Home ಮೈದೂರು ಗ್ರಾಮದಲ್ಲಿ ರೈತ ಧ್ವನಿ : ‘ಹಸಿರು ಸೇನೆ’ ನಾಮಫಲಕ ಉದ್ಘಾಟನೆ
Homeಕೃಷಿ

ಮೈದೂರು ಗ್ರಾಮದಲ್ಲಿ ರೈತ ಧ್ವನಿ : ‘ಹಸಿರು ಸೇನೆ’ ನಾಮಫಲಕ ಉದ್ಘಾಟನೆ

Share
Share

ಹರಪನಹಳ್ಳಿ:ತಾಲ್ಲೂಕಿನ ಮೈದೂರು ಗ್ರಾಮದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ನೂತನ ಗ್ರಾಮ ಘಟಕದ ನಾಮಫಲಕ ಉದ್ಘಾಟನಾ ಸಮಾರಂಭವು ಸಡಗರದಿಂದ ನೆರವೇರಿತು.ಉದ್ಘಾಟಿಸಿದ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಎನ್.ಭರಮಪ್ಪ ಮಾತನಾಡಿ, ರೈತರ ಸವಾಲುಗಳನ್ನು ಎದುರಿಸಲು ಮೈದೂರು ಗ್ರಾಮಕ್ಕೆ ಈಗ ಒಂದು ಮಿಲಿಟರಿ ಬಂದಿದೆ. ಆ ಮಿಲಿಟರಿಯ ಮತ್ತೊಂದು ಹೆಸರೇ ಹಸಿರು ಸೇನೆ ಎಂದರು.

ಕೃಷಿಕ ಸಮಾಜದ ರಾಜ್ಯ ಪ್ರತಿನಿಧಿ ಎಚ್. ಬಸವರಾಜ್ ಮಾತನಾಡಿ, ನೆಲ, ಜಲ ಮತ್ತು ರೈತರ ಹಕ್ಕುಗಳ ರಕ್ಷಣೆಗಾಗಿ ರೈತ ಸಂಘದ ಹೋರಾಟ ನಿರಂತರ ಆಗಿರುತ್ತದೆ ಎಂದರು. ಹಸಿರು ಶಾಲನ್ನು ಧರಿಸಿದ್ದ ನೂರಾರು ರೈತರು ಒಟ್ಟಾಗಿ ರೈತ ಸಂಘದ ತತ್ವ ಮತ್ತು ಆದರ್ಶಗಳಿಗೆ ಬದ್ಧರಾಗಿರುವುದಾಗಿ ಪ್ರತಿಜ್ಞೆ ಮಾಡಿದರು. ಕೃಷಿ ಸಾಲ ಮನ್ನಾ, ಸಮರ್ಪಕ ವಿದ್ಯುತ್ ಸರಬರಾಜು, ಬೆಳೆಗಳಿಗೆ ವೈಜ್ಞಾನಿಕ ಬೆಲೆ ಹಾಗೂ ನೀರಾವರಿ ಸೌಲಭ್ಯಗಳ ಕುರಿತು ಸಮಾರಂಭದಲ್ಲಿ ಸುದೀರ್ಘವಾಗಿ ಚರ್ಚಿಸಲಾಯಿತು.

ವೇದಿಕೆಯಲ್ಲಿ ಜಿಲ್ಲಾ ಕಾರ್ಯದರ್ಶಿ ಕೆ. ಮರುಳಸಿದ್ದಪ್ಪ, ಅಂಕಲಿ ರಾಮಣ್ಣ, ಎಂ. ಕೊಟ್ರೇಶ್, ಎನ್. ನಾಗರಾಜ್, ನಬಿಸಾಬ್, ಶ್ರೀಧರ್ ಒಡೆಯರ್, ಎಚ್. ಬಸವರಾಜ, ಜಿ. ನಿಂಗಪ್ಪ, ಎ. ಜಗದೀಶ್, ಎಂ. ರವಿ ಸೇರಿದಂತೆ ಹಲವು ಪ್ರಮುಖರು ಹಾಗೂ ಗ್ರಾಮದ ರೈತ ಬಾಂಧವರು ಉಪಸ್ಥಿತರಿದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಹರಪನಹಳ್ಳಿ : ತಾಲ್ಲೂಕು ಮಟ್ಟದ ಪ್ರಜಾಸೇವೆ ಆಂದೋಲನ 

ಪ್ರಜಾಸೇವ ಆಂದೋಲನ ಜನರ ಹೃದಯಕ್ಕೆ ಮುಟ್ಟುವಂತಿರಲಿ ಹರಪನಹಳ್ಳಿ :  ಹಿಂದೆ ತಮ್ಮ ಸಮಸ್ಯೆಗಳಿಗೆ ಪರಿಹಾರ ದೊರೆಯುವ ಭರವಸೆಯಿಲ್ಲದೆ...

Homeಸುದ್ದಿಗಳು

ಬಾಲಕನ ಕೊಲೆಗೈದ ಆರೋಪಿಗೆ ಜೀವಾವಧಿ ಶಿಕ್ಷೆ 

ಹೊಸಪೇಟೆ (ವಿಜಯನಗರ ಜಿಲ್ಲೆ ) : ಏಳು ವರ್ಷದ ಬಾಲಕನನ್ನು ಅಪಹರಿಸಿ ಕಾಲುವೆಗೆ ಎಸೆದು ಕೊಲೆ...

Homeಸುದ್ದಿಗಳು

ಜೆಡಿಎಸ್ ಅಧ್ಯಕ್ಷರಾಗಿ ವಿ. ಮಲ್ಕಪ್ಪ ಆಯ್ಕೆ

ಹರಪನಹಳ್ಳಿ : ತಾಲ್ಲೂಕು ಜಾತ್ಯಾತೀತ ಜನತಾದಳದ (ಜೆಡಿಎಸ್) ನೂತನ ಅಧ್ಯಕ್ಷರಾಗಿ ತಾವರೆಗೊಂದಿ ಗ್ರಾಮದ ವಿ. ಮಲ್ಕಪ್ಪ...

Homeಸುದ್ದಿಗಳು

ಮಕ್ಕಳಿಗೆ ವಿದ್ಯೆಯೊಂದಿಗೆ ಉತ್ತಮ ಸಂಸ್ಕಾರ ನೀಡುವ ಹೊಣೆ ಎಲ್ಲರದ್ದು: ಪ್ರಾಂಶುಪಾಲ ಡಾ. ಎಂ. ಸುರೇಶ್

ಹರಪನಹಳ್ಳಿ : 'ಇಂದಿನ ಮಕ್ಕಳಿಗೆ ವಿದ್ಯೆಯ ಜೊತೆಗೆ ಉತ್ತಮ ಸಂಸ್ಕಾರವನ್ನು ನೀಡುವ ಹೊಣೆಯನ್ನು ಪ್ರತಿಯೊಬ್ಬರೂ ಹೊರಬೇಕು'...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.