Home ಸುದ್ದಿಗಳು ಅಂಬೇಡ್ಕರ ಪರಿನಿರ್ವಾಣ ಆಚರಣೆ ನಿರ್ಲಕ್ಷ್ಯ : ಕೆ.ಸುಭಾಷ್
ಸುದ್ದಿಗಳು

ಅಂಬೇಡ್ಕರ ಪರಿನಿರ್ವಾಣ ಆಚರಣೆ ನಿರ್ಲಕ್ಷ್ಯ : ಕೆ.ಸುಭಾಷ್

Share
ದಲಿತ ಸಂಘರ್ಷ ಸಮಿತಿ,ಭೀಮವಾದ ಹರಪನಹಳ್ಳಿ.
Share

 ಹರಪನಹಳ್ಳಿ : ‌ ಪರಿನಿರ್ವಾಣ ದಿನ ವಿಶ್ವಜ್ಞಾನಿ ಬಾಬಾ ಸಾಹೇಬ್ ಅಂಬೇಡ್ಕರ ಅವರ ಭಾವಚಿತ್ರವಿಟ್ಟು ಪೂಜಿಸಬೇಕು ಎಂದು ತಹಶೀಲ್ದಾರ ಅವರು ಡಿ.4ರಂದೇ ಆದೇಶ ಮಾಡಿದ್ದಾರೆ. ಆದರೆ ಪರಿನಿರ್ವಾಣ ಆಚರಣೆ ನಿರ್ಲಕ್ಷಿಸಿರುವ ಶಾಲಾ ಶಿಕ್ಷಣ ಇಲಾಖೆ ಬಿಇಒ ಲೇಪಾಕ್ಷಪ್ಪ ಅವರ ವಿರುದ್ಧ ತಾಲ್ಲೂಕು ಆಡಳಿತ ಮತ್ತು ಜಿಲ್ಲಾಧಿಕಾರಿಗಳು ಶಿಸ್ತು ಕ್ರಮ ಜರುಗಿಸಬೇಕು ಎಂದು ದಲಿತ ಸಂಘರ್ಷ ಸಮಿತಿ (ಭೀಮವಾದ) ತಾಲ್ಲೂಕು ಅಧ್ಯಕ್ಷ ಕೆ.ಸುಭಾಷ್ ಆಗ್ರಹಿಸಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಗೆ ಬೇಟಿಕೊಟ್ಟಿದ್ದ ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳು, ಅಲ್ಲಿನ ಅಧಿಕಾರಿಗಳನ್ನು ಪ್ರಶ್ನಿಸಿದಾಗ ಅವರು ಹಾರಿಕೆ ಉತ್ತರ ಕೊಟ್ಟಿದ್ದಾರೆ. ಇದನ್ನು ಖಂಡಿಸಿದ ಪದಾಧಿಕಾರಿಗಳು ಪರಿನಿರ್ವಾಣ ಆಚರಿಸುವ ತನಕ ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದು ದೂರಿದರು.

ಕೃಷಿ ಇಲಾಖೆ, ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ ಸೇರಿ ಆಚರಣೆ ಮಾಡಿ, ವರದಿ ಸಲ್ಲಿಸದ ಎಲ್ಲ ಇಲಾಖೆಗಳ ತಾಲ್ಲೂಕು ಮಟ್ಟದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಲೇಪಾಕ್ಷಪ್ಪ ಅವರು ಅಂಬೇಡ್ಕರ ಭಾವಚಿತ್ರವಿರಿಸಿ ಪೂಜೆ ಸಲ್ಲಿಸಿದ ಬಳಿಕ ಮಾತನಾಡಿ, ಅಚಾತುರ್ಯದಿಂದ ಪರಿನಿರ್ವಾಣ ಆಚರಣೆ ವಿಳಂಬವಾಗಿದೆ. ಮುಂದಿನ ದಿನಗಳಲ್ಲಿ ಈ ರೀತಿ ಆಗದಂತೆ ಎಚ್ಚರಿಕೆ ವಹಿಸಲಾಗುವುದು, ವಿಳಂಬ ಆಗಿದ್ದಕ್ಕೆ ಕ್ಷಮೆಯಾಚಿಸಿದ್ದಾರೆ. ಬಳಿಕ ಸಂಘಟಕರು ಪ್ರತಿಭಟನೆ ಹಿಂಪಡೆದು, ಅಲ್ಲಿಂದ ತೆರಳಿದ್ದಾರೆ.

