Home ಸುದ್ದಿಗಳು ವೈ.ಡಿ.ಅಣ್ಣಪ್ಪ ಅವರ ಹುಟ್ಟು ಹಬ್ಬ ಆಚರಣೆ
ಸುದ್ದಿಗಳು

ವೈ.ಡಿ.ಅಣ್ಣಪ್ಪ ಅವರ ಹುಟ್ಟು ಹಬ್ಬ ಆಚರಣೆ

Share
ಅರಸೀಕೆರೆ ಸಾಹುಕಾರ ವೈಡಿ ಅಣ್ಣಪ್ಪ ಅವರು ಹುಟ್ಟು ಹಬ್ಬ ಆಚರಣೆ
Share

ಹರಪನಹಳ್ಳಿ : ಬಡವರಿಗೆ, ನಿರ್ಗತಿಕರಿಗೆ ನೆರವು ನೀಡುವಂತಹ ಸಮಾಜಮುಖಿ ಕೆಲಸಗಳು ಜನಮಾನಸದಲ್ಲಿ ಉಳಿಯುತ್ತವೆ ಎಂದು ಅರಸೀಕೆರೆ ಕೋಲಶಾಂತೇಶ್ವರ ಮಠದ ಶಾಂತಲಿಂಗ ರಾಜದೇಶಿಕೇಂದ್ರ ಸ್ವಾಮೀಜಿ ಅಭಿಪ್ರಾಯಪಟ್ಟರು.

ತಾಲ್ಲೂಕಿನ ಅರಸೀಕೆರೆ ಗ್ರಾಮದಲ್ಲಿ ತಾಲ್ಲೂಕು ವಾಲ್ಮೀಕಿ ಸಮಾಜದ ಅಧ್ಯಕ್ಷ, ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ವೈ.ಡಿ.ಅಣ್ಣಪ್ಪ ಅವರ 46ನೇ ವರ್ಷದ ಹುಟ್ಟು ಹಬ್ಬದ ಆಚರಣೆ ನಿಮಿತ್ತ ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು. ಕಷ್ಟವೆಂದು ಬಂದಾಗ ಯಾವುದೇ ಪಕ್ಷ, ಜಾತಿ, ಧರ್ಮ ನೋಡದೆ ಸಹಕಾರ ಮಾಡುತ್ತಿರುವ ವೈ.ಡಿ.ಅಣ್ಣಪ್ಪ ಅವರು ಸಮಾಜದಲ್ಲಿ ಮಾದರಿ ವ್ಯಕ್ತಿಯಾಗಿದ್ದಾರೆ ಎಂದರು.

ಯೋಗನರಸಿಂಹ ಸೌಹಾರ್ದ ಸಹಕಾರಿ ಬ್ಯಾಂಕ್‍ ನ ಬಿತ್ತಿಪತ್ರಗಳು, 2026ನೇ ವರ್ಷದ ಕ್ಯಾಲೆಂಡರ್ ಇದೇ ಸಂದರ್ಭದಲ್ಲಿ ಬಿಡುಗಡೆ ಮಾಡಲಾಯಿತು. ನೀಲಗುಂದ ಗುಡ್ಡದ ವಿರಕ್ತಮಠದ ಚನ್ನಬಸವ ಶಿವಯೋಗಿ ಸ್ವಾಮೀಜಿ ಸಾನ್ನಿದ್ಯವಹಿಸಿ ಮಾತನಾಡಿದರು.        ಇದೇ ಸಂದರ್ಭದಲ್ಲಿ ಕೊಟ್ಟೂರಿನ ಶಿವಯೋಗಿ ರಾಜೇಂದ್ರ ಮಹಾ ಸ್ವಾಮಿಗಳು, ಮಾಜಿ ಸಂಸದ ವೈ. ದೇವೇಂದ್ರಪ್ಪ, ಯರಬಳ್ಳಿ ಉಮಾಪತಿ,  ಸುಶೀಲಮ್ಮ, ಚಂದನ, ಸಾನ್ವಿ,  ಪ್ರಶಾಂತ್ ಪಾಟೀಲ್, ಲಕ್ಷ್ಮಿದೇವಿ ಅಣ್ಣಪ್ಪ, ನಂಜನಗೌಡ, ಫಣಿಯಾಪುರದ ಲಿಂಗರಾಜ್, ಯರಬಳ್ಳಿ ವಿಜಯ್ ಕುಮಾರ್, ಅರಸೀಕೆರೆಯ ಬಿ.ರಾಮಣ್ಣ,ಪೂಜಾರ್ ಮರಿಯಪ್ಪ, ವೈ.ಎ.ಮಿಂಚು, ವೈ.ಎ. ಪ್ರೀತಮ್, ಪರಶುರಾಮ್, ಶ್ರೀನಿವಾಸ ಇತರರಿದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಬರಪೀಡಿತ ತಾಲೂಕು ಘೋಷಣೆಗೆ ಆಗ್ರಹ: ತಹಸೀಲ್ದಾರರಿಗೆ ಬಿಜೆಪಿ ವತಿಯಿಂದ ಮನವಿ ಸಲ್ಲಿಕೆ

 ಹರಪನಹಳ್ಳಿ : ಇಂದು ಮಂಡಲ ಬಿಜೆಪಿ ವತಿಯಿಂದ ಬರಗಾಲದ ಕಾರಣದಿಂದ ಹರಪನಹಳ್ಳಿ ತಾಲೂಕನ್ನು ಬರಪೀಡಿತ ತಾಲೂಕನ್ನಾಗಿ...

Homeಸುದ್ದಿಗಳು

ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ವಿಜಯನಗರ(ಹೊಸಪೇಟೆ) : ತಾಲೂಕಿನ ವಿವಿಧ ಗ್ರಾಮ ಪಂಚಾಯತಿ, ಪಟ್ಟಣ ಪಂಚಾಯತಿ, ಪುರಸಭೆ, ನಗರಸಭೆ ವ್ಯಾಪ್ತಿಯಲ್ಲಿ ಖಾಲಿಯಿರುವ...

Homeಸುದ್ದಿಗಳು

ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ವಿಜಯನಗರ(ಹೊಸಪೇಟೆ) : ಹೊಸಪೇಟೆ ತಾಲೂಕಿನ ಸಮಗ್ರ ಗಣಿ ಪರಿಸರ ಪುನಶ್ಚೇತನ ಯೋಜನೆಯಡಿ ತೋಟಗಾರಿಕೆ ಇಲಾಖೆ ವತಿಯಿಂದ...

Homeಸುದ್ದಿಗಳು

ಲಾಕಪ್ ಡೆತ್ ಪ್ರಕರಣ ಸಿಬಿಐ ತನಿಖೆಗೆ ಆಗ್ರಹ

ಹರಪನಹಳ್ಳಿ: ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ನಡೆದ ಯುವಕನ ಲಾಕಪ್ ಡೆತ್ ಪ್ರಕರಣವನ್ನು ತೀವ್ರವಾಗಿ ಖಂಡಿಸಿ ಹಾಗೂ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು  ಸಿಪಿಐ(ಎಂಎಲ್) ಹಾಗೂ ಪ್ರಗತಿಪರ ಕಟ್ಟಡ ಕಾರ್ಮಿಕರ ಸಂಘಗಳ ಮುಖಂಡರು ಆಗ್ರಹಿಸಿದ್ದಾರೆ. ಚಿತ್ತಾರಗೇರಿಯಲ್ಲಿರುವ  ಮೃತ ಖಲೀಲ್‌ ಅವರ ಮನೆಗೆ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.