Home ಸುದ್ದಿಗಳು  ನ್ಯಾಯಾಲಯ ಆದೇಶ ಉಲ್ಲಂಘಿಸದಿರಲು ಮನವಿ
ಸುದ್ದಿಗಳು

 ನ್ಯಾಯಾಲಯ ಆದೇಶ ಉಲ್ಲಂಘಿಸದಿರಲು ಮನವಿ

Share
Share

ಹರಪನಹಳ್ಳಿ ಹೊಸ ಬಸ್‌ ನಿಲ್ದಾಣಕ್ಕೆ ಕಾಯ್ದಿರಿಸಿದ ಜಾಗ

ಹರಪನಹಳ್ಳಿ : ನ್ಯಾಯಾಲಯ ಆದೇಶ ದಿಕ್ಕರಿಸಿ ಸರ್ವೆ ನಂಬರ್‌ 539/ಬಿ1ಬಿ ವಿಸ್ತೀರ್ಣದಲ್ಲಿ 1 ಎಕರೆ 42 ಸೆಂಟ್ಸ್‌ ಭೂಮಿಯನ್ನು ಅಧಿಕಾರಿಗಳು ತಮ್ಮ ವಶಕ್ಕೆ ಪಡೆಯಲು ಹೊರಟಿದ್ದಾರೆ ಎಂದು ಮುಸ್ಲಿಂ ಸಮಾಜದ ಮುಖಂಡರು ಆರೋಪಿಸಿದ್ದಾರೆ.

ಸರ್ಕಾರದಿಂದ ಪಟ್ಟಾ ಪಡೆದಿರುವ ಬೇಲ್ದಾರ್‌ ಲಕ್ಷ್ಮಯ್ಯ ಅವರು 1 ಎಕರೆ 42 ಸೆಂಟ್ಸ್‌ ಭೂಮಿ ಮಾರಾಟ ಮಾಡಿದ್ದು, ಇದೇ ಜಾಗವನ್ನು ಇಜಂತಕರ್‌ ಜಯಪ್ರಕಾಶ್‌ ಅವರು ಬೇರೆಯವರಿಗೆ ಮಾರಾಟ ಮಾಡಿದ್ದು, ಈಗ ಅಮಿನಾ ಮೊಹಮ್ಮದಿ ಅವರ ಹೆಸರಿನಲ್ಲಿದೆ. ಇದರ ಡೋರ್‌ ನಂಬರ್‌ 399/1817/ಎ26/ಎ ಪುರಸಭೆ ಕೊಟ್ಟಿದೆ. ಈ ಪ್ರಕರಣ ನ್ಯಾಯಾಲಯದಲ್ಲಿ ನಡೆಯುತ್ತಿದ್ದು, ತಡೆಯಾಜ್ಞೆ ಆದೇಶವಿದ್ದರೂ ಸಹ ಅಧಿಕಾರಿಗಳು ಯಾವುದೇ ನೊಟೀಸ್‌ ಜಾರಿಮಾಡದೇ ದೌರ್ಜನ್ಯದಿಂದ ಕಬಳಿಸುತ್ತಿದ್ದಾರೆ.

