ಹರಪನಹಳ್ಳಿ : ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಚಾಲನೆ ನೀಡುವ ಸಮಾರಂಭ ನಗರದ ಹಳೆ ಬಸ್ ನಿಲ್ದಾಣದಲ್ಲಿ ನೆರವೇರಲಿದೆ ಎಂದು ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ ಹೇಳಿದರು.
ಭಾನುವಾರ ವೇದಿಕೆಯ ಸಿದ್ದತೆಗಳನ್ನು ಪರಿಶೀಲಿಸಿದ ಅವರು ಮಾತನಾಡಿ, ಕಾರ್ಯಕ್ರಮಕ್ಕೆ ಸಚಿವರಾದ ಬೈರತಿ ಸುರೇಶ್, ಬಿ.ಜೆಡ್. ಝಮೀರ್ ಅಹ್ಮದ್ ಖಾನ್, ಪ್ರಿಯಾಂಕ ಖರ್ಗೆ, ರಹಿಂಖಾನ್, ಬೋಸರಾಜು, ಮನೋಹರ್ ಲಾಲ್ ಖಟ್ಟರ್, ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ.
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ದಿ ಇಲಾಖೆ, ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ನಗರಸಭೆ ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲಾಗುವುದು. ಕಾರ್ಮಿಕ ಇಲಾಖೆಯಿಂದ 900 ಜನ ಕಾರ್ಮಿಕರಿಗೆ ಕಿಟ್ ವಿತರಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು. ಕಾರ್ಮಿಕರು, ಮಹಿಳೆಯರಿಗೆ ಪ್ರತ್ಯೇಕ ಆಸನ ವ್ಯವಸ್ಥೆ ಮಾಡಲಾಗಿದೆ. ಆಗಮಿಸುವ ಕಾರ್ಮಿಕರು, ಕಾರ್ಯಕರ್ತರು ಶಾಂತರೀತಿಯಿಂದ ಸಮಾರಂಭ ಮುಗಿಯುವ ತನಕ ಇದ್ದು, ಯಶಸ್ವಿ ಮಾಡಿಕೊಡಬೇಕು. ಮದ್ಯಾಹ್ನ ಸರ್ಕಾರಿ ಜ್ಯೂನಿಯರ್ ಕಾಲೇಜು ಆವರಣದಲ್ಲಿ ಸಾರ್ವಜನಿಕ ಊಟದ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು. ಕಾಂಗ್ರೆಸ್ ಪಕ್ಷದ ಮುಖಂಡರಾದ ಎಚ್.ಎಂ.ಮಲ್ಲಿಕಾರ್ಜುನ, ಎಂ.ವಿ.ಅಂಜಿನಪ್ಪ, ಮತ್ತೂರು ಬಸವರಾಜ್, ತಿಮ್ಮನಾಯ್ಕ ಇತರರಿದ್ದರು.
Leave a comment