Home ಸುದ್ದಿಗಳು ಸಂವಿಧಾನದ ದೇಶದ ಹೃದಯವಿದ್ದಂತೆ, : ಎಂ.ಪಿ.ಲತಾ
ಸುದ್ದಿಗಳು

ಸಂವಿಧಾನದ ದೇಶದ ಹೃದಯವಿದ್ದಂತೆ, : ಎಂ.ಪಿ.ಲತಾ

Share
CONSTUTION DAY, HARAPANAHALLI, SOCIAL WELFARE, PEETIKE
ವಿಜಯನಗರ ಜಿಲ್ಲೆ ಹರಪನಹಳ್ಳಿ ಹಿರೆಕೆರೆ ವೃತ್ತದಲ್ಲಿ ಜರುಗಿದ ರಾಷ್ಟ್ರೀಯ ಸಂವಿಧಾನ ದಿನಾಚರಣೆಯಲ್ಲಿ 2ನೇ ತರಗತಿ ವಿದ್ಯಾರ್ಥಿ ಭರತ್ ಪೀಠಿಕೆ ಓದಿದರು, ನೆರೆದಿದ್ದವರು ಪ್ರಮಾಣ ವಚನ ಸ್ವೀಕರಿಸಿದರು.
Share

ಹರಪನಹಳ್ಳಿ : ನಗರದ ಹಿರೆಕೆರೆ ವೃತ್ತದಲ್ಲಿ ತಾಲ್ಲೂಕು ಆಡಳಿತ, ಸಮಾಜ ಕಲ್ಯಾಣ ಇಲಾಖೆಗಳ ಸಹಯೋಗದಲ್ಲಿ ಬುಧವಾರ ಆಯೋಜಿಸಿದ್ದ ರಾಷ್ಟ್ರೀಯ ಸಂವಿಧಾನ ದಿನಾಚರಣೆ ಜರುಗಿತು.

ಡಾ.ಬಿ.ಆರ್.ಅಂಬೇಡ್ಕರ ಭಾವಚಿತ್ರ, ಪೀಠಿಕೆ ಚಿತ್ರ ತೆರೆದ ವಾಹನದಲ್ಲಿ ಅಳವಡಿಸಿ ಮೆರವಣಿಗೆಗೆ ಚಾಲನೆ ನೀಡಲಾಯಿತು. ಅಂಬೇಡ್ಕರ ವಸತಿ ಶಾಲೆಯ 2ನೇ ತರಗತಿ ವಿದ್ಯಾರ್ಥಿ ಬಿ.ಎಚ್.ಭರತ್ ಅವರು, ಪುಸ್ತಕ ನೋಡದೆ ಪೀಠಿಕೆ ಹೇಳಿ ಎಲ್ಲರ ಗಮನ ಸೆಳೆದಿದ್ದು ವಿಶೇಷವಾಗಿತ್ತು. ಡ್ರಮ್ ಸೆಟ್ ಕಲಾವಿದರು ಮೆರುಗು ನೀಡಿದರು. ದಾರಿಯುದ್ದಕ್ಕೂ ಸಂವಿಧಾನ ಪೀಠಿಕೆ ಮಹತ್ವ ಸಾರುವ ಪ್ಲೆ ಕಾರ್ಡ್ ಗಳ ಪ್ರದರ್ಶಿಸಲಾಯಿತು.

ಉದ್ಘಾಟಿಸಿದ ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ ಮಾತನಾಡಿ, ಸಂವಿಧಾನದ ದೇಶದ ಹೃದಯವಿದ್ದಂತೆ, ಅದರ ಬಡಿತ, ಮಿಡಿತ ಸದಾ ಸದೃಢ ಭಾರತದ ನಿರ್ಮಾಣ ಒಳಗೊಂಡಿರಬೇಕು. ಸಂವಿಧಾನದ ಬುನಾದಿ ಭದ್ರಪಡಿಸಲು ಎಲ್ಲರೂ ಕಂಕಣ ಬದ್ಧರಾಗುವ ಅಗತ್ಯವಿದೆ ಎಂದರು.

