Home ಕೃಷಿ ಹರಪನಹಳ್ಳಿಯಲ್ಲಿ ವೀಕೆಂಡ್ ಬಿರುಗಾಳಿ ಮಳೆಯ ಆರ್ಭಟ: ತತ್ತರಿಸಿದ ಹಳ್ಳಿಗಳು!
ಕೃಷಿ

ಹರಪನಹಳ್ಳಿಯಲ್ಲಿ ವೀಕೆಂಡ್ ಬಿರುಗಾಳಿ ಮಳೆಯ ಆರ್ಭಟ: ತತ್ತರಿಸಿದ ಹಳ್ಳಿಗಳು!

Share
RAIN DAMAGES
Share

ಹರಪನಹಳ್ಳಿ: ತಾಲ್ಲೂಕಿನಲ್ಲಿ ಶನಿವಾರ ಸಂಜೆ ದಿಢೀರ್‌ ಅಪ್ಪಳಿಸಿದ ರಭಸದ ಬಿರುಗಾಳಿ ಮತ್ತು ಧಾರಾಕಾರ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಬಿರುಗಾಳಿಯ ಹೊಡೆತಕ್ಕೆ 50ಕ್ಕೂ ಹೆಚ್ಚು ಮನೆಗಳು ಜಖಂಗೊಂಡಿದ್ದು, ನೂರಾರು ಮರಗಳು ಹಾಗೂ ವಿದ್ಯುತ್‌ ಕಂಬಗಳು ಧರೆಗುರುಳಿ ಹತ್ತಾರು ಹಳ್ಳಿಗಳು ಕತ್ತಲಲ್ಲಿ ಮುಳುಗಿವೆ.

ಬೆಂಡಿಗೇರೆ ಸಣ್ಣ ತಾಂಡಾ: ಇಲ್ಲಿ ಗಾಳಿ-ಮಳೆಯ ಆರ್ಭಟಕ್ಕೆ 25ಕ್ಕೂ ಹೆಚ್ಚು ಮನೆಗಳಿಗೆ ತೀವ್ರ ಹಾನಿಯಾಗಿದೆ. ಮನೆಯೊಂದರ ಮೇಲೆ ಬೃಹತ್ ಜಾಲಿಮರ ಉರುಳಿಬಿದ್ದಿದ್ದು, ಮನೆ ಮಂದಿಯೆಲ್ಲಾ ತಕ್ಷಣ ಹೊರಗೆ ಓಡಿ ಬಂದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಗುಂಡಗತ್ತಿ ಮತ್ತು ಶೃಂಗಾರತೋಟ: ರಸ್ತೆಗೆ ಬೃಹತ್ ಬೇವಿನ ಮರ ಉರುಳಿ ವಾಹನ ಸಂಚಾರ ಬಂದ್ ಆಗಿತ್ತು. ಹಲವು ಮನೆಗಳ ಮೇಲ್ಛಾವಣಿಯ ಶೀಟ್‌ಗಳು ಗಾಳಿಯ ರಭಸಕ್ಕೆ ಹಾರಿಹೋಗಿವೆ. ಮಳೆ ಶುರುವಾಗುತ್ತಿದ್ದಂತೆ ಬೆಸ್ಕಾಂ ಸಿಬ್ಬಂದಿ ಪವರ್ ಕಟ್ ಮಾಡಿದ್ದರಿಂದ ದೊಡ್ಡ ಮಟ್ಟದ ವಿದ್ಯುತ್ ಅವಘಡ ತಪ್ಪಿದೆ.

