ಹರಪನಹಳ್ಳಿ : ಕನ್ನಡ ಸಾಹಿತ್ಯ ಸಮ್ಮೇಳನ ಗ್ರಾಮೀಣ ಪ್ರದೇಶಕ್ಕೆ ಪಸರಿಸುವ ನಿಟ್ಟಿನಲ್ಲಿ ಅರಸೀಕೆರೆಯಲ್ಲಿ ಹಮ್ಮಿಕೊಳ್ಳಲು ಉದ್ದೇಶಿಸಿರುವ 6ನೇ ತಾಲ್ಲೂಕು ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನದ ಯಶಸ್ವಿಗೆ ಕೈಜೋಡಿಸುವುದಾಗಿ ಕೋಲಶಾಂತೇಶ್ವರ ಮಠದ ಶಾಂತಲಿಂಗ ರಾಜದೇಶಿಕೇಂದ್ರ ಸ್ವಾಮೀಜಿ ತಿಳಿಸಿದರು.
ತಾಲ್ಲೂಕಿನ ಅರಸೀಕೆರೆ ಗ್ರಾಮದ ಕೋಲಶಾಂತೇಶ್ವರ ಮಠದಲ್ಲಿ ಮಂಗಳವಾರ ಜರುಗಿದ ಹೋಬಳಿಯ ವಿವಿಧ ಗ್ರಾಮಗಳ ಮುಖಂಡರ ಸಭೆಯ ಸಾನ್ನಿಧ್ಯವಹಿಸಿ ಅವರು ಮಾತನಾಡಿದರು. ಕನ್ನಡ ಸಾಹಿತ್ಯ, ಜಾನಪದ, ಸಾಂಸ್ಕೃತಿಕ, ಜನಪದ ಕಲೆಗಳಿಗೆ ವಿಶೇಷ ಸ್ಥಾನವಿದೆ. ಕನ್ನಡ ಭಾಷೆ, ನೆಲ, ಜಲ, ಸಂಸ್ಕೃತಿ, ಆಚಾರ ವಿಚಾರಗಳನ್ನು ರಕ್ಷಿಸುವ ಹೊಣೆಗಾರಿಕೆ ಪ್ರತಿಯೊಬ್ಬರ ಮೇಲಿದೆ. ಮಠದ ನೇತೃತ್ವದಲ್ಲಿ ಸಮ್ಮೇಳನ ನಡೆಸಲು ಸಂಪೂರ್ಣ ಒಪ್ಪಿಗೆ ಎಂದರು.
ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಐ.ಸಲಾಂ ಸಾಹೇಬ್, ಹಿರಿಯರಾದ ನಾಗರಾಜ್ ಅವರು ಮಾತನಾಡಿ, ಸಮ್ಮೇಳನಕ್ಕೆ ಎಲ್ಲ ರೀತಿಯ ಸಹಕಾರ ಮಾಡುವುದಾಗಿ ತಿಳಿಸಿದರು. ರೇವಣಸಿದ್ದಪ್ಪ, ಗುಡಿಹಳ್ಳಿ ಹಾಲೇಶ್, ಗೊಂದಾಲಿ ಗೋಪಾಲ, ಕಸಾಪ ಮಾಜಿ ಅಧ್ಯಕ್ಷ ಡಿ.ರಾಮನಮಲಿ, ತಾಲ್ಲೂಕು ಅಧ್ಯಕ್ಷ ಕೆ.ಉಚ್ಚೆಂಗಪ್ಪ, ನಿಚ್ಚವ್ವನಹಳ್ಳಿ ಭೀಮಪ್ಪ, ಸಾಹಿತಿ ದುರ್ಗೇಶ ಪೂಜಾರ, ಬಸವರಾಜ್, ವೆಂಕಟೇಶ್, ವಿಶ್ವನಾಥ, ಉಮೇಶ, ರಮೇಶ್ ಸೇರಿದಂತೆ ಸುದೀರ್ಘ ಚರ್ಚೆಯಲ್ಲಿ ಪಾಲ್ಗೊಂಡಿದ್ದರು. ಸಭೆಯ ಕೊನೆಗೆ ಕೋಲಶಾಂತೇಶ್ವರ ಮಠದ ಶಾಂತಲಿಂಗ ಸ್ವಾಮೀಜಿ ಅವರ ಸಮ್ಮುಖದಲ್ಲೇ ಸಮ್ಮೇಳನ ನಡೆಸಲು ನಿರ್ಧರಿಸಲಾಯಿತು.
ಮಾರುತಿ ಪೂಜಾರ, ಪೂಜಾರ ಬಸವರಾಜ್, ಚಿದಾನಂದ ಗೌಡ, ಏಕಾಂತಪ್ಪ, ಕೊಟ್ರೇಶ, ಗುಂಡಗತ್ತಿ ಮಂಜುನಾಥ, ಎಚ್.ನಾಗರಾಜ್, ರವೀಂದ್ರ, ಹಾಲೇಶ್, ಮಾಲತೇಶ, ಬಸವನಗೌಡ, ನಾಗರಾಜ ಗೌಡ, ಕೆ.ಮಹೇಶ್, ಹಾದಿಮನಿ ರಮೇಶ್ ಇದ್ದರು.
Leave a comment