Home ದಾವಣಗೆರೆ ಹೆಸರುವಾಸಿಗೆ ಶಿವಶಂಕರಪ್ಪ ಕೊಡುಗೆ ಅಪಾರ
Homeರಾಜಕೀಯ

ದಾವಣಗೆರೆ ಹೆಸರುವಾಸಿಗೆ ಶಿವಶಂಕರಪ್ಪ ಕೊಡುಗೆ ಅಪಾರ

Share
ದಾವಣಗೆರೆ ಹೆಸರುವಾಸಿಗೆ ಶಿವಶಂಕರಪ್ಪ ಕೊಡುಗೆ ಅಪಾರ
Share

ಹರಪನಹಳ್ಳಿ : ದಾವಣಗೆರೆ ನಗರ ಪ್ರದೇಶವಾಗಿ, ಶಿಕ್ಷಣ ಕೇಂದ್ರವಾಗಿ ದೇಶದ ಗಮನ ಸೆಳೆಯುವಂತೆ ಮಾಡುವಲ್ಲಿ ಹಿರಿಯ ರಾಜಕಾರಣಿಯಾಗಿದ್ದ ಶಾಮನೂರು ಶಿವಶಂಕರಪ್ಪ ಅವರ ಪಾತ್ರ ದೊಡ್ಡದು ಎಂದು ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ವೈ.ಡಿ.ಅಣ್ಣಪ್ಪ ಹೇಳಿದರು.

ನಗರದ ಸರ್ಕಾರಿ ನೌಕರರ ಭವನದಲ್ಲಿ ಬುಧವಾರ ಆಯೋಜಿಸಿದ್ದ ಶಾಮನೂರು ಶಿವಶಂಕರಪ್ಪ ಅವರ ಶ್ರದ್ಧಾಂಜಲಿ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.ದಕ್ಷಿಣ ಭಾರತವೇ ತಿರುಗಿ ನೋಡುವಂತಹ ಶಿಕ್ಷಣ ಮತ್ತು ಉದ್ಯಮ ಸಾಮ್ರಾಜ್ಯ ಕಟ್ಟಿ ಇಂದಿನ ಪೀಳಿಗೆಗೆ ಸ್ಫೂರ್ತಿಯಾಗಿದ್ದಾರೆ. ಅವರು ತಳಮಟ್ಟದಿಂದ ಕೆಲಸ ಮಾಡಿ, ಮರವಾಗಿ ಲಕ್ಷಾಂತರ ಜನತೆಗೆ ನೆರಳು ಕೊಟ್ಟಿದ್ದಾರೆ. ಅಂತಹ ಮಹನೀಯ ರಾಜಕಾರಣಿ ನಮಗೆಲ್ಲಾ ಆದರ್ಶವಾಗಿದ್ದಾರೆ ಎಂದರು.

ಪುರಸಭೆ ಮಾಜಿ ಅಧ್ಯಕ್ಷ. ಎಚ್.ಕೆ.ಹಾಲೇಶ ಮಾತನಾಡಿ, 10ನೇ ತರಗತಿ ಮಾತ್ರ ಓದಿದ್ದ ಶಿವಶಂಕರಪ್ಪ ಅವರು ಉದ್ದಿಮೆ, ಶಿಕ್ಷಣ ಕ್ಷೇತ್ರವನ್ನು ಕಟ್ಟಿ ಬೆಳೆಸುವ ಮೂಲಕ ದಾವಣಗೆರೆ ನಗರವನ್ನು ಕರ್ನಾಟಕದ ಮ್ಯಾಂಚೆಸ್ಟರ್ ಆಗಿಸುವಲ್ಲಿ ಪ್ರಮುಖರಾಗಿದ್ದಾರೆ. ಅವರು ಕಟ್ಟಿ ಬೆಳೆಸಿದ ಬಾಪೂಜಿ ವಿದ್ಯಾಸಂಸ್ಥೆ ಪ್ರಪಂಚದಲ್ಲಿಯೇ ಪ್ರಸಿದ್ಧಿಯಾಗಿದೆ ಎಂದು ಅವರ ಸಾಧನೆಗಳನ್ನು ವಿವರಿಸಿದರು.  ಸಾಧರ ಲಿಂಗಾಯತ  ಸಮಾಜದ ತಾಲ್ಲೂಕು ಅಧ್ಯಕ್ಷ ಗುಂಡಗತ್ತಿ ಬಂದೋಳ್ ಮಂಜುನಾಥ ಮಾತನಾಡಿ, ಶಿವಶಂಕರಪ್ಪ ಅವರಿ ಜನಕಲ್ಯಾಣ ಟ್ರಸ್ಟ್ ಸ್ಥಾಪಿಸಿ, ಬಡ ವಿದ್ಯಾರ್ಥಿಗಳಿಗೆ ಉಚಿತ ಸ್ಕಾಲರ್ ಶಿಪ್ ಕೊಡಲು ರೂ.5 ಕೋಟಿ ಠೇವಣಿ ಇಟ್ಟಿದ್ದಾರೆ. ಇದರಿಂದ ಸಾವಿರಾರು ಮಕ್ಕಳು ವಿದ್ಯಾಭ್ಯಾಸದ ನೆರವು ಪಡೆದಿದ್ದಾರೆ. ಪತ್ರಕರ್ತರ ಮಕ್ಕಳಿಗಾಗಿ ರೂ.1 ಕೋಟಿ ಮೀಸಲಿಟ್ಟಿರುವುದು ಸಹ ಅವರ ಕಾಳಜಿಯನ್ನು ತೋರಿಸುತ್ತದೆ ಎಂದರು.

