Home ಭಾರತೀಯ ಕಿಸಾನ್ ಸಂಘದ ಪ್ರತಿಭಟನೆ
Homeಸುದ್ದಿಗಳು

ಭಾರತೀಯ ಕಿಸಾನ್ ಸಂಘದ ಪ್ರತಿಭಟನೆ

Share
ಭಾರತೀಯ ಕಿಸಾನ್ ಸಂಘದ ಪ್ರತಿಭಟನೆ
Share

ಹರಪನಹಳ್ಳಿ : 3 ಸೆಂಟ್ಸ್‍ 20 ಸೆಂಟ್ಸ್ ವರೆಗೆ ಭೂಮಿ ಅಳತೆಯ ತುಂಡುಭೂಮಿ ನೊಂದಾಣಿಗೆ ಅವಕಾಶ ಕಲ್ಪಿಸಬೇಕು ಎಂದು ಆಗ್ರಹಿಸಿ ಭಾರತೀಯ ಕಿಸಾನ್ ಸಂಘದ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು.

ಬೆಳೆಗಳಿಗೆ ಬೆಂಬಲ ಬೆಲೆ ಘೋಷಣೆ ಮಾಡದೇ ರೈತರನ್ನು ಸರ್ಕಾರ ಸಂಕಷ್ಟಕ್ಕೆ ಸಿಲುಕಿಸಿದೆ. ಎಲ್ಲ ಪಶು ಸಂಗೋಪನೆ ಆಸ್ಪತ್ರೆಗಳಲ್ಲಿ ಜಾನುವಾರುಗಳಿಗೆ ಸಕಾಲಕ್ಕೆ ಲಸಿಕೆ ದೊರಕುವ ವ್ಯವಸ್ಥೆ ಕಲ್ಪಿಸಬೇಕು. ಬೆಳೆಗಳಿಗೆ ಸಿಂಪಡಿಸುವ ಬೀಗ ಗೊಬ್ಬರ ಕೀಟನಾಶಕ ಅಗತ್ಯಾನುಸಾರ ದೊರಕಿಸಬೇಕು. ರಾಜ್ಯದಲ್ಲಿ ಮದ್ಯ (ಸರಾಯಿ) ನಿಷೇಧಿಸಬೇಕು ಎಂದು ಆಗ್ರಹಿಸಿದರು. ಬೆಳಿಗ್ಗೆ 6 ಗಂಟೆಯಿಂದ ಮದ್ಯಾಹ್ನ 1ರ ವರೆಗೆ ನೀರಾವರಿ ಜಮೀನುಗಳಿಗೆ ವಿದ್ಯುತ್ ಪೂರೈಸಬೇಕು ಎಂದು ಒತ್ತಾಯಿಸಿದರು. ಜಿಲ್ಲಾ ಸಮಿತಿ ಮುಖಂಡರಾದ ಕರಿಬಸವನಗೌಡ, ಶಿವಶಂಕರಗೌಡ, ಹಾಳಪ್ಪ, ಶಿವಪುತ್ರಪ್ಪ, ಲಕ್ಷ್ಮಿಕಾಂತ್ ಈಡಿಗರ, ಸಿದ್ದಲಿಂಗಪ್ಪ, ಮೌನೇಶ, ನಂದೀಶ, ಅರವಿಂದ, ನಾಗಪ್ಪ, ಶೇಖರಪ್ಪ, ಸೋಮಶೇಖರ, ನಾಗರಾಜ್ ಕರಡಿ, ಚೌಡಪ್ಪ, ಸಿದ್ದನಗೌಡ ಇದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ರಸ್ತೆ ನಿರ್ಮಾಣಕ್ಕೆ ಜಾಗ ತ್ಯಾಗ ಮಾಡಿದ ಗ್ರಾಮಸ್ಥರ ಋಣ ತೀರಿಸಲಾಗದು: ಶಾಸಕ ಹೆಚ್.ಆರ್. ಗವಿಯಪ್ಪ

ವಿಜಯನಗರ (ಹೊಸಪೇಟೆ) : ಊರಿನ ಸಾರ್ವಜನಿಕ ರಸ್ತೆ ನಿರ್ಮಾಣ ಹಾಗೂ ಮೂಲಸೌಕರ್ಯ ಅಭಿವೃದ್ಧಿಗಾಗಿ ತಮ್ಮ ಜಾಗ...

Homeಅಪರಾಧ

ಹರಪನಹಳ್ಳಿ: ನಕಲಿ ದಾಖಲೆ ಸೃಷ್ಟಿಸಿ 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಹರಪನಹಳ್ಳಿ : ನಕಲಿ ದಾಖಲೆ ಸೃಷ್ಟಿಸಿಕೊಂಡು ತನ್ನ ಹೆಸರಿಗೆ ಆಸ್ತಿ ಪತ್ರಗಳನ್ನು ಮಾಡಿಕೊಂಡು ಪರಾರಿಯಾಗಿದ್ದ 12...

Homeಸುದ್ದಿಗಳು

ಕೊಪ್ಪಳ : ಪ್ರತಿಭಾ ಪುರಸ್ಕಾರಕ್ಕೆ ಬನ್ನಿ

ಹರಪನಹಳ್ಳಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಹರಪನಹಳ್ಳಿ ತಾಲೂಕು ಘಟಕದ ವತಿಯಿಂದ 2026-27ನೇ ಸಾಲಿನ...

Homeಕೃಷಿ

ಹರಪನಹಳ್ಳಿ ತಾಲ್ಲೂಕನ್ನು ಬರಪೀಡಿತ ಎಂದು ಘೋಷಿಸಲು ಆಗ್ರಹಿಸಿ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ

ಹರಪನಹಳ್ಳಿ : ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲ್ಲೂಕನ್ನು ಬರಪೀಡಿತ ತಾಲ್ಲೂಕು ಎಂದು ಘೋಷಿಸಬೇಕು ಎಂದು ಆಗ್ರಹಿಸಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.