ಜನಗಳು ವಾಸವಿರುವ ಜಾಗದಲ್ಲಿ ಬಸ್‌ ನಿಲ್ದಾಣ ಕಟ್ಟಿಸಬಾರದು. ವಾಸವಿರುವ ಜನಗಳನ್ನು ಒಕ್ಕಲೆಬ್ಬಿಸಬಾರದು.  ಶಾಸಕರು ಮತ್ತು ಅಧಿಕಾರಿಗಳು ಪಟ್ಟಣಕ್ಕೆ ಹೊಂದಿಕೊಂಡಿರುವ ಜಾಗ ಖರೀದಿಸಿ ನೂತನ ಸರ್ಕಾರಿ ಬಸ್‌ ನಿಲ್ದಾಣ ಮಾಡಬೇಕು. ಇಲ್ಲದಿದ್ದರೆ ಹೋರಾಟ ಮಾಡಲಾವುದು ಎಂದು ಅಂಜುಮನ್‌ ಸಮಿತಿ ಮಾಜಿ ಅಧ್ಯಕ್ಷ ಡಿ.ಮುಜಿಬರ್‌ ರೆಹಮಾನ್‌ , ಪುರಸಭೆ ಮಾಜಿ ಸದಸ್ಯ ಡಿ.ಜಹೂರು, ಇಜಂತಕರ್‌ ರಾಜು, ಕಲೀಮುಲ್ಲಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹರಪನಹಳ್ಳಿ ತಹಶೀಲ್ದಾರ ಬಿ.ವಿ.ಗಿರೀಶ್ ಬಾಬು ಮಾತನಾಡಿ, ‘ಕೋಟೆ ಕಾಳಮ್ಮ ದೇವಸ್ಥಾನದ ಬಳಿಯಿರುವ ಜಾಗವನ್ನು ಸಾರ್ವಜನಿಕ ಉದ್ದೇಶಕ್ಕೆ ಕಾಯ್ದಿರಿಸಲಾಗಿದೆ. ಆ ಪ್ರದೇಶವನ್ನು ಯಾವುದೇ ಸಮಾಜಕ್ಕೆ ಕೊಟ್ಟಿಲ್ಲ. ಆ ಜಾಗವನ್ನು ಉಯೋಗಿಸಿಲ್ಲದ ಕಾರಣ, ಈಗ ಬೇರೊಂದು ಸಾರ್ವಜನಿಕ ಉದ್ದೇಶಕ್ಕೆ ಆ ಸ್ಥಳವನ್ನು ಕಾಯ್ದಿರಿಸಲಾಗಿದೆ ಎಂದು ಸ್ಪಷ್ಟನೆ ನೀಡಿದರು.

 

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಕಲಬುರಗಿಯ ಸೇಂಟ್ ಮೇರಿಸ್ ಶಾಲೆಯಲ್ಲಿ ಉಚಿತ ದಂತ ತಪಾಸಣಾ ಶಿಬಿರ

ಕಲಬುರಗಿ: ಕೊಟನೂರಿನ ಸೇಂಟ್ ಮೇರಿಸ್ ಶಾಲೆಯಲ್ಲಿ ಕಾರ್ಮೆಲ್ ಜ್ಯೋತಿ ಪಬ್ಲಿಕ್ ಚಾರಿಟಬಲ್ ಟ್ರಸ್ಟ್, ಕಡಗಂಚಿ, ಅಲ್...

Homeಸುದ್ದಿಗಳು

ಕ್ರೀಡಾಕೂಟಗಳು ಸ್ಪರ್ಧೆಯಾಗದೆ,ಹಬ್ಬದ ಸಂಭ್ರಮವಾಗಲಿ:ಶಾಸಕ ಬಿ.ದೇವೇಂದ್ರಪ್ಪ ಅಭಿಮತ.

ಹರಪನಹಳ್ಳಿ : ಗ್ರಾಮೀಣ ಭಾಗದಲ್ಲಿ ಕ್ರೀಡಾಕೂಟಗಳು ಕೇವಲ ಸ್ಪರ್ಧೆಯಾಗದೆ, ಹಬ್ಬದ ಸಂಭ್ರಮ ಮನೆಮಾಡಬೇಕು ಎಂದು ಶಾಸಕ...

Homeಸುದ್ದಿಗಳು

ಸೆ.19ರಂದು ಹರಪನಹಳ್ಳಿಯಲ್ಲಿ ತಾಲ್ಲೂಕು ಮಟ್ಟದ ಪ್ರಜಾಸೇವಾ ಕಾರ್ಯಕ್ರಮ

ವಿಜಯನಗರ : ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ, ಅವುಗಳಿಗೆ ಸೂಕ್ತ ಪರಿಹಾರ ಕಲ್ಪಿಸುವ ಉದ್ದೇಶದಿಂದ ಜಿಲ್ಲೆಯ...

Homeಸುದ್ದಿಗಳು

ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ : ಕಾಲಮಿತಿಯಲ್ಲಿ ಅರ್ಜಿಗಳ ವಿಲೇವಾರಿಗೆ ಕ್ರಮ

ವಿಜಯನಗರ : ಸಾರ್ವಜನಿಕರು ತಮ್ಮ ದಿನನಿತ್ಯದ ಸಮಸ್ಯೆಗಳು, ಬೇಡಿಕೆಗಳು ಹಾಗೂ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಕುಂದುಕೊರತೆಗಳಿಗಾಗಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.