Home ದೇಶದ ಬದಲಾವಣೆಯಲ್ಲಿ ಪತ್ರಕರ್ತರ ಪಾತ್ರ ದೊಡ್ಡದು : ಕೋಡಿಹಳ್ಳಿ ಭೀಮಪ್ಪ
Homeಸುದ್ದಿಗಳು

ದೇಶದ ಬದಲಾವಣೆಯಲ್ಲಿ ಪತ್ರಕರ್ತರ ಪಾತ್ರ ದೊಡ್ಡದು : ಕೋಡಿಹಳ್ಳಿ ಭೀಮಪ್ಪ

Share
vijaya vikrama
Share

ಹರಪನಹಳ್ಳಿ : ಪತ್ರಿಕೋದ್ಯಮದಲ್ಲಿ ನಿಷ್ಠೆ, ಧೈರ್ಯ ಮತ್ತು ಪ್ರಾಮಾಣಿಕತೆ ಇದ್ದರೆ ಸಮಾಜದ ದಿಕ್ಕು ಬದಲಾಯಿಸಲು ಸಾಧ್ಯವಾಗುತ್ತದೆ ಎಂದು ಪ್ರಗತಿಪರ ಮುಖಂಡ ಕೋಡಿಹಳ್ಳಿ ಭೀಮಪ್ಪ ತಿಳಿಸಿದರು.

ನಗರದ ತಾಲ್ಲೂಕು ಪಂಚಾಯಿತಿ ಆವರಣದಲ್ಲಿರುವ ಸಾಮರ್ಥ್ಯ ಸೌಧದಲ್ಲಿ ವಿಜಯ  ವಿಕ್ರಮ ಪತ್ರಿಕೆ ಬಳಗ ಸೋಮವಾರ ಹಮ್ಮಿಕೊಂಡಿದ್ದ ಪತ್ರಿಕೆ ಬಿಡುಗಡೆ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಪತ್ರಕರ್ತರು ಪ್ರಶ್ನಿಸುವ ಗುಣ ಮತ್ತು ಸಮಸ್ಯೆ ಎದುರಿಸುವ ಸಾಮರ್ಥ್ಯ ಹೆಚ್ಚಿಸಿಕೊಳ್ಳಬೇಕು. ಹೆಚ್ಚು ಅಧ್ಯಯನ ಶೀಲರಾದರೆ ಮಾತ್ರ ದೇಶದ ಸಮಸ್ಯೆಗಳನ್ನು ಸರ್ಕಾರದ ಗಮನ ಸೆಳೆಯಲು ಸಾಧ್ಯವಾಗುತ್ತದೆ. ಇಂತಹ ಜನಪರವಾಗಿ ಕೆಲಸ ಮಾಡುವ ಪತ್ರಿಕೆ, ಸಂಘಟನೆಗಳನ್ನು ಪ್ರತಿಯೊಬ್ಬರು ಬೆಂಬಲಿಸುವ ಅಗತ್ಯವಿದೆ ಎಂದು ಸಲಹೆ ನೀಡಿದರು.

ದೇಶದ ಕಾನೂನಿನ ಮೇಲೆ ಜನ ಅಪಾರ ನಂಬಿಕೆಯಿಟ್ಟಿದ್ದಾರೆ. ಕಾನೂನು ಪಾಲಕರು ತಾರತಮ್ಯ ಎಸಗಿದಾಗ ಅದನ್ನು ಪ್ರಶ್ನಿಸುವ ಎದೆಗಾರಿಕೆ ಪತ್ರಕರ್ತರಿಗೆ ಮಾತ್ರ ಇರುತ್ತದೆ. ಅವರಂತೆ ಜನಸಾಮಾನ್ಯರು ಪ್ರಶ್ನಿಸುವ ಗುಣ ಬೆಳೆಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು. ಬ್ಲಾಕ ಕಾಂಗ್ರೆಸ್ ಅಧ್ಯಕ್ಷ ಎಂ.ವಿ.ಅಂಜಿನಪ್ಪ ಮಾತನಾಡಿ, ಪತ್ರಿಕಾ ಕ್ಷೇತ್ರದಲ್ಲಿ ಕೆಲಸ ಮಾಡುವವರಿಗೆ ಯಾವುದೇ ಸಂಬಳ ಇರುವುದಿಲ್ಲ,  ಸಮಾಜದಲ್ಲಿ ಅನ್ಯಾಯದ ವಿರುದ್ದ ಹೋರಾಡುವ ಕೆಲಸವನ್ನು ಮಾಧ್ಯಮದವರು ಮಾಡಬೇಕು ಎಂದರು.

