ಹರಪನಹಳ್ಳಿ : ರೈತರ ಪಂಪ್ಸೆಟ್ ಗಳಿಗೆ ಸಮರ್ಪಕ ವಿದ್ಯುತ್ ಪೂರೈಸಬೇಕು ಎಂದು ಒತ್ತಾಯಿಸಿ ತಾಲ್ಲೂಕಿನ ಪುಣಬಗಟ್ಟಿ ವಿದ್ಯುತ್ ಪ್ರಸರಣ ಕೇಂದ್ರದ ಆವರಣದಲ್ಲಿ ಶನಿವಾರ ರೈತರು ಅಡುಗೆ ಮಾಡಿ ಪ್ರತಿಭಟನೆ ನಡೆಸಿದರು.
ರೈತರ ಪಂಪ್ ಸೆಟ್ ಗಳಿಗೆ ಸರಿಯಾಗಿ ವೋಲ್ಟೇಜ್ ಬರುತ್ತಿಲ್ಲ, ಮೋಟರ್ ಗಳು ಸುಟ್ಟಿವೆ. 3 ವರ್ಷಗಳಿಂದ ಕೇವಲ ಆಶ್ವಾಸನೆ ನೀಡುತ್ತಾ ಬಂದಿದ್ದಾರೆ. ರೈತರ ಪಂಪ್ ಸೆಟ್ ಗಳಿಗೆ ಹಗಲು ಸಮಯದಲ್ಲಿ 7 ತಾಸು ವಿದ್ಯುತ್ ಪೂರೈಸಬೇಕು ಎಂದು ಬೆಸ್ಕಾಂ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ನೋಡಲ್ ಅಧಿಕಾರಿ ನೂರ್ ಅಹಮ್ಮದ್ ಮಾತನಾಡಿ, 8 ಎಂ ಜಿ ಯಿಂದ 20 ಎಂ ಜಿ ವರೆಗೆ ಟ್ರಾನ್ಸ್ ಫಾರಂ ಪರಿವರ್ತನೆ ಕೆಲಸ ಆಗಬೇಕಿದೆ. 3 ತಿಂಗಳೊಳಗೆ ಕಾಮಗಾರಿ ಪೂರ್ಣಗೊಳಿಸಿ, 20 ಎಂ.ಜಿ.ಟ್ರಾನ್ಸ ಪಾರ್ಮರ್ ಗೆ ಚಾಲನೆ ನೀಡಲಾಗವುದು ಎಂದು ಭರವಸೆ ನೀಡಿದರು. ಎಇಇ ಪಂಡಿತರಾಧ್ಯ ಮಾತನಾಡಿ, ರೈತರಿಗೆ ತೊಂದರೆ ಆಗದ ರೀತಿಯಲ್ಲಿ ಕ್ರಮವಹಿಸುವುದಾಗಿ ತಿಳಿಸಿದರು. ರೈತ ಮುಖಂಡರಾದ ಸಿದ್ದೇಶ್, ಸತ್ತೂರು ಮಹಾದೇವಪ್ಪ ಮಾತನಾಡಿದರು. ರೈತರಾದ ಲೋಕಪ್ಪ, ಜ್ಯೋತೆಪ್ಪ, ಮಹಾದೇವಪ್ಪ, ಗೋಣೆಪ್ಪ,ಎಸ್.ಜ್ಯೋತೆಪ್ಪ,ಸುನೀಲ್, ಕೆ.ಮಂಜು,ಅಣ್ಣಪ್ಪ, ಇಂದ್ರಯ್ಯ, ಸಿದ್ದೇಶ್, ಕರಿಬಸಪ್ಪ, ಬಸವರಾಜಪ್ಪ, ಹನಮಂತಪ್ಪ, ಬಣಕಾರ್ ಸಿದ್ದಪ್ಪ, ಪ್ರಕಾಶ್, ಶೇಖರಪ್ಪ, ಅಶೋಕ ಇದ್ದರು.
Leave a comment