ಕಾಂಗ್ರೆಸ್ ಪಕ್ಷದ ಮುಖಂಡ ಮುತ್ತಿಗಿ ಜಂಬಣ್ಣ, ಶುಕ್ರುಸಾಬ್,    ವಾಲ್ಮೀಕಿ ನಾಯಕ ಸಮಾಜದ ಮಾಜಿ ಅಧ್ಯಕ್ಷ ಕೆ.ಉಚ್ಚೆಂಗೆಪ್ಪ,  ವಾಲ್ಮೀಕಿ ನಾಯಕ ಸಮಾಜದ ಕಾರ್ಯದರ್ಶಿ ಎಚ್.ಕೆ.ಮಂಜುನಾಥ, ನಿವೃತ್ತ ಶಿಕ್ಷಕರಾದ ತೆಲಿಗಿ ಅಂಜಿನಪ್ಪ, ಬಾಲೇನಹಳ್ಳಿ ರೇವಣಸಿದ್ದಪ್ಪ, ಬೇಲೂರು ಸಿದ್ದೇಶ್ ಮಾತನಾಡಿದರು.   ಮುಖಂಡರಾದ ಎಸ್.ಶಿವಪ್ಪ, ಕಡಕೋಳ್ ನೂರುದ್ದೀನ್ , ಸತ್ತರ್ ಸಾಹೇಬ್,  ಭಾವಿಕಟ್ಟಿ ಭರ್ಮಪ್ಪ,  ಮಂಡಕ್ಕಿ ಸುರೇಶ, ತಳವಾರ ರಾಜಪ್ಪ, ಗುಂಡಿ ಮಂಜುನಾಥ, ಪಟ್ನಾಮದ ಪರುಶುರಾಮ,  ಗಿಡ್ಡಳ್ಳಿ  ನಾಗರಾಜ, ಮೈದೂರು ಮಾರುತಿ, ಕವಸರ ವಿಜಯಕುಮಾರ್, ರಾಯದುರ್ಗದ ವಾಗೀಶ, ಮ್ಯಾಕಿ ದುರುಗಪ್ಪ,  ದ್ಯಾಮಜ್ಜಿ ದಂಡ್ಯೆಪ್ಪ   ಇದ್ದರು.

Share

Leave a comment

Leave a Reply

Your email address will not be published. Required fields are marked *

Related Articles
kannada
Homeಕ್ರೀಡೆ

ಹರಪನಹಳ್ಳಿಯಲ್ಲಿ ಗಮನ ಸೆಳೆದ ಬೀಳ್ಕೊಡುಗೆ

ಹರಪನಹಳ್ಳಿ : ಕ್ರೀಡೆ ಮತ್ತು ಇತರ ದೈಹಿಕ ಚಟುವಟಿಕೆಗಳು ಪಠ್ಯೇತರ ಚಟುವಟಿಕೆಗಳ ಪ್ರಮುಖ ಭಾಗವಾಗಿದ್ದು ವಿದ್ಯಾರ್ಥಿಗಳು...