ನೀಲಗುಂದ ಗುಡ್ಡದ ವಿರಕ್ತಮಠದ ಚೆನ್ನಬಸವ ಶಿವಯೋಗಿ ಸ್ವಾಮೀಜಿ, ಬೆಣ್ಣಿಹಳ್ಳಿ ಹಿರಮೇಠದ ಪಂಚಾಕ್ಷರ ಸ್ವಾಮೀಜಿ, ಮುತ್ತಿಗಿ ಶಿವಯೋಗಿ ಅಜ್ಜಯ್ಯ ಹಾಲಸ್ವಾಮೀಜಿ ಸಾನ್ನಿಧ್ಯವಹಿಸಿದ್ದರು. ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ವೈ.ಡಿ.ಅಣ್ಣಪ್ಪ, ವಕೀಲರ ಸಂಘದ ಅಧ್ಯಕ್ಷ ಟಿ.ವೆಂಕಟೇಶ್ , ಪುರಸಭೆ ಮಾಜಿ ಅಧ್ಯಕ್ಷ ಡಿ.ಅಬ್ದುಲ್ ರೆಹಮಾನ್, ವಿಜಯ ವಿಕ್ರಮ ಪತ್ರಿಕೆ ಸಂಪಾದಕ ಹೆಚ್.ರಮೇಶನಾಯ್ಕ ಮಾತನಾಡಿದರು. ಮುಖಂಡರಾದ ಪಟೇಲ್ ಬೆಟ್ಟನಗೌಡ, ಶಶಿಧರ ಪೂಜಾರ, ಹೊಸಳ್ಳಿ ಮಲ್ಲೇಶ, ಇಸ್ಮಾಯಿಲ್ ಎಲಿಗಾರ, ರುದ್ರಪ್ಪ ಕಾನಹಳ್ಳಿ. ತಿಮ್ಮನಾಯ್ಕ, ಮಂಜುನಾಥ್ ಕಣವಿಹಳ್ಳಿ, ಕೆ. ಕೆಂಚಪ್ಪ, ನೂರುದ್ದಿನ್, ಹಲಗಿ ಸುರೇಶ, ಎಲ್.ಪ್ರಕಾಶನಾಯ್ಕ, ತಿಮ್ಮನಾಯ್ಕ, ವೆಂಕಟೇಶ, ಕೆ.ಉಚ್ಚೆಂಗೆಪ್ಪಮ ಹೆಚ್.ವಸಂತಪ್ಪ ಇತರರಿದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಹರಪನಹಳ್ಳಿ : ತಾಲ್ಲೂಕು ಮಟ್ಟದ ಪ್ರಜಾಸೇವೆ ಆಂದೋಲನ 

ಪ್ರಜಾಸೇವ ಆಂದೋಲನ ಜನರ ಹೃದಯಕ್ಕೆ ಮುಟ್ಟುವಂತಿರಲಿ ಹರಪನಹಳ್ಳಿ :  ಹಿಂದೆ ತಮ್ಮ ಸಮಸ್ಯೆಗಳಿಗೆ ಪರಿಹಾರ ದೊರೆಯುವ ಭರವಸೆಯಿಲ್ಲದೆ...

Homeಸುದ್ದಿಗಳು

ಬಾಲಕನ ಕೊಲೆಗೈದ ಆರೋಪಿಗೆ ಜೀವಾವಧಿ ಶಿಕ್ಷೆ 

ಹೊಸಪೇಟೆ (ವಿಜಯನಗರ ಜಿಲ್ಲೆ ) : ಏಳು ವರ್ಷದ ಬಾಲಕನನ್ನು ಅಪಹರಿಸಿ ಕಾಲುವೆಗೆ ಎಸೆದು ಕೊಲೆ...

Homeಸುದ್ದಿಗಳು

ಜೆಡಿಎಸ್ ಅಧ್ಯಕ್ಷರಾಗಿ ವಿ. ಮಲ್ಕಪ್ಪ ಆಯ್ಕೆ

ಹರಪನಹಳ್ಳಿ : ತಾಲ್ಲೂಕು ಜಾತ್ಯಾತೀತ ಜನತಾದಳದ (ಜೆಡಿಎಸ್) ನೂತನ ಅಧ್ಯಕ್ಷರಾಗಿ ತಾವರೆಗೊಂದಿ ಗ್ರಾಮದ ವಿ. ಮಲ್ಕಪ್ಪ...

Homeಸುದ್ದಿಗಳು

ಮಕ್ಕಳಿಗೆ ವಿದ್ಯೆಯೊಂದಿಗೆ ಉತ್ತಮ ಸಂಸ್ಕಾರ ನೀಡುವ ಹೊಣೆ ಎಲ್ಲರದ್ದು: ಪ್ರಾಂಶುಪಾಲ ಡಾ. ಎಂ. ಸುರೇಶ್

ಹರಪನಹಳ್ಳಿ : 'ಇಂದಿನ ಮಕ್ಕಳಿಗೆ ವಿದ್ಯೆಯ ಜೊತೆಗೆ ಉತ್ತಮ ಸಂಸ್ಕಾರವನ್ನು ನೀಡುವ ಹೊಣೆಯನ್ನು ಪ್ರತಿಯೊಬ್ಬರೂ ಹೊರಬೇಕು'...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.