಮಾತು ಹೇಳಿದರು. ನಗರದ ತರಳಬಾಳು ಜಗದ್ಗುರು ವಿದ್ಯಾಸಂಸ್ಥೆಯ ಎಚ್.ಪಿ.ಎಸ್ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ 2026 -27ನೇ...

Homeಶಿಕ್ಷಣ

ಪದವಿ ಹಾಗೂ ಸ್ನಾತಕೋತ್ತರ ಪದವಿಗೆ ಅರ್ಜಿ ಆಹ್ವಾನ

ವಿಜಯನಗರ(ಹೊಸಪೇಟೆ) : 2026-27 ನೇ ಸಾಲಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಿಂದ ದೂರ ಶಿಕ್ಷಣ ಮಾದರಿ...

Homeಶಿಕ್ಷಣ

ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ :

ದಾವಣಗೆರೆ : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ (ಸಾಮಾನ್ಯ ಪದವಿ ಮಟ್ಟದ ಕೋರ್ಸಿನವಿದ್ಯಾರ್ಥಿಗಳಿಗೆ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.