Home ಸಹಕಾರದಿಂದ ಮಾತ್ರ ಸಮೃದ್ಧಿ ಸಾಧ್ಯ
Homeಸುದ್ದಿಗಳು

ಸಹಕಾರದಿಂದ ಮಾತ್ರ ಸಮೃದ್ಧಿ ಸಾಧ್ಯ

Share
Share

ಹರಪನಹಳ್ಳಿ: ಕೇಂದ್ರ ಸರ್ಕಾರದ ಸಹಕಾರ ನೀತಿಯಂತೆ ದೇಶದ ಅಭಿವೃದ್ಧಿಯಲ್ಲಿ ಸಹಕಾರ
ಸಂಘಗಳ ಪಾತ್ರ ಮಹತ್ವದ್ದಾಗಿದ್ದು, ಸಹಕಾರದಿಂದ ಮಾತ್ರ ಸಮೃದ್ಧಿ ಹೊಂದಲು ಸಾಧ್ಯ ಎಂದು
ಅಟಲ್ ಪತ್ತಿನ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಓಂಕಾರಗೌಡ ಅಭಿಪ್ರಾಯಪಟ್ಟರು.

ನಗರದ ಎಚ್.ಪಿ.ಎಸ್. ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ  ಕರ್ನಾಟಕ ರಾಜ್ಯ ಸೌಹಾರ್ದ
ಸಂಯುಕ್ತ ಸಹಕಾರಿ ನಿಯಮಿತ, ತಾಲ್ಲೂಕು ಸೌಹಾರ್ದ ಸಹಕಾರಿಗಳು ಹಾಗೂ ಎಚ್.ಪಿ.ಎಸ್.ಕಾಲೇಜ್, ಎನ್.ಎಸ್.ಎಸ್. ಘಟಕದ ಸಹಯೋಗದಲ್ಲಿ ಶನಿವಾರ ಆಯೋಜಿಸಿದ್ದ ಸಹಕಾರ ಸಪ್ತಾಹ ಅಂಗವಾಗಿ ಯುವಜನ ಮತ್ತು ಸಹಕಾರ ಕುರಿತು ಸಂವಾದ, ರಸಪ್ರಶ್ನೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಭಾರತ ಸರ್ಕಾರದ ಸಹಕಾರ ಸಚಿವಾಲಯ ಪ್ರಾರಂಭಗೊಂಡು ಐದು ವರ್ಷ ಪೂರ್ಣಗೊಳಿಸಿದೆ.
ದೇಶದಲ್ಲಿ ಸಹಕಾರ ಚಳವಳಿಗೆ ತನ್ನದೇ ಆದ ಇತಿಹಾಸವಿದೆ. ಈ ಮೊದಲು ಕೃಷಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿದ್ದ ಸಹಕಾರ ಕ್ಷೇತ್ರಕ್ಕೆ 2021ರಲ್ಲಿ ಕೇಂದ್ರ ಸರ್ಕಾರ ಪ್ರತ್ಯೇಕ ಸಚಿವಾಲಯ ಒದಗಿಸುವ ಮೂಲಕ ಪೂರಕ ವಾತಾವರಣ ನಿರ್ಮಾಣ ಮಾಡಿದೆ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಪಿ. ಮಹಾಬಲೇಶ್ವರ ಗೌಡ ಮಾತನಾಡಿ, ಗ್ರಾಮೀಣ ಭಾಗದಲ್ಲಿ ಸಹಕಾರ ಸಂಘಗಳು ರೈತರ ಜೀವಾಳವಾಗಿವೆ. ಶೂನ್ಯ ಬಡ್ಡಿ ದರದಲ್ಲಿ ದೊರೆಯುವ ಕೃಷಿ ಸಾಲಗಳ ಸದ್ಬಳಕೆ ಮಾಡಿಕೊಳ್ಳಬೇಕು ಸಲಹೆ ನೀಡಿದರು.