nivrutta
Homeಕಲೆಕ್ರೀಡೆಶಿಕ್ಷಣ

ನೌಕರರ ಹಿತರಕ್ಷಣೆಗೆ ಸಂಘ ಸದಾ ಬದ್ಧ: ಎನ್.ಜಿ. ಮನೋಹರ ಭರವಸೆ

ಹರಪನಹಳ್ಳಿ: "ಸರ್ಕಾರಿ ನೌಕರರಿಗೆ ಯಾವುದೇ ರೀತಿಯ ಸಮಸ್ಯೆಗಳು ಎದುರಾಗದಂತೆ ನೋಡಿಕೊಳ್ಳಲು ರಾಜ್ಯ ನೌಕರರ ಸಂಘ ಹಾಗೂ ತಾಲೂಕು ಘಟಕವು ಸದಾ ನಿಮ್ಮ ಬೆನ್ನೆಲುಬಾಗಿ ನಿಲ್ಲಲಿದೆ" ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷರಾದ ಎನ್.ಜಿ. ಮನೋಹರ ಅವರು ಭರವಸೆ ನೀಡಿದರು. ಇಲ್ಲಿನ ಸರ್ಕಾರಿ ನೌಕರರ ಸಂಘದ ಸಭಾಂಗಣದಲ್ಲಿ ಭಾನುವಾರ ತಾಲೂಕು ಘಟಕದ ವತಿಯಿಂದ ಆಯೋಜಿಸಲಾಗಿದ್ದ ವಿವಿಧ ಇಲಾಖೆಗಳ ನಿವೃತ್ತ ನೌಕರರು, ನಿವೃತ್ತ ಶಿಕ್ಷಕರು ಹಾಗೂ ಬಡ್ತಿ ಹೊಂದಿದ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಸನ್ಮಾನ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. "ಶಿಕ್ಷಕರು ವೃತ್ತಿಯಿಂದ ನಿವೃತ್ತರಾಗುತ್ತಿದ್ದಾರೆಯೇ ವಿನಃ ಅವರ ಅನುಭವದಿಂದಲ್ಲ. ನಿವೃತ್ತಿಯ ನಂತರವೂ ನಾವು ಮತ್ತು ನಿವೃತ್ತ ನೌಕರರ ಸಂಘ ಸದಾ ನಿಮ್ಮ ಜೊತೆಗಿರುತ್ತೇವೆ. ನಿವೃತ್ತ ಜೀವನದಲ್ಲಿ ಪ್ರತಿಯೊಬ್ಬರೂ ಪ್ರತಿದಿನ ವ್ಯಾಯಾಮ, ಪುಸ್ತಕ ಓದುವುದು, ತೋಟಗಾರಿಕೆ, ಸಂಗೀತ, ಕಲೆ, ಯೋಗ ಅಥವಾ ವಾಕಿಂಗ್ ಮಾಡುವ ಮೂಲಕ ತಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಉತ್ತಮವಾಗಿ ಕಾಪಾಡಿಕೊಳ್ಳಬೇಕು" ಎಂದು ಮನೋಹರ ಅವರು ಕಿವಿಮಾತು ಹೇಳಿದರು. ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ಜಿಲ್ಲಾಧ್ಯಕ್ಷೆ ಲತಾ ಟಿ.ಎಚ್.ಎಂ ಮಾತನಾಡಿ, "ಮಹಿಳಾ ನೌಕರರಿಗೆ ಋತುಚಕ್ರದ ರಜೆ ಘೋಷಿಸುವಂತೆ ಸರ್ಕಾರಕ್ಕೆ ನಮ್ಮ ಸಂಘಟನೆಯು ಮೊದಲೇ ಧ್ವನಿಗೂಡಿಸಿ ಒತ್ತಾಯಿಸಿತ್ತು. ಹರಪನಹಳ್ಳಿ ತಾಲೂಕಿನಲ್ಲಿ ಈ ಹಿಂದೆ ನೌಕರರ ಪರವಾಗಿ ಇಂತಹ ಸಕ್ರಿಯ ಕಾರ್ಯಕ್ರಮಗಳು ನಡೆದಿರಲಿಲ್ಲ. ಆದರೆ ಪ್ರಸ್ತುತ ಅಧ್ಯಕ್ಷರಾದ ಮನೋಹರ್ ಅವರು ಹತ್ತಾರು ಜನಪರ ಕಾರ್ಯಕ್ರಮಗಳ ಮೂಲಕ ತಾಲೂಕು ಸಂಘಟನೆಯನ್ನು ಇಡೀ ರಾಜ್ಯಕ್ಕೆ ಮಾದರಿಯಾಗಿಸಿದ್ದಾರೆ. ಸಂಘಟನೆಗಳು ವೃತ್ತಿಯ ಜೊತೆಗೆ ಪ್ರವೃತ್ತಿಯಾಗಬೇಕೇ ಹೊರತು, ಸಂಘಟನೆಯೇ ವೃತ್ತಿಯಾಗಬಾರದು. ನಾವೆಲ್ಲರೂ ಸೇರಿ ತಾಲೂಕಿನ ಶೈಕ್ಷಣಿಕ ಗುಣಮಟ್ಟವನ್ನು ಹೆಚ್ಚಿಸಿ, ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಶ್ರಮಿಸೋಣ" ಎಂದರು. ಮಂಜುನಾಥ ಪೂಜಾರ್ ಅವರು ಮಾತನಾಡಿ, "ಶಾಲೆಗಳಲ್ಲಿ ೩೦ ವರ್ಷಗಳಿಗೂ ಹೆಚ್ಚು ಕಾಲ ಸುದೀರ್ಘ ಸೇವೆ ಸಲ್ಲಿಸಿ, ಸಾವಿರಾರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿರುವ ಶಿಕ್ಷಕರ ಸಮಯಪಾಲನೆ, ಕರ್ತವ್ಯ ನಿಷ್ಠೆ ಮತ್ತು ಮಕ್ಕಳೊಂದಿಗಿನ ಮಧುರ ಬಾಂಧವ್ಯ ನಿಜಕ್ಕೂ ಶ್ಲಾಘನೀಯ. ಇವರ ನಿವೃತ್ತ ಜೀವನ ಸುಖಕರವಾಗಿರಲಿ" ಎಂದು ಹಾರೈಸಿದರು. ಬಿಇಒ ಕಚೇರಿಯ ಇಸಿಒ ವೀರೇಶ್ ಮಾತನಾಡಿ, ನಿವೃತ್ತ ಹಾಗೂ ಬಡ್ತಿ ಪಡೆದ ಮುಖ್ಯ ಶಿಕ್ಷಕರನ್ನು ಕರೆಸಿ ಗೌರವಿಸುತ್ತಿರುವ ನೌಕರರ ಸಂಘದ ಕಾರ್ಯ ಸ್ತುತ್ಯರ್ಹ ಎಂದರು. ಶಿಕ್ಷಕ ಬಿ. ಆಂಜನೇಯ ಅವರೂ ಸಹ ವೇದಿಕೆಯಲ್ಲಿ ಅನಿಸಿಕೆಗಳನ್ನು ಹಂಚಿಕೊಂಡರು. ಇದೇ ವೇಳೆ ನಿವೃತ್ತ ಶಿಕ್ಷಕ ಸಲಾಂ ಅವರು "ಪ್ರೀತಿಯ ಗಾಳಿ ಬೀಸುತ್ತಿದೆ..." ಎಂಬ ಗೀತೆಯನ್ನು ಹಾಡಿ ನೆರೆದಿದ್ದವರನ್ನು ರಂಜಿಸಿದರು.  ಸರ್ಕಾರಿ ನೌಕರರ ಸಂಘದ ರಾಜ್ಯ...

