ವಿಜಯನಗರ : ಜಿಲ್ಲೆಯ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಭಾರತೀಯ ಜನತಾ ಪಕ್ಷದ ಜಿಲ್ಲಾ ಘಟಕದ ವತಿಯಿಂದ ಆಯೋಜಿಸಲಾಗಿದ್ದ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಯ ಸಭೆಯ(SIR) ಕಾರ್ಯಕ್ರಮದಲ್ಲಿ ಭಾಗವಹಿಸಲಾಯಿತು.
ಮತದಾರರ ಪಟ್ಟಿಯ ನಿಖರತೆ ಮತ್ತು ಪಾರದರ್ಶಕತೆಯನ್ನು ಖಚಿತಪಡಿಸುವುದರೊಂದಿಗೆ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ SIR ಪ್ರಕ್ರಿಯೆಯ ಕುರಿತು ಮಹತ್ವದ ಮಾಹಿತಿ ಹಾಗೂ ಮಾರ್ಗದರ್ಶನ ನೀಡಲಾಯಿತು.
ಈ ಸಂದರ್ಭದಲ್ಲಿ ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷರಾದ ಶ್ರೀ ಬಿ.ವೈ. ವಿಜಯೇಂದ್ರ ರವರು,ಮಾಜಿ ಕಂದಾಯ ಸಚಿವರಾದ ಶ್ರೀ. ಜಿ.ಕರುಣಾಕರ ರೆಡ್ಡಿ ಅವರು ಮಾಜಿ ಸಚಿವರಾದ ಶ್ರೀ ಬಿ. ಶ್ರೀರಾಮುಲು ರವರು, ಶಾಸಕರಾದ ಶ್ರೀ ಕೃಷ್ಣ ನಾಯ್ಕರವರು , ಬಳ್ಳಾರಿ ವಿಭಾಗದ ಪ್ರಭಾರಿ ಗಳಾದ, ಅಮರ್ ನಾಥ್ ಪಾಟೀಲ್, ಸಹ ಪ್ರಬಾರಿಗಳಾದ ಚನ್ನಬಸವನಗೌಡ ಅವರು, ಈಶಾನ್ಯ ಶಿಕ್ಷಕರ ಕ್ಷೇತ್ರದ ಮಾಜಿ ವಿಧಾನ ಪರಿಷತ್ ಸದಸ್ಯರದ ಶಶೀಲ್ ನಮೋಶಿ ಅವರು,ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಕುಡಚಿ ರಾಜೀವ್ ರವರು, ರಾಜ್ಯ ಎಸ್ ಟಿ ಮೋರ್ಚಾ ಅಧ್ಯಕ್ಷರಾದ ಬಂಗಾರ ಹನುಮಂತು ಅವರು, ಜಿಲ್ಲಾಧ್ಯಕ್ಷರಾದ ಶ್ರೀ ಸಂಜೀವ್ ರೆಡ್ಡಿ ರವರು,ರಾಜ್ಯ ಒಬಿಸಿ ಮೋರ್ಚಾದ ಉಪಾಧ್ಯಕ್ಷರಾದ ಐಯಳ್ಳಿ ತಿಮ್ಮಪ್ಪ ಅವರು,ಮಂಡಲ ಅಧ್ಯಕ್ಷರಾದ ಕೆ. ಶೇಖರಪ್ಪ ಅವರು ,ಜಿಲ್ಲೆಯ ಹಾಗೂ ನಗರದ ಪದಾಧಿಕಾರಿಗಳು, ಹಿರಿಯ ಮುಖಂಡರು ಮತ್ತು ಕಾರ್ಯಕರ್ತ ಬಂಧುಗಳು ಉಪಸ್ಥಿತರಿದ್ದರು.
Leave a comment