ಹರಪನಹಳ್ಳಿ : ಅಂಗವಿಕಲ ಮಕ್ಕಳನ್ನು ಪಾಲನೆ ಪೋಷಣೆ ಮಾಡುವ ಪಾಲಕರು ಕಾರ್ಯ ಸಮಾಜಕ್ಕೆ ಮಾದರಿಯಾಗಿದೆ ಎಂದು ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ ಹೇಳಿದರು.
ನಗರದ ತರಳಬಾಳು ಕಲ್ಯಾಣ ಮಂಟಪದಲ್ಲಿ ತಾಲ್ಲೂಕು ಆಡಳಿತ ಮಂಗಳವಾರ ಆಯೋಜಿಸಿದ್ದ ವಿಶ್ವ ವಿಕಲಚೇತನ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು. ವಿಕಲಚೇತನರು ದೇವರ ಮಕ್ಕಳಿದ್ದಂತೆ, ಅವರಿಗೆ ಅವಕಾಶಗಳನ್ನು ಒದಗಿಸಿಕೊಡಬೇಕು ಎಂದರು. ಕಾರ್ಯನಿರ್ವಾಹಕ ಅಧಿಕಾರಿ ವೈ ಎಚ್ ಚಂದ್ರಶೇಖರ್ ಮಾತನಾಡಿ, ವಿಕಲಚೇತನರ ಕಲ್ಯಾಣಕ್ಕಾಗಿ ಶೇ.೫ರಷ್ಟು ಮೀಸಲಾತಿ ನಿಗಧಿಪಡಿಸಲಾಗಿದೆ ಎಂದು ತಿಳಿಸಿದರು. ಪುರಸಭೆ ಮಾಜಿ ಅಧ್ಯಕ್ಷ ಡಿ.ಅಬ್ದುಲ್ ರೆಹಮಾನ್ ಅವರು ಬೈಕ್ ರ್ಯಾಲಿಗೆ ಚಾಲನೆ ನೀಡಿದರು.
ಕೀಲು ಮೂಳೆ ತಜ್ಞ ವೈದ್ಯ ಡಾ.ತಿಪ್ಪೇಸ್ವಾಮಿ ಮಾತನಾಡಿದರು. ವಿವಿಧ ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಸಹಾಯಕ ನಿರ್ದೇಶಕ ರಾದ ಸೋಮಶೇಖರ್ , ವೀರಣ್ಣ ಲಕ್ಕಣ್ಣನವರ್, ಜೆಮರೇಣುಕಾ, ಬಿಸಿಎಂ ವಿಸ್ತರಣಾಧಿಕಾರಿ ಭೀಮಪ್ಪ, ಕ್ಷೇತ್ರ ಸಮನ್ವಯಾಧಿಕಾರಿ ಹೊನ್ನತ್ತೆಪ್ಪ, ಆರ್.ಧನರಾಜ್ ಇದ್ದರು.
Leave a comment