Home ಸುದ್ದಿಗಳು ಪುಣಬಗಟ್ಟಿ : ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹ
ಸುದ್ದಿಗಳು

ಪುಣಬಗಟ್ಟಿ : ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹ

Share
ಪುಣಬಗಟ್ಟಿ : ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹ
Share

ಹರಪನಹಳ್ಳಿ : ರೈತರ ಪಂಪ್‌ಸೆಟ್ ಗಳಿಗೆ ಸಮರ್ಪಕ ವಿದ್ಯುತ್ ಪೂರೈಸಬೇಕು ಎಂದು ಒತ್ತಾಯಿಸಿ ತಾಲ್ಲೂಕಿನ ಪುಣಬಗಟ್ಟಿ ವಿದ್ಯುತ್ ಪ್ರಸರಣ ಕೇಂದ್ರದ ಆವರಣದಲ್ಲಿ ಶನಿವಾರ ರೈತರು ಅಡುಗೆ ಮಾಡಿ ಪ್ರತಿಭಟನೆ ನಡೆಸಿದರು.

ರೈತರ ಪಂಪ್ ಸೆಟ್ ಗಳಿಗೆ ಸರಿಯಾಗಿ ವೋಲ್ಟೇಜ್ ಬರುತ್ತಿಲ್ಲ, ಮೋಟರ್ ಗಳು ಸುಟ್ಟಿವೆ. 3 ವರ್ಷಗಳಿಂದ ಕೇವಲ ಆಶ್ವಾಸನೆ ನೀಡುತ್ತಾ ಬಂದಿದ್ದಾರೆ. ರೈತರ ಪಂಪ್ ಸೆಟ್ ಗಳಿಗೆ ಹಗಲು ಸಮಯದಲ್ಲಿ 7 ತಾಸು  ವಿದ್ಯುತ್  ಪೂರೈಸಬೇಕು‌ ಎಂದು ಬೆಸ್ಕಾಂ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ನೋಡಲ್ ಅಧಿಕಾರಿ ನೂರ್ ಅಹಮ್ಮದ್ ಮಾತನಾಡಿ, 8 ಎಂ ಜಿ ಯಿಂದ 20 ಎಂ ಜಿ ವರೆಗೆ ಟ್ರಾನ್ಸ್ ಫಾರಂ ಪರಿವರ್ತನೆ ಕೆಲಸ‌ ಆಗಬೇಕಿದೆ.  3 ತಿಂಗಳೊಳಗೆ ಕಾಮಗಾರಿ ಪೂರ್ಣಗೊಳಿಸಿ, 20 ಎಂ.ಜಿ.ಟ್ರಾನ್ಸ ಪಾರ್ಮರ್ ಗೆ ಚಾಲನೆ ನೀಡಲಾಗವುದು ಎಂದು ಭರವಸೆ ನೀಡಿದರು. ಎಇಇ ಪಂಡಿತರಾಧ್ಯ ಮಾತನಾಡಿ, ರೈತರಿಗೆ ತೊಂದರೆ ಆಗದ ರೀತಿಯಲ್ಲಿ ಕ್ರಮವಹಿಸುವುದಾಗಿ ತಿಳಿಸಿದರು. ರೈತ ಮುಖಂಡರಾದ‌ ಸಿದ್ದೇಶ್, ಸತ್ತೂರು ಮಹಾದೇವಪ್ಪ ಮಾತನಾಡಿದರು.  ರೈತರಾದ  ಲೋಕಪ್ಪ, ಜ್ಯೋತೆಪ್ಪ, ಮಹಾದೇವಪ್ಪ, ಗೋಣೆಪ್ಪ,ಎಸ್.ಜ್ಯೋತೆಪ್ಪ,ಸುನೀಲ್, ಕೆ.ಮಂಜು,ಅಣ್ಣಪ್ಪ, ಇಂದ್ರಯ್ಯ, ಸಿದ್ದೇಶ್, ಕರಿಬಸಪ್ಪ, ಬಸವರಾಜಪ್ಪ, ಹನಮಂತಪ್ಪ, ಬಣಕಾರ್ ಸಿದ್ದಪ್ಪ, ಪ್ರಕಾಶ್, ಶೇಖರಪ್ಪ, ಅಶೋಕ ಇದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeರಾಜಕೀಯಸುದ್ದಿಗಳು

ಅಡವಿಹಳ್ಳಿಯಲ್ಲಿ ಬಸವೇಶ್ವರ ದೇವಸ್ಥಾನದ ಕಳಸಾರೋಹಣ

ಹರಪನಹಳ್ಳಿ: ಮೊಬೈಲ್ಗೆ ಹೇಗೆ ನೆಟ್ವರ್ಕ್ ಟವರ್ ಮುಖ್ಯವೋ, ಹಾಗೆಯೇ ದೇವಸ್ಥಾನದ ಗೋಪುರಕ್ಕೆ ಕಳಸ ಬಹುಮುಖ್ಯ, ದೇವಸ್ಥಾನಗಳು...

Homeಸುದ್ದಿಗಳು

ಕೋಟೆ ಅಂಜನೇಯ ದೇವಸ್ಥಾನ ಜಾಗ ಒತ್ತುವರಿ ತೆರವುಗೊಳಿಸದಿದ್ದರೆ ಹೋರಾಟದ ಎಚ್ಚರಿಕೆ

ಹರಪನಹಳ್ಳಿ (ವಿಜಯನಗರ ಜಿಲ್ಲೆ ) : ಪಾಳೆಗಾರ ರಾಜಸೋಮಶೇಖರ ನಾಯಕರ ಕಾಲದ ನಿರ್ಮಾಣವಾದ ಕೋಟೆ ಅಂಜನೇಯ...

ssm dvg
ಸುದ್ದಿಗಳು

ಶಾಮನೂರು ಶಿವಶಂಕರಪ್ಪ ಜನ್ಮದಿನ: ಜೂನ್‌ 17ಕ್ಕೆ  ಉಚಿತ ಸಾಮೂಹಿಕ ವಿವಾಹ  

ಹರಪನಹಳ್ಳಿ : ಮಾಜಿ ಶಾಸಕ ದಿವಂಗತ ಶಾಮನೂರು ಶಿವಶಂಕರಪ್ಪ ಅವರ 96ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಜೂನ್...

vijaya vikrama
Homeಸುದ್ದಿಗಳು

ದೇಶದ ಬದಲಾವಣೆಯಲ್ಲಿ ಪತ್ರಕರ್ತರ ಪಾತ್ರ ದೊಡ್ಡದು : ಕೋಡಿಹಳ್ಳಿ ಭೀಮಪ್ಪ

ಹರಪನಹಳ್ಳಿ : ಪತ್ರಿಕೋದ್ಯಮದಲ್ಲಿ ನಿಷ್ಠೆ, ಧೈರ್ಯ ಮತ್ತು ಪ್ರಾಮಾಣಿಕತೆ ಇದ್ದರೆ ಸಮಾಜದ ದಿಕ್ಕು ಬದಲಾಯಿಸಲು ಸಾಧ್ಯವಾಗುತ್ತದೆ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.