ಹರಪನಹಳ್ಳಿ : ಯಾವುದೇ ರೀತಿಯ ತೊಂದರೆ ಆಗುತ್ತಿದ್ದರೆ ಮನೆ ಮನೆಗೆ ಬೇಟಿ ನೀಡುವ ಪೊಲೀಸರಿಗೆ ಸರಿಯಾದ ಮಾಹಿತಿಕೊಟ್ಟರೆ ನ್ಯಾಯ ಕಲ್ಪಿಸಲು ಸಾಧ್ಯವಾಗುತ್ತದೆ ಎಂದು ಡಿವೈಎಸ್ಪಿ ಸಂತೋಷ್ ಚೌವ್ಹಾಣ್ ತಿಳಿಸಿದರು.
ತಾಲ್ಲೂಕಿನ ಅರಸೀಕೆರೆ ಗ್ರಾಮದ ದಲಿತ ಕಾಲೊನಿಯಲ್ಲಿ ಮಂಗಳವಾರ ಪರಿಶಿಷ್ಟ ಜಾತಿಯವರೊಂದಿಗೆ ನಡೆದ ಕುಂದುಕೊರತೆ ಸಭೆಯಲ್ಲಿ ಅವರು ಮಾತನಾಡಿದರು. ಕಾಲೊನಿಯ ಮಕ್ಕಳು,ಯುವಕರು ಅಪರಾಧ ಕೃತ್ಯಗಳಲ್ಲಿ ಪಾಲ್ಗೊಳ್ಳದಂತೆ ಕಾಳಜಿವಹಿಸಬೇಕು. ಅವರಿಗೆ ಸೈಬರ್ ಕ್ರೈಮ್, ಬಾಲ್ಯ ವಿವಾಹ, ಪೊಕ್ಸೊ ಕಾಯ್ದೆಗಳ ಬಗ್ಗೆ ಅರಿವು ಮೂಡಿಸಬೇಕು ಎಂದು ಸಲಹೆ ನೀಡಿದರು.
ದಲಿತ ಸಮಾಜದ ಮುಖಂಡ ಪೂಜಾರ ಮರಿಯಪ್ಪ ಮಾತನಾಡಿ, ಗ್ರಾಮದಲ್ಲಿ ಎಲ್ಲ ಜನಾಂಗದವರು ಸಾಮರಸ್ಯ, ಸೌಹಾರ್ಧತೆಯಿಂದ ಜೀವನ ನಡೆಸುತ್ತಿದ್ದೇವೆ ಎಂದರು. ಸಿಪಿಐ ಮಹಾಂತೇಶ್ ಸಜ್ಜನ್, ಪಿಎಸ್ಐ ವಿಜಯಕೃಷ್ಣ ಹಾಗೂ ಮುಖಂಡರಿದ್ದರು.
Leave a comment