ಉಪನ್ಯಾಸಕ ಎಚ್. ಮಲ್ಲಿಕಾರ್ಜುನ ಸಹಕಾರ ಚಳವಳಿಯ ಕುರಿತು ವಿಶೇಷ ಉಪನ್ಯಾಸ ನೀಡಿದರು.ಹಿರಿಯ ಸಹಕಾರಿಗಳಾದ ಅಂಬ್ಲಿ ಮಂಜುನಾಥ್, ಆದರ್ಶ ಪಟ್ಟಣ ಬ್ಯಾಂಕ್ ನಿರ್ದೇಶಕ ಬಿ. ರವಿಕುಮಾರ್, ಪ್ರಾಚಾರ್ಯ ಪಿ. ಶಿವಗಂಗಮ್ಮ, ಸೌಹಾರ್ದ ಅಭಿವೃದ್ಧಿ ಅಧಿಕಾರಿ ವೀರಶೆಟ್ಟಿ, ಪೊಲೀಸ್ ಇಲಾಖೆಯ ಮಹಿಳಾ ಅಧಿಕಾರಿ ಶಿವಲೀಲಾ ಉಪಸ್ಥಿತರಿದ್ದರು.

ಉಪನ್ಯಾಸಕರಾದ ಶಿವಾನಂದ, ಶಂಕ್ರಪ್ಪ, ಸಂತೋಷ್, ಅವಿನಾಶ್ ಮತ್ತು ಸಹಕಾರಿಗಳಾದ ಮುನೇಗೌಡ, ಸ್ವಪ್ನ ಮಲ್ಲಿಕಾರ್ಜುನ್, ಪ್ರಭಾಕರ, ರಾಜಕುಮಾರ, ಗಣೇಶ, ಬಸವರಾಜ, ಶರಣಬಸವ, ಕೆ. ರವೀಂದ್ರ, ಶಂಕ್ರಪ್ಪ  ಇದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ರಸ್ತೆ ನಿರ್ಮಾಣಕ್ಕೆ ಜಾಗ ತ್ಯಾಗ ಮಾಡಿದ ಗ್ರಾಮಸ್ಥರ ಋಣ ತೀರಿಸಲಾಗದು: ಶಾಸಕ ಹೆಚ್.ಆರ್. ಗವಿಯಪ್ಪ

ವಿಜಯನಗರ (ಹೊಸಪೇಟೆ) : ಊರಿನ ಸಾರ್ವಜನಿಕ ರಸ್ತೆ ನಿರ್ಮಾಣ ಹಾಗೂ ಮೂಲಸೌಕರ್ಯ ಅಭಿವೃದ್ಧಿಗಾಗಿ ತಮ್ಮ ಜಾಗ...

Homeಅಪರಾಧ

ಹರಪನಹಳ್ಳಿ: ನಕಲಿ ದಾಖಲೆ ಸೃಷ್ಟಿಸಿ 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಹರಪನಹಳ್ಳಿ : ನಕಲಿ ದಾಖಲೆ ಸೃಷ್ಟಿಸಿಕೊಂಡು ತನ್ನ ಹೆಸರಿಗೆ ಆಸ್ತಿ ಪತ್ರಗಳನ್ನು ಮಾಡಿಕೊಂಡು ಪರಾರಿಯಾಗಿದ್ದ 12...

Homeಸುದ್ದಿಗಳು

ಕೊಪ್ಪಳ : ಪ್ರತಿಭಾ ಪುರಸ್ಕಾರಕ್ಕೆ ಬನ್ನಿ

ಹರಪನಹಳ್ಳಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಹರಪನಹಳ್ಳಿ ತಾಲೂಕು ಘಟಕದ ವತಿಯಿಂದ 2026-27ನೇ ಸಾಲಿನ...

Homeಕೃಷಿ

ಹರಪನಹಳ್ಳಿ ತಾಲ್ಲೂಕನ್ನು ಬರಪೀಡಿತ ಎಂದು ಘೋಷಿಸಲು ಆಗ್ರಹಿಸಿ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ

ಹರಪನಹಳ್ಳಿ : ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲ್ಲೂಕನ್ನು ಬರಪೀಡಿತ ತಾಲ್ಲೂಕು ಎಂದು ಘೋಷಿಸಬೇಕು ಎಂದು ಆಗ್ರಹಿಸಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.