ತಹಶೀಲ್ದಾರ ಬಿ.ವಿ.ಗಿರೀಶ್ ಬಾಬು, ಸಹಾಯಕ ನಿರ್ದೇಶಕ ಎಸ್.ಆರ್.ಗಂಗಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಲೇಪಾಕ್ಷಪ್ಪ, ಮುಖ್ಯಾಧಿಕಾರಿ ರೇಣುಕಾ ಎಸ್.ದೇಸಾಯಿ, ವಿಸ್ತರಣಾಧಿಕಾರಿ ಭೀಮಪ್ಪ ಕೊಳಚಿ, ಎನ್.ಜಿ.ಬಸವರಾಜ್, ಹುಲಿಕಟ್ಟೆ ಚಂದ್ರಪ್ಪ, ಮೈದೂರು ಒ.ರಾಮಪ್ಪ, ಯಾಸ್ಮಿನ್ ಷಾ ಗುಪ್ತಾ, ಸುನಿತಾ,  ರವಿಗೌಡ, ಯಲ್ಲಮ್ಮ, ಶಿವಕುಮಾರ, ವಿನಯ್, ಗಂಗಾಧರ, ಡಿ.ಮಂಜುನಾಥ, ರವಿ, ಪಂಪಾಪತಿ, ಇಸ್ಮಾಯಿಲ್ ಎಲಿಗಾರ, ದೇವೇಂದ್ರಪ್ಪ ಇದ್ದರು. ನಿಲಯ ಮೇಲ್ವಿಚಾರ ಎನ್.ಜಿ.ಬಸವರಾಜ ನಿರೂಪಿಸಿದರು.

 

 

 

 

Share

Leave a comment

Leave a Reply

Your email address will not be published. Required fields are marked *

Related Articles
Homeರಾಜಕೀಯಸುದ್ದಿಗಳು

ಅಡವಿಹಳ್ಳಿಯಲ್ಲಿ ಬಸವೇಶ್ವರ ದೇವಸ್ಥಾನದ ಕಳಸಾರೋಹಣ

ಹರಪನಹಳ್ಳಿ: ಮೊಬೈಲ್ಗೆ ಹೇಗೆ ನೆಟ್ವರ್ಕ್ ಟವರ್ ಮುಖ್ಯವೋ, ಹಾಗೆಯೇ ದೇವಸ್ಥಾನದ ಗೋಪುರಕ್ಕೆ ಕಳಸ ಬಹುಮುಖ್ಯ, ದೇವಸ್ಥಾನಗಳು...

Homeಸುದ್ದಿಗಳು

ಕೋಟೆ ಅಂಜನೇಯ ದೇವಸ್ಥಾನ ಜಾಗ ಒತ್ತುವರಿ ತೆರವುಗೊಳಿಸದಿದ್ದರೆ ಹೋರಾಟದ ಎಚ್ಚರಿಕೆ

ಹರಪನಹಳ್ಳಿ (ವಿಜಯನಗರ ಜಿಲ್ಲೆ ) : ಪಾಳೆಗಾರ ರಾಜಸೋಮಶೇಖರ ನಾಯಕರ ಕಾಲದ ನಿರ್ಮಾಣವಾದ ಕೋಟೆ ಅಂಜನೇಯ...

ssm dvg
ಸುದ್ದಿಗಳು

ಶಾಮನೂರು ಶಿವಶಂಕರಪ್ಪ ಜನ್ಮದಿನ: ಜೂನ್‌ 17ಕ್ಕೆ  ಉಚಿತ ಸಾಮೂಹಿಕ ವಿವಾಹ  

ಹರಪನಹಳ್ಳಿ : ಮಾಜಿ ಶಾಸಕ ದಿವಂಗತ ಶಾಮನೂರು ಶಿವಶಂಕರಪ್ಪ ಅವರ 96ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಜೂನ್...

vijaya vikrama
Homeಸುದ್ದಿಗಳು

ದೇಶದ ಬದಲಾವಣೆಯಲ್ಲಿ ಪತ್ರಕರ್ತರ ಪಾತ್ರ ದೊಡ್ಡದು : ಕೋಡಿಹಳ್ಳಿ ಭೀಮಪ್ಪ

ಹರಪನಹಳ್ಳಿ : ಪತ್ರಿಕೋದ್ಯಮದಲ್ಲಿ ನಿಷ್ಠೆ, ಧೈರ್ಯ ಮತ್ತು ಪ್ರಾಮಾಣಿಕತೆ ಇದ್ದರೆ ಸಮಾಜದ ದಿಕ್ಕು ಬದಲಾಯಿಸಲು ಸಾಧ್ಯವಾಗುತ್ತದೆ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.