ಹರಪನಹಳ್ಳಿ : ಕಾರ್ಮಿಕರ ಅನುಕೂಲಕ್ಕಾಗಿ ತಾಲ್ಲೂಕಿನಲ್ಲಿ ವಿಮಾ (ಇಎಸ್ಐ) ಆಸ್ಪತ್ರೆ ತೆರೆಯಬೇಕು ಎಂದು ಆಗ್ರಹಿಸಿ ಆಲ್ ಇಂಡಿಯಾ ಸೆಂಟ್ರಲ್ ಕೌನ್ಸಿಲ್ ಆಫ್ ಟ್ರೇಡ್ ಯೂನಿಯನ್ಸ್ ತಾಲ್ಲೂಕು ಸಮಿತಿ ಪದಾಧಿಕಾರಿಗಳು ಸೋಮವಾರ ಪ್ರತಿಭಟನೆ ನಡೆಸಿದರು.
ತಾಲ್ಲೂಕು ಕಾರ್ಮಿಕ ನಿರೀಕ್ಷಕರ ಕಚೇರಿ ಆವರಣದಲ್ಲಿ ಪ್ರತಿಭಟಿಸಿದ ಕಾರ್ಮಿಕರು ಇಎಸ್ಐ ಆಸ್ಪತ್ರೆ ಆರಂಭಿಸಲು ಆಗ್ರಹಿಸಿ, ಮನವಿ ಸಲ್ಲಿಸಿದರು. ‘ತಾಲ್ಲೂಕಿನಲ್ಲಿ 30 ಸಾವಿರ ಕಾರ್ಮಿಕರ ನೊಂದಣಿಯಾಗಿದೆ. ಅಪಘಾತ, ಕ್ಷಯ, ದಮ್ಮು, ಕೀಲುಮೂಳೆ ನೋವುಗಳಿಗೆ ಚಿಕಿತ್ಸೆ ಪಡೆಯಲು ದೂರದ ದಾವಣಗೆರೆ, ಬಳ್ಳಾರಿಗೆ ತೆರಳುವ ಅನಿವಾರ್ಯತೆ ಇದೆ. ನಗರದಲ್ಲಿ ಇಎಸ್ಐ, ಮೆಡಿಕಲ್ ಸೌಲಭ್ಯವಿಲ್ಲದ ಪರಿಣಾಮ ಕಾರ್ಮಿಕರು ಪರದಾಡುವಂತಾಗಿದೆ. ಕೂಡಲೇ ಇಎಸ್ಐ ಆಸ್ಪತ್ರೆ ತೆರೆಯಬೇಕು ಎಂದು ಆಗ್ರಹಿಸಿದರು. ಜಿಲ್ಲಾಧ್ಯಕ್ಷ ಸಂದೇರ ಪರಶುರಾಮ್, ಜಿಲ್ಲಾ ಕಾರ್ಯದರ್ಶಿ ಗುಳೇದಹಟ್ಟಿ ಸಂತೋಷ, ಹುಲಿಕಟ್ಟೆ ಮೈಲಪ್ಪ, ಕಲೀಂ, ಮಹಮ್ಮದ್ ರಫೀಕ್, ಎಸ್.ರಾಜು, ಬಿ.ಎಸ್.ಪ್ರಕಾಶ್, ಮಹಮ್ಮದ್ ಗೌಸ್ ಇದ್ದರು.
Leave a comment