Home ಸುದ್ದಿಗಳು ವಾಲ್ಮೀಕಿ ವಂಶಸ್ಥರು ದೈರ್ಯ, ಸಾಹಸಕ್ಕೆ ಹೆಸರಾದವರು
ಸುದ್ದಿಗಳು

ವಾಲ್ಮೀಕಿ ವಂಶಸ್ಥರು ದೈರ್ಯ, ಸಾಹಸಕ್ಕೆ ಹೆಸರಾದವರು

Share
Legislator M.P. Latha Mallikarjun
Share

ಹರಪನಹಳ್ಳಿ : ವಾಲ್ಮೀಕಿ ವಂಶಸ್ಥರು ದೈರ್ಯ, ಸಾಹಸ ಹಾಗೂ ನಿಷ್ಠೆಗೆ ಹೆಸರುವಾಸಿಯಾಗಿದ್ದಾರೆ ಎಂದು ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ ಹೇಳಿದರು.

ತಾಲ್ಲೂಕಿನ ಮತ್ರಿಹಳ್ಳಿ ಗ್ರಾಮದಲ್ಲಿ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಉದ್ಘಾಟಿಸಿ ಅವರು ಮಾತನಾಡಿದರು. ಮಹರ್ಷಿ ವಾಲ್ಮೀಕಿ ಹೆಸರಿಗೆ ದೊಡ್ಡಶಕ್ತಿಯಿದೆ. ಅವರು ಬರೆದ ರಾಮಾಯಣ ಮತ್ತು ಮಹಾಭಾರತ ಪವಿತ್ರ ಗ್ರಂಥಗಳಾಗಿದ್ದು, ಪ್ರಪಂಚಕ್ಕೆ ಮಾದರಿಯಾಗಿದೆ ಎಂದರು.

ರಾಜ್ಯ ವಾಲ್ಮೀಕಿ ಪ್ರಶಸ್ತಿ ಪುರಸ್ಕೃತ ಕೆ.ಉಚ್ಚೆಂಗೆಪ್ಪ ಮಾತನಾಡಿ, ವಾಲ್ಮೀಕಿ ಕೇವಲ ಆದಕವಿ ಮಾತ್ರವಲ್ಲ, ಪಂಡಿತ, ಶಿಕ್ಷಣಪ್ರೇಮಿ ಮತ್ತು ಆದರ್ಶ ಶಿಕ್ಷಕರಾಗಿದ್ದರು ಎಂದರು.
ನಿವೃತ್ತ ಮುಖ್ಯ ಶಿಕ್ಷಕ ಎಸ್.ರೇವಣಸಿದ್ದಪ್ಪ ಮಾತನಾಡಿ, ಜಯಂತಿಗಳು ಕೇವಲ ಜಾತಿಗಳಿಗೆ ಸೀಮಿತವಾಗದೆ, ಎಲ್ಲ ವರ್ಗದವರೂ ಒಂದುಗೂಡಿ ಮಹನೀಯರ ಜಯಂತಿ ಆಚರಿಸಿದರೆ ಮಾದರಿ ಆಗುತ್ತದೆ ಎಂದು ತಿಳಿಸಿದರು.

ಮುಖಂಡ ತಳವಾರ ಬೆಟ್ಟನಗೌಡ. ವಕೀಲ ಎಸ್.ಎಂ. ನಾಗರಾಜ, ವಿ.ಎಸ್.ಎಸ್.ಎನ್ ನಿರ್ದೆಶಕ ಸಣ್ಣ ನಿಗಪ್ಪ, ಕೊಟ್ರಗೌಡ, ಕೆ.ಪ್ರಕಾಶ ಮಾತನಾಡಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷ ಸಣ್ಣ ಹೊನ್ನಪ್ಪ, ಜಿಲ್ಲಾ ಪಂಚಾಯ್ತಿ ಮಾಜಿ ಉಪಾಧ್ಯಕ್ಷ ಮತ್ತಿಹಳ್ಳಿ ಶಿವಣ್ಣ, ತಾಲ್ಲೂಕು ಮಾಜಿ ಅಧ್ಯಕ್ಷ ಕಿತ್ತೂರು ಓಬಪ್ಪ, ಡಿ.ಬಸವಂತಪ್, ನಾಗರಾಜ ರಾಂಪುರ ಇದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಸಿಲಿಂಡರ್ ಪಡೆಯಲು ಇ-ಕೆವೈಸಿ ಪ್ರಕ್ರಿಯೆ ಕಡ್ಡಾಯ

ದಾವಣಗೆರೆ  : ಜಿಲ್ಲೆಯ ಎಲ್ಲಾ ಬಿಪಿಸಿಎಲ್, ಹೆಚ್‍ಪಿಸಿಎಲ್ ಹಾಗೂ   ಐಓಸಿಎಲ್ ಅನಿಲ ಗ್ರಾಹಕರ ತಮ್ಮ...

Homeಸುದ್ದಿಗಳು

ರಾಂಚಿಯಲ್ಲಿ ಎಐಎಸ್ಎ ಅಧ್ಯಕ್ಷೆ ಮೇಲಿನ ದಾಳಿ: ಸಂಘಿ ಗೂಂಡಾಗಳ ಬಂಧನಕ್ಕೆ ಗಂಗಾವತಿಯಲ್ಲಿ ಆಗ್ರಹ

ಗಂಗಾವತಿ : ಜಾರ್ಖಂಡ್‌ನ ರಾಂಚಿಯಲ್ಲಿ ನೇಮಕಾತಿ ಹಗರಣಗಳು ಮತ್ತು ಪ್ರಶ್ನೆಪತ್ರಿಕೆ ಸೋರಿಕೆಗಳ ವಿರುದ್ಧ ಹೋರಾಟ ನಡೆಸುತ್ತಿರುವ...

Homeಸುದ್ದಿಗಳು

ಸಚಿವ ಸ್ಥಾನಕ್ಕೆ ಮನವಿ ಮಾಡಿರುವೆ : ಎಂ.ಪಿ.ಲತಾ

ಹರಪನಹಳ್ಳಿ : ಹಿರಿಯ ನಾಯಕರ ಸಲಹೆಯಂತೆ ಮಹಿಳಾ ಕೋಟಾದಡಿ ಸಚಿವ ಸ್ಥಾನ ನೀಡುವಂತೆ ಹೈಕಮಾಂಡ್ ಗೆ...

Homeಸುದ್ದಿಗಳು

ವಿಜಯನಗರ ಜಿಲ್ಲೆಯಲ್ಲಿ ಭೀಕರ ಮುಂಗಾರು ಅಭಾವ ಹಾಗೂ ಶೇ.60 ರಷ್ಟು ಮಳೆ ಕೊರತೆ: 

ವಿಜಯನಗರ : ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ವಿಜಯನಗರ ಜಿಲ್ಲೆಯಾದ್ಯಂತ ತೀವ್ರ ಮಳೆ ಕೊರತೆ ಎದುರಾಗಿದ್ದು,...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.