Home ಆರೋಗ್ಯ ಹರಪನಹಳ್ಳಿ : ಪರಿಸರ ದಿನಾಚರಣೆಯ ಸಂಭ್ರಮ
ಆರೋಗ್ಯಕೃಷಿ

ಹರಪನಹಳ್ಳಿ : ಪರಿಸರ ದಿನಾಚರಣೆಯ ಸಂಭ್ರಮ

Share
Share
ಹರಪನಹಳ್ಳಿ: ಪರಿಸರವೇ ನಮ್ಮ ಜೀವನದ ಆಧಾರ. ಮರಗಳು, ನೀರು, ಗಾಳಿ ಮತ್ತು ಪ್ರಕೃತಿಯನ್ನು ಸಂರಕ್ಷಿಸುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು ಭೂಗೋಳ ಶಾಸ್ತ್ರದ ಉಪನ್ಯಾಸಕ ಹೆಚ್. ಶಿವಾನಂದ ಹೇಳಿದರು.

ಪಟ್ಟಣದ ಎಚ್ ಪಿ ಎಸ್ ಪದವಿ ಪೂರ್ವ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ “ವಿಶ್ವ ಪರಿಸರ ದಿನಾಚರಣೆಯ”ಕಾರ್ಯಕ್ರಮವನ್ನುಸಸಿ ನೆಟ್ಟು ಅವರು ಮಾತನಾಡುತ್ತಾ
ಪ್ರತಿ ವರ್ಷ ಜೂನ್ 5ರಂದು ವಿಶ್ವ ಪರಿಸರ ದಿನವನ್ನು ಆಚರಿಸಲಾಗುತ್ತದೆ. ಪರಿಸರ ಸಂರಕ್ಷಣೆಯ ಮಹತ್ವವನ್ನು ಜನರಿಗೆ ಅರಿವು ಮೂಡಿಸುವ ಉದ್ದೇಶದಿಂದ ಈ ದಿನವನ್ನು ಆಚರಿಸಲಾಗುತ್ತದೆ.
ಪರಿಸರವು ನಮ್ಮ ಜೀವನದ ಆಧಾರವಾಗಿದೆ. ಗಾಳಿ, ನೀರು, ಮಣ್ಣು, ಮರಗಳು ಹಾಗೂ ಜೀವಜಾಲಗಳು ಪರಿಸರದ ಅವಿಭಾಜ್ಯ ಅಂಗಗಳಾಗಿವೆ. ಆದರೆ ಇಂದು ಮಾನವನ ಅತಿಯಾದ ಚಟುವಟಿಕೆಗಳಿಂದ ಪರಿಸರ ಮಾಲಿನ್ಯ ಹೆಚ್ಚುತ್ತಿದೆ. ಅರಣ್ಯನಾಶ, ಪ್ಲಾಸ್ಟಿಕ್ ಬಳಕೆ, ಕೈಗಾರಿಕಾ ತ್ಯಾಜ್ಯ ಮತ್ತು ವಾಹನಗಳಿಂದ ಹೊರಬರುವ ಹೊಗೆ ಪರಿಸರಕ್ಕೆ ಹಾನಿಯನ್ನು ಉಂಟುಮಾಡುತ್ತಿವೆ.
ಪರಿಸರವನ್ನು ರಕ್ಷಿಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಶಿವಗಂಗಮ್ಮ. ಪಿ ಮಾತನಾಡಿ ನಾವು ಹೆಚ್ಚು ಮರಗಳನ್ನು ನೆಡಬೇಕು, ನೀರನ್ನು ಮಿತವಾಗಿ ಬಳಸಬೇಕು, ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡಬೇಕು ಮತ್ತು ಸ್ವಚ್ಛತೆಯನ್ನು ಕಾಪಾಡ ಬೇಕು,
“ಇಂದಿನ ಪರಿಸರ ಸಂರಕ್ಷಣೆ, ನಾಳಿನ ಸುಂದರ ಭವಿಷ್ಯಕ್ಕೆ ಭದ್ರ ಅಡಿಪಾಯ” ಎಂಬುದನ್ನು ನಾವು ನೆನಪಿನಲ್ಲಿಡಬೇಕು. ಹಸಿರು
ಪರಿಸರ ನಿರ್ಮಾಣಕ್ಕಾಗಿ ಎಲ್ಲರೂ ಕೈಜೋಡಿಸೋಣ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಉಪಸ್ಥಿತಿ ಉಪನ್ಯಾಸಕರಾದ ಬಸವರಾಜ್ ಸಿ.ಎಸ್, ಕೆ.ಬಿ ರವೀಂದ್ರ, ವೀರೇಶ್ ಎಂ.ಎಸ್, ಎಂ.ಬಿ ಗೌಡರ, ಸಂತೋಷ್ ಎಂ.ಇ, ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿಗಳಾದ ಮಂಜುನಾಥ್ ಮಾಳ್ಗಿ, ಗುರುಬಸವರಾಜ್. ಹೆಚ್, ಶಂಕ್ರಪ್ಪ ಹೆಚ್ , ನರೇಂದ್ರ.ಎಸ್,ಶ್ವೇತ ಎಂ.ಬಿ, ಅವಿನಾಶ್ ಡಿ.ಬಿ, ಮತ್ತಿತರರು ಉಪಸ್ಥಿತರಿದ್ದರು.
Share