ಕಂಚಿಕೆರೆ ರಸ್ತೆ: ರಸ್ತೆಗೆ ಮರ ಬಿದ್ದು ಪ್ರಯಾಣಿಕರು ಪರದಾಡುತ್ತಿದ್ದಾಗ, ಪೊಲೀಸರೇ ಖುದ್ದಾಗಿ ನಿಂತು ಸಾರ್ವಜನಿಕರ ಸಹಾಯದೊಂದಿಗೆ ಮರದ ಕೊಂಬೆಗಳನ್ನು ತೆರವುಗೊಳಿಸಿ ಸಂಚಾರ ಸುಗಮಗೊಳಿಸಿದರು. ಬಾಗಳಿ, ಹಳ್ಳಿಕೇರಿ, ಸತ್ತೂರು, ಚೌಡಾಪುರ ಸೇರಿದಂತೆ ಸುತ್ತಮುತ್ತಲಿನ ಹಳ್ಳಿಗಳಲ್ಲೂ ವಿದ್ಯುತ್ ಕಂಬಗಳು ಮುರಿದು ಬಿದ್ದಿದ್ದು, ಗ್ರಾಮಸ್ಥರು ರಾತ್ರಿಯಿಡೀ ಕತ್ತಲಲ್ಲೇ ಕಾಲ ಕಳೆಯುವಂತಾಗಿದೆ.

Share

Leave a comment

Leave a Reply

Your email address will not be published. Required fields are marked *

Related Articles
myduru formers
Homeಕೃಷಿ

400 ಕೆವಿ ವಿದ್ಯುತ್ ಗೋಪುರ ನಿರ್ಮಾಣಕ್ಕೆ ರೈತರ ತೀವ್ರ ವಿರೋಧ 

ಹರಪನಹಳ್ಳಿ: ಜಮೀನುಗಳಲ್ಲಿ 400 ಕೆವಿ ವಿದ್ಯುತ್ ಟವರ್ (ಗೋಪುರ) ನಿರ್ಮಿಸುವ ಸರ್ಕಾರದ ಯೋಜನೆಗೆ ಹರಪನಹಳ್ಳಿ ಹಾಗೂ...

sunflower
ಕೃಷಿಸುದ್ದಿಗಳು

ವಿಜಯನಗರ ಜಿಲ್ಲೆಯ ಎಲ್ಲೆಲ್ಲಿ ಸೂರ್ಯಕಾಂತಿ ಖರೀದಿಸುತ್ತಾರೆ ?

ವಿಜಯನಗರ (ಹೊಸಪೇಟೆ) :   ರಾಜ್ಯ ಸರ್ಕಾರ ಬೆಂಬಲ ಬೆಲೆ ಯೋಜನೆಯಡಿ ಜಿಲ್ಲೆಯಾದ್ಯಂತ ಪ್ರಸಕ್ತ ಸಾಲಿನ ಹಿಂಗಾರು...

kodihalli bheemanna
ಕೃಷಿ

ಪಕ್ಷಿಗಳಿಗೆ ನೀರುಣಿಸುವ ಕಾಯಕ ಮಾದರಿ : ಕೋಡಿಹಳ್ಳಿ ಭೀಮಪ್ಪ

ಹರಪನಹಳ್ಳಿ: ಜೆಸಿಐ ಸಂಸ್ಥೆಯು ಮರಗಿಡಗಳಲ್ಲಿ ಮಡಿಕೆಗಳನ್ನು ಕಟ್ಟಿ ಪಕ್ಷಿಗಳಿಗೆ ನೀರುಣಿಸುವ ಕಾಯಕದಲ್ಲಿ ತೊಡಗಿರುವುದು ಅತ್ಯಂತ ಮಾದರಿಯಾಗಿದೆ....

harapanahalli-silk-farmers-equipment-smart-card-distribution-latha-mallikarjun
ಕೃಷಿ

ರೇಷ್ಮೆ ಬೆಳೆಗಾರರಿಗೆ ಸಲಕರಣೆ, ಸ್ಮಾರ್ಟ್ ಕಾರ್ಡ್ ವಿತರಣೆ

ಹರಪನಹಳ್ಳಿ : ತಾಲ್ಲೂಕಿನಲ್ಲಿ ರೇಷ್ಮೆ ಕೃಷಿ ಲಾಭದಾಯಕವಾಗಿ ಬೆಳೆಯುತ್ತಿದ್ದು, ಬೆಳೆಗಾರರಿಗೆ ಅಗತ್ಯ ಪ್ರೋತ್ಸಾಹ ನೀಡಲು ಸರ್ಕಾರ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.