darmastala yojane
Homeರಾಜಕೀಯವಿಶೇಷ ವರದಿಗಳು

ದೇವರ ತಿಮ್ಲಾಪುರದಲ್ಲಿ ನಡೆದ ಮದ್ಯವರ್ಜನ ಶಿಬಿರದ ಮಾಹಿತಿ ಇಲ್ಲಿದೆ

ಹರಪನಹಳ್ಳಿ :  "ಇದು ಕೇವಲ ಶಿಬಿರವಲ್ಲ, ಕುಟುಂಬಗಳನ್ನು ಕಟ್ಟುವ ಹಾಗೂ ಹೆಣ್ಣುಮಕ್ಕಳ ಕಣ್ಣೀರು ಒರೆಸುವ ಪವಿತ್ರ ಕಾರ್ಯ. ಅಂಧಕಾರದಲ್ಲಿದ್ದ ಬಾಳಿಗೆ ಬೆಳಕು ನೀಡುವ ಈ ಕಾರ್ಯ ಸಮಾಜಕ್ಕೆ ಮಾದರಿ ಎಂದು ನೀಲಗುಂದ ಗುಡ್ಡದ ವಿರಕ್ತಮಠದ ಚೆನ್ನಬಸವ ಶಿವಯೋಗಿ ಸ್ವಾಮೀಜಿ ತಿಳಿಸಿದರು. ನಗರದ ಹೊರವಲಯದ ದೇವರ ತಿಮ್ಮಾಲಪುರ ಗ್ರಾಮದ ಶ್ರೀ ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನದ ಸಮುದಾಯ ಭವನದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಜಿಲ್ಲಾ ಜನಜಾಗೃತಿ ವೇದಿಕೆ ಟ್ರಸ್ಟ್ ವತಿಯಿಂದ ಆಯೋಜಿಸಲಾಗಿದ್ದ '2060ನೇ ಮದ್ಯವರ್ಜನ ಶಿಬಿರ' ಅತ್ಯಂತ ಯಶಸ್ವಿಯಾಗಿ ಮುಕ್ತಾಯಗೊಂಡಿದೆ.ಸಂಸಾರದಲ್ಲಿ ಸರಸ, ವಿರಸಗಳು ಬಂದು...

ಕರ್ನಾಟಕದ ಮುಂದಿನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವಿರೋಧ ಆಯ್ಕೆ!
Homeರಾಜಕೀಯ

ಕರ್ನಾಟಕದ ಮುಂದಿನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವಿರೋಧ ಆಯ್ಕೆ!

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಶನಿವಾರ ಅತ್ಯಂತ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಸದಾ ಕುತೂಹಲ ಮೂಡಿಸುತ್ತಿದ್ದ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.