Home ಆರೋಗ್ಯ ಅರಸೀಕೆರೆ ಕೋಲಶಾಂತೇಶ್ವರ ಮಠದಲ್ಲಿ ಉಚಿತ ಪ್ರಕೃತಿ ಚಿಕತ್ಸೆ
ಆರೋಗ್ಯ

ಅರಸೀಕೆರೆ ಕೋಲಶಾಂತೇಶ್ವರ ಮಠದಲ್ಲಿ ಉಚಿತ ಪ್ರಕೃತಿ ಚಿಕತ್ಸೆ

Share
ಅರಸೀಕೆರೆ ಕೋಲಶಾಂತೇಶ್ವರ ಮಠದಲ್ಲಿ ಉಚಿತ ಪ್ರಕೃತಿ ಚಿಕತ್ಸೆ
Share

ಹರಪನಹಳ್ಳಿ : ದುಶ್ಚಟಗಳಿಂದ ದೂರವಿದ್ದು, ಶಿಸ್ತಿನ ಜೀವನಶೈಲಿ ರೂಢಿಸಿಕೊಳ್ಳುವುದರಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯ ಎಂದು ಅರಸೀಕೆರೆ ಶ್ರೀ ಕೋಲಶಾಂತೇಶ್ವರ  ಮಠದ ಶಾಂತಲಿಂಗ ದೇಶಿಕೇಂದ್ರ ಸ್ವಾಮೀಜಿ ಅಭಿಪ್ರಾಯಪಟ್ಟರು.

ಜನನಿ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರವು ಶ್ರೀಕೋಲಶಾಂತೇಶ್ವರ ಜನಕಲ್ಯಾಣ ಕೇಂದ್ರದ ಸಹಯೋಗದಲ್ಲಿ ಶುಕ್ರವಾರ ಶ್ರೀಮಠದ ಆವರಣದಲ್ಲಿ ಏರ್ಪಡಿಸಿದ್ದ ಉಚಿತ ಪ್ರಕೃತಿ ಚಿಕಿತ್ಸಾ ಶಿಬಿರದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.

“ಯೋಗದಿಂದ ರೋಗ ದೂರವಾಗುತ್ತದೆ, ಅಂತೆಯೇ ನಮ್ಮ ಆರೋಗ್ಯ ಕಾಪಾಡಿಕೊಳ್ಳಲು ಪ್ರಕೃತಿ ನಮಗೆ ನೀಡಿದ ಅನೇಕ ಅಂಶಗಳನ್ನು ನಾವಿಂದು ಮರೆತಿದ್ದೇವೆ. ಔಷಧ ರಹಿತವಾಗಿ ನಮ್ಮ ಜೀವನಶೈಲಿ ಮಾರ್ಪಡಿಸಿಕೊಳ್ಳುವ ಮೂಲಕ ಮರೆತ ಅಂಶಗಳನ್ನು ನಮಗೆ ಪ್ರಕೃತಿ ಚಿಕಿತ್ಸಾ ಪದ್ಧತಿ ನೆನಪಿಸುತ್ತಿದೆ. ಈ ಬಗ್ಗೆ ಸಮಾಜದಲ್ಲಿ ಹೆಚ್ಚಿನ ಜಾಗೃತಿ ಮೂಡಿದಾಗ ಮಾತ್ರ ಸದೃಢ ಸಮಾಜ ನಿರ್ಮಾಣ ಸಾಧ್ಯ ಎಂದು ಹೇಳಿದರು.

ಯುವ ಬಿಜೆಪಿ ಮುಖಂಡ ವೈ.ಡಿ.ಅಣ್ಣಪ್ಪ ಅತಿಥಿಗಳಾಗಿ ಮಾತನಾಡಿ, ಒಮ್ಮೆ ಆರೋಗ್ಯ ಹದಗೆಟ್ಟರೆ ಸರಿಪಡಿಸಿಕೊಳ್ಳುವುದು ಕಷ್ಟಸಾಧ್ಯ. ಆರೋಗ್ಯಸೇವೆ ದುಬಾರಿಯಾಗುತ್ತಿರುವ ಇಂದಿನ ದಿನಗಳಲ್ಲಿ ರೋಗ ಬಾರದಂತೆ ಮುನ್ನೆಚ್ಚರಿಕೆ ವಹಿಸುವುದೇ ಜಾಣತನ. ಯೋಗ ಮತ್ತು ಪ್ರಕೃತಿ ಚಿಕಿತ್ಸೆಯ ಪ್ರಯೋಜನ ಪಡೆದುಕೊಳ್ಳುವ ಜೊತೆಗೆ ಆರೋಗ್ಯಕರ ಜೀವನಶೈಲಿ ಅಳವಡಿಸಿಕೊಳ್ಳುವ ಅಗತ್ಯವಿದೆ ಎಂದರು.

