Home ಅಂತರರಾಷ್ಟ್ರೀಯ ಯೋಗ ದಿನಾಚರಣೆ
Homeಶಿಕ್ಷಣ

ಅಂತರರಾಷ್ಟ್ರೀಯ ಯೋಗ ದಿನಾಚರಣೆ

Share
Share

ಕಡಗಂಚಿಯ ಮೌಂಟ್ ಕಾರ್ಮೆಲ್ ಸಿಬಿಎಸ್ಇ ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ವ್ಯವಸ್ಥಾಪಕರಾದ ರೆ. ಫಾ. ಸಿಪ್ರಿಯನ್ ಫರ್ನಾಂಡಿಸ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಫಾ. ವಿಲಿಯಂ ಮಿರಾಂದ ಭಾಗವಹಿಸಿದ್ದರು. ಶಾಲೆಯ ಪ್ರಾಂಶುಪಾಲರಾದ ಫಾ. ಸಂದೀಪ್ ಗೋವಿಯಾಸ್, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಫಾ. ವಿಲಿಯಂ ಮಿರಾಂದ ಅವರು ಯೋಗದ ಉಗಮ, ಅದರ ಇತಿಹಾಸ ಹಾಗೂ ಇಂದಿನ ಜೀವನದಲ್ಲಿ ಯೋಗದ ಮಹತ್ವವನ್ನು ವಿವರಿಸಿದರು. ಯೋಗವು ದೈಹಿಕ, ಮಾನಸಿಕ ಮತ್ತು ಆಧ್ಯಾತ್ಮಿಕ ಆರೋಗ್ಯವನ್ನು ವೃದ್ಧಿಸುವುದರ ಜೊತೆಗೆ ಏಕಾಗ್ರತೆ, ಆತ್ಮವಿಶ್ವಾಸ ಮತ್ತು ಶಿಸ್ತು ಬೆಳೆಸಲು ಸಹಕಾರಿಯಾಗಿದೆ ಎಂದು ತಿಳಿಸಿದರು. ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ತಮ್ಮ ದೈನಂದಿನ ಜೀವನದಲ್ಲಿ ಯೋಗವನ್ನು ಅಳವಡಿಸಿಕೊಳ್ಳುವಂತೆ ಕರೆ ನೀಡಿದರು.

ನಂತರ ಶ್ರೀ ಶರಣಪ್ಪ ಸರ್ ಹಾಗೂ ಕೆಲವು ವಿದ್ಯಾರ್ಥಿಗಳು ವಿವಿಧ ಯೋಗಾಸನಗಳನ್ನು ಪ್ರದರ್ಶಿಸಿದರು. ಅವರ ಮಾರ್ಗದರ್ಶನದಲ್ಲಿ ಶಾಲೆಯ ಎಲ್ಲಾ ವಿದ್ಯಾರ್ಥಿಗಳು ಯೋಗಾಭ್ಯಾಸದಲ್ಲಿ ಸಕ್ರಿಯವಾಗಿ ಭಾಗವಹಿಸಿ ವಿವಿಧ ಆಸನಗಳನ್ನು ಅಭ್ಯಾಸ ಮಾಡಿದರು. ಕಾರ್ಯಕ್ರಮವು ಯೋಗದ ಮಹತ್ವದ ಬಗ್ಗೆ ಅರಿವು ಮೂಡಿಸುವುದರೊಂದಿಗೆ ಆರೋಗ್ಯಕರ ಜೀವನಶೈಲಿಯ ಸಂದೇಶವನ್ನು ಸಾರಿತು. ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿ ಕಾರ್ಯಕ್ರಮದ ಯಶಸ್ಸಿಗೆ ಕಾರಣರಾದರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ರಸ್ತೆ ನಿರ್ಮಾಣಕ್ಕೆ ಜಾಗ ತ್ಯಾಗ ಮಾಡಿದ ಗ್ರಾಮಸ್ಥರ ಋಣ ತೀರಿಸಲಾಗದು: ಶಾಸಕ ಹೆಚ್.ಆರ್. ಗವಿಯಪ್ಪ

ವಿಜಯನಗರ (ಹೊಸಪೇಟೆ) : ಊರಿನ ಸಾರ್ವಜನಿಕ ರಸ್ತೆ ನಿರ್ಮಾಣ ಹಾಗೂ ಮೂಲಸೌಕರ್ಯ ಅಭಿವೃದ್ಧಿಗಾಗಿ ತಮ್ಮ ಜಾಗ...

Homeಅಪರಾಧ

ಹರಪನಹಳ್ಳಿ: ನಕಲಿ ದಾಖಲೆ ಸೃಷ್ಟಿಸಿ 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಹರಪನಹಳ್ಳಿ : ನಕಲಿ ದಾಖಲೆ ಸೃಷ್ಟಿಸಿಕೊಂಡು ತನ್ನ ಹೆಸರಿಗೆ ಆಸ್ತಿ ಪತ್ರಗಳನ್ನು ಮಾಡಿಕೊಂಡು ಪರಾರಿಯಾಗಿದ್ದ 12...

Homeಸುದ್ದಿಗಳು

ಕೊಪ್ಪಳ : ಪ್ರತಿಭಾ ಪುರಸ್ಕಾರಕ್ಕೆ ಬನ್ನಿ

ಹರಪನಹಳ್ಳಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಹರಪನಹಳ್ಳಿ ತಾಲೂಕು ಘಟಕದ ವತಿಯಿಂದ 2026-27ನೇ ಸಾಲಿನ...

Homeಕೃಷಿ

ಹರಪನಹಳ್ಳಿ ತಾಲ್ಲೂಕನ್ನು ಬರಪೀಡಿತ ಎಂದು ಘೋಷಿಸಲು ಆಗ್ರಹಿಸಿ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ

ಹರಪನಹಳ್ಳಿ : ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲ್ಲೂಕನ್ನು ಬರಪೀಡಿತ ತಾಲ್ಲೂಕು ಎಂದು ಘೋಷಿಸಬೇಕು ಎಂದು ಆಗ್ರಹಿಸಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.