ಹರಪನಹಳ್ಳಿ : ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ ಬೆಳೆಸಲು ಎನ್.ಎಸ್.ಎಸ್.ಶಿಬಿರಗಳು ಸಹಕಾರಿ ಆಗುತ್ತವೆ ಎಂದು ಉಪನ್ಯಾಸಕ ಎಚ್.ಶಿವಾನಂದ ಹೇಳಿದರು.
ತಾಲ್ಲೂಕಿನ ಹೊಂಬಳಗಟ್ಟಿ ಗ್ರಾಮದಲ್ಲಿ ತರಳಬಾಳು ಜಗದ್ಗುರು ವಿದ್ಯಾಸಂಸ್ಥೆಯ ಎಚ್.ಪಿ.ಎಸ್. ಪದವಿ ಮಹಾವಿದ್ಯಾಲಯ ಆಯೋಜಿಸಿದ್ದ ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಯುವಕರು ಸಮಾಜದ ವರ್ತಮಾನ ಮಾತ್ರವಲ್ಲ, ಭವಿಷ್ಯದ ಶಿಲ್ಪಿಗಳು. ಸೃಜನಶೀಲ ಗುಣ ಬೆಳೆಸಿಕೊಂಡರೆ ಯಾವುದೇ ಕ್ಷೇತ್ರದಲ್ಲಿ ಉನ್ನತ ಸಾಧನೆ ಮಾಡಬಹುದು ಎಂದರು.
ಹಡಗಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ಸಹಾಯಕ ಪ್ರಾಧ್ಯಾಪಕ ಡಾ.ಭೀಮಪ್ಪ ಮಾತನಾಡಿ, ಉಳಿತಾಯ ಮತ್ತು ದೇಶದ ಅಭಿವೃದ್ದಿ ಮಹತ್ವವನ್ನು ಪ್ರತಿಯೊಬ್ಬರು ತಿಳಿದುಕೊಳ್ಳುವ ಅಗತ್ಯವಿದೆ ಎಂದರು. ಬಸವೇಶ್ವರ ಯುವಕ ಸಂಘದ ಅಧ್ಯಕ್ಷ ಎಚ್.ಎಂ.ಬಸವರಾಜಯ್ಯ, ಪ್ರಾಚಾರ್ಯ ಮುತ್ತೇಶ, ಎನ್.ಎಸ್.ಎಸ್. ಅಧಿಕಾರಿ ಮಂಜುನಾಥ ಮಾಳ್ಗಿ, ಉಪನ್ಯಾಸಕ ಕೆ.ಕೊಟ್ರಗೌಡ, ಸಹಾಯಕ ಪ್ರಾಧ್ಯಾಪಕ ಹರಾಳು ಬುಳ್ಳಪ್ಪ, ಎಚ್.ಗುರುಬಸವರಾಜ, ಎ.ಗೀತಾ, ಭವಾನಿ, ನವೀನಕುಮಾರ ಇದ್ದರು.
