Home ಸುದ್ದಿಗಳು ಹಂಪಿಯಲ್ಲಿ ಶೀಘ್ರವೇ ಅತ್ಯಾಧುನಿಕ ‘ಸ್ಟ್ರೀಟ್ ಫುಡ್ ಹಬ್’
ಸುದ್ದಿಗಳು

ಹಂಪಿಯಲ್ಲಿ ಶೀಘ್ರವೇ ಅತ್ಯಾಧುನಿಕ ‘ಸ್ಟ್ರೀಟ್ ಫುಡ್ ಹಬ್’

Share
 hampi-street-food-hub-update
Share

ಹೊಸಪೇಟೆ: ವಿಶ್ವವಿಖ್ಯಾತ ಹಂಪಿ ಪ್ರವಾಸಿ ತಾಣಕ್ಕೆ ಬರುವ ಪ್ರವಾಸಿಗರಿಗೆ ಇನ್ನು ಮುಂದೆ ಒಂದೇ ಸೂರಿನಡಿ ವೈವಿಧ್ಯಮಯ ಮತ್ತು ಗುಣಮಟ್ಟದ ಆಹಾರ ಖಾದ್ಯಗಳು ಲಭ್ಯವಾಗಲಿವೆ. ಕೇಂದ್ರ ಸರ್ಕಾರದ ‘ಪಿ.ಎಂ. ಸ್ವನಿಧಿ’ ಯೋಜನೆಯಡಿ ಹಂಪಿಯಲ್ಲಿ ಅತ್ಯಾಧುನಿಕ ‘ಸ್ಟ್ರೀಟ್ ಫುಡ್ ಹಬ್’ ಸ್ಥಾಪಿಸಲು ಜಿಲ್ಲಾಡಳಿತ ಸಜ್ಜಾಗಿದೆ.

ಇತ್ತೀಚೆಗೆ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಅವರು ಈ ಮಹತ್ವದ ಯೋಜನೆಯ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಹಂಪಿಯ ಪಾರ್ಕಿಂಗ್ ಪ್ರದೇಶದ ಸಮೀಪವಿರುವ ಗುತ್ತಿಲ್ಯಾಂಡ್ ಹಾಗೂ ದೊಡ್ಡ ಆಲದ ಮರದ ಎದುರು ಮಳಿಗೆಗಳನ್ನು ಸ್ಥಾಪಿಸಲು ಸ್ಥಳ ಗುರುತಿಸಲಾಗಿದೆ. ಒಂದು ಕ್ಲಸ್ಟರ್ ನಿರ್ಮಾಣಕ್ಕೆ ಸುಮಾರು 4 ಕೋಟಿ ರೂಪಾಯಿ ವೆಚ್ಚ ಮಾಡಲಾಗುತ್ತಿದ್ದು, ತಾತ್ಕಾಲಿಕ ಮಳಿಗೆಗಳ ಮೂಲಕ ವ್ಯಾಪಾರಕ್ಕೆ ಅವಕಾಶ ನೀಡಲಾಗುತ್ತದೆ.