Leave a comment

Leave a Reply

Your email address will not be published. Required fields are marked *

Related Articles
Homeಕೃಷಿ

ಹರಪನಹಳ್ಳಿ ತಾಲ್ಲೂಕನ್ನು ಬರಪೀಡಿತ ಎಂದು ಘೋಷಿಸಲು ಆಗ್ರಹಿಸಿ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ

ಹರಪನಹಳ್ಳಿ : ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲ್ಲೂಕನ್ನು ಬರಪೀಡಿತ ತಾಲ್ಲೂಕು ಎಂದು ಘೋಷಿಸಬೇಕು ಎಂದು ಆಗ್ರಹಿಸಿ...

Homeಕೃಷಿ

ಜಿಲ್ಲೆಯಲ್ಲಿ ಭೀಕರ ಬರಛಾಯೆ: ಬರ ಅಧ್ಯಯನಕ್ಕೆ ಅಖಾಡಕ್ಕಿಳಿದ ಜಿಲ್ಲಾಧಿಕಾರಿ ಕವಿತಾ ಮನ್ನಿಕೇರಿ

ವಿಜಯನಗರ(ಹೊಸಪೇಟೆ) : ಮುಂಗಾರು ಕೈಕೊಟ್ಟ ಹಿನ್ನೆಲೆಯಲ್ಲಿ  ಜಿಲ್ಲೆಯಾದ್ಯಂತ ಬರ ಹಾಗೂ ಮಳೆ ಅಭಾವದ ಛಾಯೆ ಆವರಿಸಿದೆ....

Homeಕೃಷಿ

ತುಂಗಭದ್ರ ಜಲಾಶಯದ ನೀರು ಕೇವಲ ಕುಡಿಯಲು ಮಾತ್ರ  ರೈತರು ಪರ್ಯಾಯ ಬೆಳೆ ಆಶ್ರಯಿಸಿ : ಡಿಸಿ ಮನವಿ

ವಿಜಯನಗರ (ಹೊಸಪೇಟೆ) : ಮುಂಗಾರು ಮಳೆಯ ಕೊರತೆಯ ಹಿನ್ನೆಲೆಯಲ್ಲಿ ಜಲಾಶಯದ ನೀರಿನ ಮಟ್ಟ ಕ್ಷೀಣಿಸುತ್ತಿದೆ ಜನ...

Homeಆರೋಗ್ಯ

ಸ್ಟಾರ್ ಹೆಲ್ತ್ ಉಚಿತ ವೈದ್ಯಕೀಯ ಸಲಹೆ

ದಾವಣಗೆರೆ : ದೇಶದ ಪ್ರಮುಖ ಆರೋಗ್ಯ ವಿಮೆ ಸಂಸ್ಥೆಗಳಲ್ಲಿ ಒಂದಾಗಿರುವ ಸ್ಟಾರ್ ಹೆಲ್ತ್ ಅಂಡ್ ಅಲೈಡ್...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.