Home ಸುದ್ದಿಗಳು ಹರಪನಹಳ್ಳಿಯಲ್ಲಿ ಕೊರೆಗಾಂವ್‌ ವಿಜಯೋತ್ಸವ ಆಚರಣೆ 
ಸುದ್ದಿಗಳು

ಹರಪನಹಳ್ಳಿಯಲ್ಲಿ ಕೊರೆಗಾಂವ್‌ ವಿಜಯೋತ್ಸವ ಆಚರಣೆ 

Share
ಹರಪನಹಳ್ಳಿಯಲ್ಲಿ ಕೊರೆಗಾಂವ್‌ ವಿಜಯೋತ್ಸವ ಆಚರಣೆ 
Share

ಹರಪನಹಳ್ಳಿ : ದಲಿತ ಜನಾಂಗ ಮಾತ್ರವಲ್ಲದೇ ಎಲ್ಲಾ ಶೋಷಿತರ ವಿಮೋಚನೆಗಾಗಿ ಶಿಕ್ಷಣ, ಸ್ವಾಭಿಮಾನ, ಸಮಾನತೆಗಾಗಿ ಹೋರಾಟ ನಡೆಸಿದ ಕೋರೆಗಾಂವ್‌ ಯುದ್ದದ ಬಗ್ಗೆ ಎಲ್ಲರೂ ತಿಳಿದುಕೊಳ್ಳುವ ಅವಶ್ಯಕತೆ ಇದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಭೀಮವಾದ ತಾಲ್ಲೂಕು ಅಧ್ಯಕ್ಷ ಕೆ.ಸುಭಾಷ್‌ ತಿಳಿಸಿದರು.

ನಗರದ ಡಾ.ಬಿ.ಆರ್.ಅಂಬೇಡ್ಕರ ವೃತ್ತದಲ್ಲಿ ಗುರುವಾರ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಆಯೋಜಿಸಿದ್ದ 208ನೇ ಭೀಮ ಕೊರೆಗಾಂವ್‌ ವಿಜಯೋತ್ಸವ ಆಚರಣೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಭಾರತದ ಇತಿಹಾಸದಲ್ಲೇ ಹೆಸರಾದ ಕದನವೊಂದಿದ್ದರೆ ಅದು ಭೀಮ ಕೊರೆಗಾಂವ್‌ ಯುದ್ದ. 1818ರಲ್ಲಿ 28 ಸಾವಿರ ಮಂದಿಯ ವಿರುದ್ದ 500 ಮಂದಿ ಮಹರ್‌ ಸೈನಿಕರು ನಿರಂತರ 12 ಗಂಟೆ ಹೋರಾಟ ನಡೆಸಿ ಗೆಲುವು ಸಾಧಿಸಿದ ಯುದ್ದವಾಗಿದೆ ಎಂದು ಅಭಿಪ್ರಾಯಪಟ್ಟರು.

ಕೇಕ್‌ ಕತ್ತರಿಸಿ ಪರಸ್ಪರ ಸಿಹಿ ಹಂಚುವ ಮೂಲಕ ವಿಜಯೋತ್ಸವ ಸ್ಮರಿಸಿದರು. ಉಪಾಧ್ಯಕ್ಷ ನಾಗರಾಜ್ ಬಿದ್ದಾಡಿ,  ಡಿ.ಎಸ್.ಎಸ್.‌ ಮುಖಂಡ ಸಂತೋಷ್ ಪುಣಬಘಟ್ಟ, ಎ.ನಾಗೇಂದ್ರಪ್ಪ, ಇಸ್ಮಾಯಿಲ್‌ ಎಲಿಗಾರ, ಶಶಿಧರ ಪೂಜಾರ ಮಾತನಾಡಿದರು. ಗೌರವ ಅಧ್ಯಕ್ಷ ಪೂಜಾರ ನಿಂಗಪ್ಪ, ಕಾರ್ಯದರ್ಶಿ ಡಿ.ಛತ್ರಪತಿ, ಸಹ ಕಾರ್ಯದರ್ಶಿ ಜಿ.ಶ್ರೀಕಾಂತ, ನಗರ ಘಟಕ ಅಧ್ಯಕ್ಷ ಆರ್.ಕೋಟೆಪ್ಪ, ಖಜಾಂಚಿ ಮುತ್ತಪ್ಪ ಬಿದ್ದಾಡಿ, ಪಿ.ಮಲ್ಲಿಕಾರ್ಜುನ, ಬಿ.ನಾಗರಾಜ್‌, ಮೈಲಾರಿ, ಡಿ.ಭರಮಪ್ಪ, ಕೆ.ಪಕ್ಕೀರಪ್ಪ, ಎ.ಪ್ರಕಾಶ ಇದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಜೂ.18 ರಂದು ಪರಿಶಿಷ್ಟ ಜಾತಿ ಜನಾಂಗದವರ ಕುಂದು-ಕೊರತೆ ಆಲಿಕೆ ಸಭೆ

ಬಳ್ಳಾರಿ : ಜಿಲ್ಲೆಯ ಪರಿಶಿಷ್ಟ ಜಾತಿ ಜನಾಂಗದವರ ಸಮಸ್ಯೆಗಳನ್ನು ಆಲಿಸಿ, ಪರಿಹರಿಸಲು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ...

ಹರಪನಹಳ್ಳಿ ಪೊಲೀಸ್‌
Homeಸುದ್ದಿಗಳು

ಹರಪನಹಳ್ಳಿಯಲ್ಲಿ ಪೊಲೀಸರ ‘ಕಾಲ್ನಡಿಗೆ ಗಸ್ತು’

ಹರಪನಹಳ್ಳಿ : ನಗರದಲ್ಲಿ ಅಪರಾಧ ಪ್ರಕರಣಗಳಿಗೆ ಬ್ರೇಕ್ ಹಾಕಲು ನಮ್ಮ ಪೊಲೀಸ್ ಇಲಾಖೆ ಒಂದು ಸೂಪರ್...

dc hosapete
Homeಸುದ್ದಿಗಳು

ನಿರ್ಲಕ್ಷ್ಯ ತೋರಿದರೆ ಕಠಿಣ ಕ್ರಮ – ಕವಿತಾ ಎಸ್. ಮನ್ನಿಕೇರಿ ಖಡಕ್ ಎಚ್ಚರಿಕೆ

ಹೊಸಪೇಟೆ (ವಿಜಯನಗರ): ಜಿಲ್ಲೆಯಲ್ಲಿ ಕುಂಠಿತಗೊಂಡಿರುವ 7ನೇ ಸಣ್ಣ ನೀರಾವರಿ ಹಾಗೂ 2ನೇ ಜಲಮೂಲಗಳ ಗಣತಿಯನ್ನು ಸರ್ಕಾರದ...

harapanahallipdo
ಸುದ್ದಿಗಳು

ಪಂಚಾಯತ್ ಇಲಾಖೆ ನೌಕರರ ಸಂಘಕ್ಕೆ ಆಯ್ಕೆ

ಹರಪನಹಳ್ಳಿ :  ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಇಲಾಖೆಯ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷರಾಗಿ ಹಲವಾಗಲು...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.