ಹರಪನಹಳ್ಳಿ : ತಾಲೂಕು ಪಂಚಮಸಾಲಿ ಲಿಂಗಾಯತ ನೌಕರರ ಸಂಘದ ವತಿಯಿಂದ ಆಯೋಜಿಸಲಾಗಿದ್ದ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಹಾಗೂ ನಿವೃತ್ತ ನೌಕರರ ಸನ್ಮಾನ ಕಾರ್ಯಕ್ರಮವನ್ನು ಜೂನ್ 28ಕ್ಕೆ ಮುಂದೂಡಲಾಗಿದೆ.ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸಂಘದ ಅಧ್ಯಕ್ಷರಾದ ಶಿಕ್ಷಕ ಗೌಡ್ರು ಕರಿಬಸಪ್ಪ ಅವರ ನೇತೃತ್ವದಲ್ಲಿ ಜೂನ್ 14ರಂದು ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
2025-26ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇಕಡ 90ಕ್ಕಿಂತ ಹೆಚ್ಚು ಹಾಗೂ ಪಿಯುಸಿಯಲ್ಲಿ ಶೇಕಡ 85ಕ್ಕಿಂತ ಹೆಚ್ಚು ಅಂಕ ಪಡೆದ ಪಂಚಮಸಾಲಿ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ನಿವೃತ್ತ ನೌಕರರಿಗೆ ಸನ್ಮಾನ ಕಾರ್ಯಕ್ರಮವನ್ನು ಈ ಹಿಂದೆ ಜೂನ್ 21ರಂದು ನಡೆಸಲು ನಿಗದಿಪಡಿಸಲಾಗಿತ್ತು.
ಆದರೆ, ಅಂದು ಅಂತರರಾಷ್ಟ್ರೀಯ ಯೋಗ ದಿನಾಚರಣೆ ಹಾಗೂ ‘ನೀಟ್’ (NEET) ಪರೀಕ್ಷೆಗಳು ಇರುವುದರಿಂದ, ವಿದ್ಯಾರ್ಥಿಗಳು ಹಾಗೂ ಪೋಷಕರ ಅನುಕೂಲಕ್ಕಾಗಿ ಕಾರ್ಯಕ್ರಮವನ್ನು ಜೂನ್ 28ರ ಭಾನುವಾರ ಬೆಳಿಗ್ಗೆ 10 ಗಂಟೆಗೆ ಪಟ್ಟಣದ ಹರಿಹರ ವೃತ್ತದಲ್ಲಿರುವ ನಟರಾಜ ಕಲಾಭವನದಲ್ಲಿ ಹಮ್ಮಿಕೊಳ್ಳಲು ಸಭೆಯಲ್ಲಿ ಸರ್ವಾನುಮತದಿಂದ ತೀರ್ಮಾನಿಸಲಾಗಿದೆ. ಸಮಾಜದ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಲಿಂಗಾಯತ ಪಂಚಮಸಾಲಿ ನೌಕರರ ಘಟಕವು ಪ್ರಕಟಣೆಯಲ್ಲಿ ಕೋರಿದೆ.
ನೋಂದಣಿಗೆ ಜೂನ್ 20 ಕಡೆಯ ದಿನ :
ಪ್ರತಿಭಾ ಪುರಸ್ಕಾರಕ್ಕೆ ಅರ್ಹರಿರುವ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳು ಹಾಗೂ ಸನ್ಮಾನ ಸ್ವೀಕರಿಸಲಿರುವ ನಿವೃತ್ತ ನೌಕರರು ತಮ್ಮ ಹೆಸರು ನೋಂದಾಯಿಸಿಕೊಳ್ಳಲು ಜೂನ್ 20 ಅಂತಿಮ ದಿನವಾಗಿದೆ. ಅರ್ಹರು ತಮ್ಮ ಸೂಕ್ತ ದಾಖಲೆಗಳೊಂದಿಗೆ ಕೆ. ವೀರಪ್ಪ (9008364936), ಮಂಜುನಾಥ ಗೌಡ್ರು (9902757475), ವಿಜಯಕುಮಾರ್ (9663924970) ಅಥವಾ ರವಿಕುಮಾರ್ ದೊಡ್ಡಮನಿ (8105745006) ಅವರನ್ನು ಸಂಪರ್ಕಿಸಿ ಮಾಹಿತಿ ನೀಡಬಹುದು ಎಂದು ತಿಳಿಸಲಾಗಿದೆ.
Leave a comment