ಡಾ.ಬಿ.ಆರ್.ಅಂಬೇಡ್ಕರ ಸರ್ಕಲ್‌ ನಲ್ಲಿ ಆಚರಣೆ

ದಲಿತ ಸಂಘರ್ಷ ಸಮಿತಿ(ಭೀಮವಾದ)ದಿಂದ ಆಚರಿಸಿದ 69ನೇ ಪರಿನಿರ್ವಾಣ  ಆಚರಣೆಯಲ್ಲಿ ಸಹಾಯಕ ನಿರ್ದೇಶಕ ಎಸ್.ಆರ್.ಗಂಗಪ್ಪ, ಮುಖ್ಯಾಧಿಕಾರಿ ರೇಣುಕಾ ಎಸ್.ದೇಸಾಯಿ, ನಿಲಯ ಮೇಲ್ವಿಚಾರಕ ಎನ್.ಜಿ.ಬಸವರಾಜ್, ತಾಲ್ಲೂಕು ಅಧ್ಯಕ್ಷ ಕೆ.ಸುಭಾಷ್, ಛತ್ರಪತಿ, ಬಿದ್ದಾಡಿ ನಾಗರಾಜ್, ಜಯರಾಜ್, ಭರತ್, ಶ್ರೀಕಾಂತ, ರಮೇಶ್,ಕೋಟೆಪ್ಪ ಇದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಜೂ.18 ರಂದು ಪರಿಶಿಷ್ಟ ಜಾತಿ ಜನಾಂಗದವರ ಕುಂದು-ಕೊರತೆ ಆಲಿಕೆ ಸಭೆ

ಬಳ್ಳಾರಿ : ಜಿಲ್ಲೆಯ ಪರಿಶಿಷ್ಟ ಜಾತಿ ಜನಾಂಗದವರ ಸಮಸ್ಯೆಗಳನ್ನು ಆಲಿಸಿ, ಪರಿಹರಿಸಲು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ...

ಹರಪನಹಳ್ಳಿ ಪೊಲೀಸ್‌
Homeಸುದ್ದಿಗಳು

ಹರಪನಹಳ್ಳಿಯಲ್ಲಿ ಪೊಲೀಸರ ‘ಕಾಲ್ನಡಿಗೆ ಗಸ್ತು’

ಹರಪನಹಳ್ಳಿ : ನಗರದಲ್ಲಿ ಅಪರಾಧ ಪ್ರಕರಣಗಳಿಗೆ ಬ್ರೇಕ್ ಹಾಕಲು ನಮ್ಮ ಪೊಲೀಸ್ ಇಲಾಖೆ ಒಂದು ಸೂಪರ್...

dc hosapete
Homeಸುದ್ದಿಗಳು

ನಿರ್ಲಕ್ಷ್ಯ ತೋರಿದರೆ ಕಠಿಣ ಕ್ರಮ – ಕವಿತಾ ಎಸ್. ಮನ್ನಿಕೇರಿ ಖಡಕ್ ಎಚ್ಚರಿಕೆ

ಹೊಸಪೇಟೆ (ವಿಜಯನಗರ): ಜಿಲ್ಲೆಯಲ್ಲಿ ಕುಂಠಿತಗೊಂಡಿರುವ 7ನೇ ಸಣ್ಣ ನೀರಾವರಿ ಹಾಗೂ 2ನೇ ಜಲಮೂಲಗಳ ಗಣತಿಯನ್ನು ಸರ್ಕಾರದ...

harapanahallipdo
ಸುದ್ದಿಗಳು

ಪಂಚಾಯತ್ ಇಲಾಖೆ ನೌಕರರ ಸಂಘಕ್ಕೆ ಆಯ್ಕೆ

ಹರಪನಹಳ್ಳಿ :  ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಇಲಾಖೆಯ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷರಾಗಿ ಹಲವಾಗಲು...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.