ಹರಪನಹಳ್ಳಿ : ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲ್ಲೂಕನ್ನು ಬರಪೀಡಿತ ತಾಲ್ಲೂಕು ಎಂದು ಘೋಷಿಸಬೇಕು ಎಂದು ಆಗ್ರಹಿಸಿ ಭಾರತೀಯ ಕಿಸಾನ್ ಸಂಘದ ಪದಾಧಿಕಾರಿಗಳು ಶುಕ್ರವಾರ ತಹಶೀಲ್ದಾರ ಬಿ.ವಿ.ಗಿರೀಶ್ ಬಾಬು ಅವರಿಗೆ ಮನವಿ ಸಲ್ಲಿಸಿದರು.
ತಾಲ್ಲೂಕಿನಲ್ಲಿ ಮಳೆ ಅಭಾವದಿಂದಾಗಿ ಶೇ. 60ಕ್ಕೂ ಹೆಚ್ಚು ಬೆಳೆ ಹಾನಿಯಾಗಿದೆ. ರೈತರು ಬಿತ್ತನೆ ಮಾಡಿದ ಬೀಜ, ಗೊಬ್ಬರದ ಖರ್ಚನ್ನೂ ಪಡೆಯಲಾಗದೆ ದಿಕ್ಕು ತೋಚದಂತಾಗಿದ್ದಾರೆ. ಜಾನುವಾರುಗಳಿಗೆ ಮೇವು, ನೀರಿಗೂ ತತ್ವಾರ ಉಂಟಾಗಿದೆ. ಸರ್ಕಾರ ಶೀಘ್ರ ಬರಗಾಲ ಘೋಷಿಸಬೇಕು ಎಂದು ಆಗ್ರಹಿಸಿದರು.
ಕಿಸಾನ್ ಸಂಘದ ಜಿಲ್ಲಾಧ್ಯಕ್ಷ ಬಿ.ಎಂ. ಮಹೇಶ್ವರಯ್ಯ, ಸರ್ಕಾರ ತಕ್ಷಣ ಎಚ್ಚೆತ್ತುಕೊಂಡು ರೈತರ ನೆರವಿಗೆ ಬರಬೇಕು. ಇಲ್ಲದಿದ್ದರೆ, ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು. ಮುಖಂಡರಾದ ಗುಂಡಿ ಮಂಜಪ್ಪ, ಪಿ.ಶಿವಶಂಕರ ಗೌಡ, ಕೆ.ಬಸವರಾಜ, ಮಾರುತಿ, ಬಿ.ಮಂಜಪ್ಪ, ಶಿವಪ್ರಸಾದ ಬಣಕಾರ ಇತರರಿದ್ದರು.
Leave a comment