Home ಆಶ್ರಯ ಯೋಜನೆ – ಆವಧಿ ವಿಸ್ತರಣೆ
Homeಸುದ್ದಿಗಳು

ಆಶ್ರಯ ಯೋಜನೆ – ಆವಧಿ ವಿಸ್ತರಣೆ

Share
Share

ದಾವಣಗೆರೆ : 2025-26 ನೇ ಸಾಲಿನ ಪ್ರಧಾನ ಮಂತ್ರಿ ಆವಾಸ್ (ನಗರ) 2.0 ಯೋಜನೆಯಡಿ ನಿವೇಶನ ಮತ್ತು ವಸತಿ ರಹಿತ ಫಲಾನುಭವಿಗಳ ಅರ್ಜಿಗಳನ್ನು ಸಲ್ಲಿಸಲು ಜೂನ್‌ 30 ರವರೆಗೆ ಅವಧಿಯನ್ನು ವಿಸ್ತರಿಸಲಾಗಿದೆ.

ದಾವಣಗೆರೆ ಮಹಾ ನಗರಪಾಲಿಕೆ ವ್ಯಾಪ್ತಿಯಲ್ಲಿನ ಅರ್ಹ ನಿವೇಶನ ಹಾಗೂ ವಸತಿ ರಹಿತ ಅಂಗವಿಕಲರು, ಹಿರಿಯ ನಾಗರಿಕರು, ಒಂಟಿ ಮಹಿಳೆಯರು, ಪರಿಶಿಷ್ಟ ಜಾತಿ ಮತ್ತು ಪಂಗಡದವರು, ಹಿಂದುಳಿದ, ಅಲ್ಪಸಂಖ್ಯಾತ ವರ್ಗದವರು, ತೃತೀಯ ಲಿಂಗಿಗಳು, ಸ್ವಚ್ಛತಾ ಕಾರ್ಮಿಕರು,  (ಪಿ ಎಂ -ಸ್ವ ನಿಧಿ )ಯೋಜನೆಯಡಿ ಗುರುತಿಸಲ್ಪಟ್ಟ ಬೀದಿ ವ್ಯಾಪಾರಿಗಳು ಮತ್ತು ಪ್ರಧಾನ ಮಂತ್ರಿ ವಿಶ್ವ ಕರ್ಮ ಯೋಜನೆಯಡಿ ಗುರುತಿಸಿದ ಕುಶಲಕರ್ಮಿಗಳು, ಅಂಗನವಾಡಿ ಕಾರ್ಯಕರ್ತರು, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಹಾಗೂ ವಲಸೆ ಬಂದ ಕುಟುಂಬದವರು  ಅಗತ್ಯ ದಾಖಲೆಗಳೊಂದಿಗೆ ತಮ್ಮ ಅರ್ಜಿಗಳನ್ನು http://pmayurban.gov.in ಆನ್ಲೈನ್ ವೆಬ್ ಸೈಟ್ ನಲ್ಲಿ ಸಲ್ಲಿಸಬಹುದು.

ಅಥವಾ ಖುದ್ದಾಗಿ ಮಹಾನಗರ ಪಾಲಿಕೆಯ ಆಶ್ರಯ ಶಾಖೆಗೆ ಭೇಟಿ ನೀಡಿ ಮಾಹಿತಿಯನ್ನು ಪಡೆದು ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಬಹುದು ಎಂದು ದಾವಣಗೆರೆ ಮಹಾನಗರ ಪಾಲಿಕೆ ಆಯುಕ್ತರಾದ  ಡಾ.ಮಹಾಂತೇಶ್‌ ಅವರು ತಿಳಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ರೋಗನಿರೋಧಕ ಶಕ್ತಿ ಹೆಚ್ಚಿಸಲು ತಾಯಿಯ ಎದೆಹಾಲು ಅತ್ಯಗತ್ಯ: ಡಿಹೆಚ್‌ಒ ಡಾ.ಟಿ.ಲಿಂಗರಾಜು

ವಿಜಯನಗರ (ಹೊಸಪೇಟೆ) : ಸ್ತನ್ಯಪಾನ ಮಾಡುವುದು ತಾಯಿ ಹಾಗೂ ಮಗುವಿನ ಆರೋಗ್ಯದ ದೃಷ್ಟಿಯಿಂದ ಅತ್ಯಂತ ಬಹುಮುಖ್ಯವಾಗಿದೆ....

Homeಸುದ್ದಿಗಳು

ಸಂಪುಟ ವಿಸ್ತರಣೆ ಕೌತುಕಕ್ಕೆ ಇಂದು ತೆರೆ: ಸಂಜೆ ರಾಜಭವನದಲ್ಲಿ 20 ನೂತನ ಸಚಿವರ ಪದಗ್ರಹಣ

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಸಚಿವ ಸಂಪುಟ ವಿಸ್ತರಣೆ ಕಸರತ್ತಿಗೆ ಕೊನೆಗೂ...

Homeಶಿಕ್ಷಣ

ಬಿ.ಐ.ಇ.ಟಿ. ಯಲ್ಲಿ ನೈಲಿಟ್‌ನ 90 ಗಂಟೆಗಳ ‘ಚಿಪ್‌ಕ್ರಾಫ್ಟ್’ ಸೆಮಿಕಂಡಕ್ಟರ್ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ

ದಾವಣಗೆರೆ : ಬಾಪೂಜಿ ಇಂಜಿನಿಯರಿಂಗ್  ಮತ್ತು ತಾಂತ್ರಿಕ ಮಹಾವಿದ್ಯಾಲಯ ಸಂಸ್ಥೆಯ ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಷನ್ ಇಂಜಿನಿಯರಿಂಗ್...

Homeಸುದ್ದಿಗಳು

ನರೇಗಾ ಮಾದರಿ ಕಾಮಗಾರಿ ಮರುಸ್ಥಾಪನೆಗೆ ಆಗ್ರಹ

ಹರಪನಹಳ್ಳಿ : ಹೊಸದಾಗಿ ಜಾರಿಗೆ ತಂದಿರುವ ವಿಬಿಜಿ ರಾಮ್‍ಜಿ ಕಾಯ್ದೆಯಡಿ ಹಳೆಯ ನರೇಗಾ ಮಾದರಿ ಕಾಮಗಾರಿಗಳನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸಿ ಗ್ರಾಮೀಣ ಕೂಲಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.