Home ಶಿಕ್ಷಣ ಉದ್ಯೋಗಕ್ಕಾಗಿ ಅನ್ಯಭಾಷೆಗೆ ಮೊರೆ, ಕನ್ನಡ ಬರೆ : ವೈ.ಎಚ್.ಚಂದ್ರಶೇಖರ  
ಶಿಕ್ಷಣ

ಉದ್ಯೋಗಕ್ಕಾಗಿ ಅನ್ಯಭಾಷೆಗೆ ಮೊರೆ, ಕನ್ನಡ ಬರೆ : ವೈ.ಎಚ್.ಚಂದ್ರಶೇಖರ  

Share
hps,degree,college, kannada,kasapa,
Share

ಹರಪನಹಳ್ಳಿ : ನಗರದ ಹಿರಮೇಗಳಗೇರಿ ಪಾಟೀಲ್ ಸಿದ್ದನಗೌಡ ಪದವಿ ಮಹಾವಿದ್ಯಾಲಯದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಸಹಯೋಗದಲ್ಲಿ ಕನ್ನಡ ಹಬ್ಬ-2025 ಕಾರ್ಯಕ್ರಮ ಜರುಗಿತು.

ಉದ್ಘಾಟಿಸಿದ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ವೈ.ಎಚ್.ಚಂದ್ರಶೇಖರ ಮಾತನಾಡಿ, ವ್ಯವಹಾರಿಕವಾಗಿ ಕನ್ನಡ ಬಳಕೆ ಹೆಚ್ಚಾಗುವ ಅಗತ್ಯವಿದೆ. ಉದ್ಯೋಗದ ಕಾರಣಕ್ಕಾಗಿ ಬಹುತೇಕರು ಅನ್ಯಭಾಷೆಗೆ ಮೊರೆ ಹೋಗುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಎಸ್‍ಯುಜೆಎಂ ಕಾಲೇಜ್ ಕನ್ನಡ ಉಪನ್ಯಾಸಕ ಎಚ್.ಮಲ್ಲಿಕಾರ್ಜುನ ಮಾತನಾಡಿ, ಕನ್ನಡಪರವಾದ ಸಂಘಟನೆ, ಕಾರ್ಯಕ್ರಮಗಳಿಂದ ಜನರು ಜಾಗೃತರಾಗಬೇಕು, ಪ್ರಾಥಮಿಕ ಹಂತದಲ್ಲಿ ಕನ್ನಡ ಪ್ರೀತಿಸುವ ಬಗ್ಗೆ ಅರಿವು ಮೂಡಿಸಬೇಕು ಎಂದರು.

ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೆ.ಉಚ್ಚೆಂಗೆಪ್ಪ ಮಾತನಾಡಿ, ಇಂದಿನ ದಿನಗಳಲ್ಲಿ ಶಿಕ್ಷಣದ ಮೌಲ್ಯ ಕುಸಿಯುತ್ತಿದೆ. ಕನ್ನಡದಲ್ಲಿ ಓದುವ ಮತ್ತು ಬರೆಯುವ ಸಂಸ್ಕೃತಿ ಪ್ರತಿಯೊಬ್ಬರ ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು.ಕಾಲೇಜಿನ ಪ್ರಾಚಾರ್ಯ ಮುತ್ತೇಶ್ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸ್ಥಳೀಯ ಸಲಹಾ ಸಮಿತಿ ಉಪಾಧ್ಯಕ್ಷ ಬಸವನಗೌಡ, ಗೋವಿಂದಪ್ಪ ಮಾತನಾಡಿದರು. ಉಪನ್ಯಾಸಕರಾದ ರವೀಂದ್ರ, ಮಾಳ್ಗಿ ಮಂಜುನಾಥ, ಪ್ರವೀಣ್ ಕುಮಾರ, ಪ್ರಭಾಕರ, ನವೀನ್ ಇತರರಿದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಶಿಕ್ಷಣ

ಪದವಿ ಹಾಗೂ ಸ್ನಾತಕೋತ್ತರ ಪದವಿಗೆ ಅರ್ಜಿ ಆಹ್ವಾನ

ವಿಜಯನಗರ(ಹೊಸಪೇಟೆ) : 2026-27 ನೇ ಸಾಲಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಿಂದ ದೂರ ಶಿಕ್ಷಣ ಮಾದರಿ...

Homeಶಿಕ್ಷಣ

ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ :

ದಾವಣಗೆರೆ : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ (ಸಾಮಾನ್ಯ ಪದವಿ ಮಟ್ಟದ ಕೋರ್ಸಿನವಿದ್ಯಾರ್ಥಿಗಳಿಗೆ...

Homeಶಿಕ್ಷಣ

ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ :

ದಾವಣಗೆರೆ : ಅಲ್ಪಸಂಖ್ಯಾತರ ಸಮೂದಾಯಕ್ಕೆ ಸೇರಿದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ, ಪಾರ್ಸಿ) ವಿದ್ಯಾರ್ಥಿಗಳಿಗೆ ...

Homeಶಿಕ್ಷಣ

ಪ್ರತಿಭಾವಂತ ವಿದ್ಯಾರ್ಥಿಗಳಿಗೆ ‘ಕನ್ನಡ ರತ್ನ ಪ್ರಶಸ್ತಿ’ ಪ್ರದಾನ

ಹರಪನಹಳ್ಳಿ :  ತಾವು ಸಂಪಾದಿಸಿದ ಆದಾಯದಲ್ಲಿ ಸ್ವಲ್ಪ ಹಣ ಕನ್ನಡ ಸೇವೆಗಾಗಿ ಮೀಸಲಿಟ್ಟು ಕೆಲಸ ಮಾಡುತ್ತಿರುವ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.