ಪಾಶ್ಚಾತ್ಯರ ಅಂಧಾನುಕರಣೆ ತೊರೆದ ನಮ್ಮ ಆಹಾರಪದ್ಧತಿಯನ್ನು ಅಳವಡಿಸಿಕೊಳ್ಳುವ ಮೂಲಕ ರೋಗಗಳಿಂದ ದೂರ ಇರೋಣ ಎಂದು ತಾಲೂಕು ಬಿಜೆಪಿ ಅಧ್ಯಕ್ಷ ಪ್ರಶಾಂತ್ ಪಾಟೀಲ ಸಲಹೆ ಮಾಡಿದರು.

ಜನನಿ ಆಸ್ಪತ್ರೆಯ ಮಾಧ್ಯಮ ಮತ್ತು ಸಾರ್ವಜನಿಕ ಸಂಪರ್ಕ ಮುಖ್ಯಸ್ಥ ಉದಯಶಂಕರ ಭಟ್  ಮಾತನಾಡಿದರು. ಜನಕಲ್ಯಾಣ ಕೇಂದ್ರದ ವ್ಯವಸ್ಥಾಪಕ ಪ್ರದೀಪ್  ಇದ್ದರು. ತಾಲ್ಲೂಕಿನ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ನೂರಕ್ಕೂ ಹೆಚ್ಚು ಮಂದಿ ಶಿಬಿರದ ಪ್ರಯೋಜನ ಪಡೆದರು.

Share

Leave a comment

Leave a Reply

Your email address will not be published. Required fields are marked *

Related Articles
Homeಆರೋಗ್ಯ

ಸ್ಟಾರ್ ಹೆಲ್ತ್ ಉಚಿತ ವೈದ್ಯಕೀಯ ಸಲಹೆ

ದಾವಣಗೆರೆ : ದೇಶದ ಪ್ರಮುಖ ಆರೋಗ್ಯ ವಿಮೆ ಸಂಸ್ಥೆಗಳಲ್ಲಿ ಒಂದಾಗಿರುವ ಸ್ಟಾರ್ ಹೆಲ್ತ್ ಅಂಡ್ ಅಲೈಡ್...

Homeಆರೋಗ್ಯ

ವಿಶೇಷಚೇತನ ಮಕ್ಕಳನ್ನು ಮುಖ್ಯವಾಹಿನಿಗೆ ತರುವುದು ನಮ್ಮೆಲ್ಲರ ಜವಾಬ್ದಾರಿ – ಇಒ ವೈ.ಎಚ್. ಚಂದ್ರಶೇಖರ

ಹರಪನಹಳ್ಳಿ : ವಿಶೇಷಚೇತನ ಮಕ್ಕಳನ್ನು ಸಮಾಜದ ಮುಖ್ಯವಾಹಿನಿಗೆ ತರುವುದು ಮತ್ತು ಅವರಿಗೆ ಸರ್ಕಾರದ ಸೌಲಭ್ಯಗಳನ್ನು ತಲುಪಿಸುವುದು...

Homeಆರೋಗ್ಯ

ಒಂಟಿಹಾಳ್ ಗ್ರಾಮವನ್ನು ತಂಬಾಕು ಮುಕ್ತ ಗ್ರಾಮವೆಂದು ಘೋಷಣೆ : 

ದಾವಣಗೆರೆ : ಯುವಕರು ಯಾವುದೇ ದುಶ್ಚಟ ಒಳಗಾಗದೆ ಇಂತಹ ಕಾರ್ಯಕ್ರಮಕ್ಕೆ ಕೈಜೋಡಿಸಿದರೆ ಪ್ರತಿ ಗ್ರಾಮವನ್ನು ಸಹ...

Homeಆರೋಗ್ಯ

ಪೋಷಕತ್ವ ಯೋಜನೆ ಅರ್ಜಿ ಆಹ್ವಾನ

ವಿಜಯನಗರ (ಹೊಸಪೇಟೆ) : 2026-27ನೇ ಸಾಲಿಗೆ ಮಕ್ಕಳ ಪಾಲನೆ ಮತ್ತು ರಕ್ಷಣೆ ಅನ್ವಯ, ಜಿಲ್ಲೆಯ ವಿವಿಧ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.