ಪ್ರತಿ ಫುಡ್ ಹಬ್‌ನಲ್ಲಿ ಸುಮಾರು 50 ಬೀದಿ ಬದಿ ವ್ಯಾಪಾರಿಗಳಿಗೆ ವ್ಯಾಪಾರ ನಡೆಸಲು ಅವಕಾಶ ಕಲ್ಪಿಸಲಾಗುವುದು. ಗ್ರಾಹಕರಿಗೆ ಶುದ್ಧ ಕುಡಿಯುವ ನೀರು, ನೆರಳು ಮತ್ತು ಸ್ವಚ್ಛವಾದ ಪರಿಸರವನ್ನು ಒದಗಿಸುವುದು ಯೋಜನೆಯ ಆದ್ಯತೆಯಾಗಿದೆ. ರಾಜ್ಯದಲ್ಲಿ ಚಾಮುಂಡಿ ಬೆಟ್ಟ, ಬೇಲೂರು-ಹಳೇಬೀಡು ಸೇರಿದಂತೆ ಆಯ್ದ 5 ಪ್ರಮುಖ ಪ್ರವಾಸಿ ತಾಣಗಳಲ್ಲಿ ಈ ಯೋಜನೆ ಜಾರಿಯಾಗುತ್ತಿದ್ದು, ಅದರಲ್ಲಿ ಹಂಪಿ ಸ್ಥಾನ ಪಡೆದಿರುವುದು ವಿಶೇಷ. ಈ ಹಬ್‌ನಿಂದ ಸ್ಥಳೀಯ ವ್ಯಾಪಾರಿಗಳ ಆರ್ಥಿಕ ಸಬಲೀಕರಣದ ಜೊತೆಗೆ, ಹಂಪಿಯ ಪ್ರವಾಸೋದ್ಯಮಕ್ಕೂ ಹೊಸ ಕಳೆ ಬರಲಿದೆ ಎಂದು ಜಿಲ್ಲಾಧಿಕಾರಿಗಳು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಯೋಜನೆಯ ಅನುಷ್ಠಾನಕ್ಕಾಗಿ ಹಂಪಿ ಗ್ರಾಮ ಪಂಚಾಯಿತಿ ಮತ್ತು ಕಮಲಾಪುರ ಪುರಸಭೆ ಜಂಟಿಯಾಗಿ ಕಾರ್ಯನಿರ್ವಹಿಸಲಿವೆ.

 

 

 

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಜೂ.18 ರಂದು ಪರಿಶಿಷ್ಟ ಜಾತಿ ಜನಾಂಗದವರ ಕುಂದು-ಕೊರತೆ ಆಲಿಕೆ ಸಭೆ

ಬಳ್ಳಾರಿ : ಜಿಲ್ಲೆಯ ಪರಿಶಿಷ್ಟ ಜಾತಿ ಜನಾಂಗದವರ ಸಮಸ್ಯೆಗಳನ್ನು ಆಲಿಸಿ, ಪರಿಹರಿಸಲು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ...

ಹರಪನಹಳ್ಳಿ ಪೊಲೀಸ್‌
Homeಸುದ್ದಿಗಳು

ಹರಪನಹಳ್ಳಿಯಲ್ಲಿ ಪೊಲೀಸರ ‘ಕಾಲ್ನಡಿಗೆ ಗಸ್ತು’

ಹರಪನಹಳ್ಳಿ : ನಗರದಲ್ಲಿ ಅಪರಾಧ ಪ್ರಕರಣಗಳಿಗೆ ಬ್ರೇಕ್ ಹಾಕಲು ನಮ್ಮ ಪೊಲೀಸ್ ಇಲಾಖೆ ಒಂದು ಸೂಪರ್...

dc hosapete
Homeಸುದ್ದಿಗಳು

ನಿರ್ಲಕ್ಷ್ಯ ತೋರಿದರೆ ಕಠಿಣ ಕ್ರಮ – ಕವಿತಾ ಎಸ್. ಮನ್ನಿಕೇರಿ ಖಡಕ್ ಎಚ್ಚರಿಕೆ

ಹೊಸಪೇಟೆ (ವಿಜಯನಗರ): ಜಿಲ್ಲೆಯಲ್ಲಿ ಕುಂಠಿತಗೊಂಡಿರುವ 7ನೇ ಸಣ್ಣ ನೀರಾವರಿ ಹಾಗೂ 2ನೇ ಜಲಮೂಲಗಳ ಗಣತಿಯನ್ನು ಸರ್ಕಾರದ...

harapanahallipdo
ಸುದ್ದಿಗಳು

ಪಂಚಾಯತ್ ಇಲಾಖೆ ನೌಕರರ ಸಂಘಕ್ಕೆ ಆಯ್ಕೆ

ಹರಪನಹಳ್ಳಿ :  ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಇಲಾಖೆಯ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷರಾಗಿ ಹಲವಾಗಲು...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.