Home ಸುದ್ದಿಗಳು ಡಿವೈಎಸ್ಪಿ ಸಂತೋಷ್ ಚೌವ್ಹಾಣ್ ಸಲಹೆ
ಸುದ್ದಿಗಳು

ಡಿವೈಎಸ್ಪಿ ಸಂತೋಷ್ ಚೌವ್ಹಾಣ್ ಸಲಹೆ

Share
dysp harapanahalli
Share

ಹರಪನಹಳ್ಳಿ : ಯಾವುದೇ ರೀತಿಯ ತೊಂದರೆ ಆಗುತ್ತಿದ್ದರೆ ಮನೆ ಮನೆಗೆ ಬೇಟಿ ನೀಡುವ ಪೊಲೀಸರಿಗೆ ಸರಿಯಾದ ಮಾಹಿತಿಕೊಟ್ಟರೆ ನ್ಯಾಯ ಕಲ್ಪಿಸಲು ಸಾಧ್ಯವಾಗುತ್ತದೆ ಎಂದು ಡಿವೈಎಸ್ಪಿ ಸಂತೋಷ್ ಚೌವ್ಹಾಣ್ ತಿಳಿಸಿದರು.

ತಾಲ್ಲೂಕಿನ ಅರಸೀಕೆರೆ ಗ್ರಾಮದ ದಲಿತ ಕಾಲೊನಿಯಲ್ಲಿ ಮಂಗಳವಾರ ಪರಿಶಿಷ್ಟ ಜಾತಿಯವರೊಂದಿಗೆ ನಡೆದ ಕುಂದುಕೊರತೆ ಸಭೆಯಲ್ಲಿ ಅವರು ಮಾತನಾಡಿದರು. ಕಾಲೊನಿಯ ಮಕ್ಕಳು,ಯುವಕರು ಅಪರಾಧ ಕೃತ್ಯಗಳಲ್ಲಿ ಪಾಲ್ಗೊಳ್ಳದಂತೆ ಕಾಳಜಿವಹಿಸಬೇಕು. ಅವರಿಗೆ ಸೈಬರ್ ಕ್ರೈಮ್, ಬಾಲ್ಯ ವಿವಾಹ, ಪೊಕ್ಸೊ ಕಾಯ್ದೆಗಳ ಬಗ್ಗೆ ಅರಿವು ಮೂಡಿಸಬೇಕು ಎಂದು ಸಲಹೆ ನೀಡಿದರು.

ದಲಿತ ಸಮಾಜದ ಮುಖಂಡ ಪೂಜಾರ ಮರಿಯಪ್ಪ ಮಾತನಾಡಿ, ಗ್ರಾಮದಲ್ಲಿ ಎಲ್ಲ ಜನಾಂಗದವರು ಸಾಮರಸ್ಯ, ಸೌಹಾರ್ಧತೆಯಿಂದ ಜೀವನ ನಡೆಸುತ್ತಿದ್ದೇವೆ ಎಂದರು. ಸಿಪಿಐ ಮಹಾಂತೇಶ್ ಸಜ್ಜನ್, ಪಿಎಸ್ಐ ವಿಜಯಕೃಷ್ಣ ಹಾಗೂ ಮುಖಂಡರಿದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಹರಪನಹಳ್ಳಿ : ತಾಲ್ಲೂಕು ಮಟ್ಟದ ಪ್ರಜಾಸೇವೆ ಆಂದೋಲನ 

ಪ್ರಜಾಸೇವ ಆಂದೋಲನ ಜನರ ಹೃದಯಕ್ಕೆ ಮುಟ್ಟುವಂತಿರಲಿ ಹರಪನಹಳ್ಳಿ :  ಹಿಂದೆ ತಮ್ಮ ಸಮಸ್ಯೆಗಳಿಗೆ ಪರಿಹಾರ ದೊರೆಯುವ ಭರವಸೆಯಿಲ್ಲದೆ...

Homeಸುದ್ದಿಗಳು

ಬಾಲಕನ ಕೊಲೆಗೈದ ಆರೋಪಿಗೆ ಜೀವಾವಧಿ ಶಿಕ್ಷೆ 

ಹೊಸಪೇಟೆ (ವಿಜಯನಗರ ಜಿಲ್ಲೆ ) : ಏಳು ವರ್ಷದ ಬಾಲಕನನ್ನು ಅಪಹರಿಸಿ ಕಾಲುವೆಗೆ ಎಸೆದು ಕೊಲೆ...

Homeಸುದ್ದಿಗಳು

ಜೆಡಿಎಸ್ ಅಧ್ಯಕ್ಷರಾಗಿ ವಿ. ಮಲ್ಕಪ್ಪ ಆಯ್ಕೆ

ಹರಪನಹಳ್ಳಿ : ತಾಲ್ಲೂಕು ಜಾತ್ಯಾತೀತ ಜನತಾದಳದ (ಜೆಡಿಎಸ್) ನೂತನ ಅಧ್ಯಕ್ಷರಾಗಿ ತಾವರೆಗೊಂದಿ ಗ್ರಾಮದ ವಿ. ಮಲ್ಕಪ್ಪ...

Homeಸುದ್ದಿಗಳು

ಮಕ್ಕಳಿಗೆ ವಿದ್ಯೆಯೊಂದಿಗೆ ಉತ್ತಮ ಸಂಸ್ಕಾರ ನೀಡುವ ಹೊಣೆ ಎಲ್ಲರದ್ದು: ಪ್ರಾಂಶುಪಾಲ ಡಾ. ಎಂ. ಸುರೇಶ್

ಹರಪನಹಳ್ಳಿ : 'ಇಂದಿನ ಮಕ್ಕಳಿಗೆ ವಿದ್ಯೆಯ ಜೊತೆಗೆ ಉತ್ತಮ ಸಂಸ್ಕಾರವನ್ನು ನೀಡುವ ಹೊಣೆಯನ್ನು ಪ್ರತಿಯೊಬ್ಬರೂ ಹೊರಬೇಕು'...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.