Home ಉಚ್ಚಂಗಿದುರ್ಗ : ಭರತ ಹುಣ್ಣಿಮೆ ಆಚರಣೆ ಸಿದ್ದತೆ ವೀಕ್ಷಿಸಿದ ಎಸ್ಪಿ 
Home

ಉಚ್ಚಂಗಿದುರ್ಗ : ಭರತ ಹುಣ್ಣಿಮೆ ಆಚರಣೆ ಸಿದ್ದತೆ ವೀಕ್ಷಿಸಿದ ಎಸ್ಪಿ 

Share
ಉಚ್ಚಂಗಿದುರ್ಗ : ಭರತ ಹುಣ್ಣಿಮೆ ಆಚರಣೆ ಸಿದ್ದತೆ ವೀಕ್ಷಿಸಿದ ಎಸ್ಪಿ 
Share

ಹರಪನಹಳ್ಳಿ : ಜ.31 ರಿಂದ ಆರಂಭವಾಗುವ ಭರತ ಹುಣ್ಣಿಮೆ ಆಚರಣೆ ನಿಮಿತ್ತ ತಾಲ್ಲೂಕಿನ ಉಚ್ಚಂಗಿದುರ್ಗಕ್ಕೆ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಎಸ್.ಜಾಹ್ನವಿ ಬೇಟಿ ನೀಡಿ ಸಿದ್ದತೆ ಪರಿಶೀಲಿಸಿದರು.

ಅಣಜಿ ಮಾರ್ಗದಿಂದ ಬರುವ ವಾಹನಗಳಿಗೆ ಕೋಟೆ ಕ್ಯಾಂಪ್ ಹತ್ತಿರ ಪಾರ್ಕಿಂಗ್ ವ್ಯವಸ್ಥೆ, ಬಸ್ ನಿಲ್ದಾಣ, ಅರಸೀಕೆರೆ ಮಾರ್ಗದ ವಾಹಗಳಿಗೆ ಕಲ್ಯಾಣ ಕರ್ನಾಟಕಸಾರಿಗೆ ಬಸ್ ನಿಲ್ದಾಣದಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗುವುದು. ಬೇವಿನಹಳ್ಳಿ ಬರುವ ವಾಹನಗಳಿಗೆ ಉಜ್ಜಿನಿ ಶಾಲೆ ಹತ್ತಿರ ಪಾರ್ಕಿಂಗ್ ವ್ಯವಸ್ಥೆ, ಅಣಜಿಗೆರೆಯಿಂದ ಬರುವ ವಾಹನಗಳಿಗೆ ಕೆ.ಇ.ಬಿ. ಎದುರುಗಡೆ ಪಾರ್ಕಿಂಗ್ ವ್ಯವಸ್ಥೆ, ನಾಲ್ಕು ಕಡೆ ಚೆಕ್ ಪೋಸ್ಟ್ ವ್ಯವಸ್ಥೆ, ಹಾಲಮ್ಮನ ತೋಪಿನಲ್ಲಿ ಕುಡಿಯುವ ನೀರಿನ ಹೊಂಡ, ಶೌಚಾಲಯ ಹಾಗ ತಾತ್ಕಾಲಿಕ ಪೊಲೀಸ್ ಚೌಕಿ ವ್ಯವಸ್ಥೆ ಪರಿಶೀಲಿಸಿದರು.

ಭರತ ಹುಣ್ಣಿಮೆ ಆಚರಣೆ ದಿನ  ಡಿವೈಎಸ್ಪಿ, ನಾಲ್ಕು ಸಿಪಿಐ, 11 ಪಿಎಸ್‌ಐ, 500 ಸಿಬ್ಬಂದಿ ಹಾಗು 2 ಕೆಎಸ್‌ಆರ್ಪಿ, 2 ಡಿ.ಆರ್. ವಾಹನ ನಿಯೋಜಿಸಲಾಗಿದೆ ಎಂದು ಎಸ್ಪಿ ಎಸ್.ಜಾಹ್ನವಿ ಅವರು ಮಾಹಿತಿ ನೀಡಿದರು. ಡಿವೈಎಸ್ಪಿ ಸಂತೋಷ್ ಚೌವ್ಹಾಣ್, ಸಿಪಿಐ ಮಹಾಂತೇಶ್ ಸಜ್ಜನ್, ಪಿಎಸ್‌ಐ. ವಿಜಯ್ ಕೃಷ್ಣ, ಗಂಗಾಧರ, ನಾಗರಾಜ್ ಇದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಕಲಬುರಗಿಯ ಸೇಂಟ್ ಮೇರಿಸ್ ಶಾಲೆಯಲ್ಲಿ ಉಚಿತ ದಂತ ತಪಾಸಣಾ ಶಿಬಿರ

ಕಲಬುರಗಿ: ಕೊಟನೂರಿನ ಸೇಂಟ್ ಮೇರಿಸ್ ಶಾಲೆಯಲ್ಲಿ ಕಾರ್ಮೆಲ್ ಜ್ಯೋತಿ ಪಬ್ಲಿಕ್ ಚಾರಿಟಬಲ್ ಟ್ರಸ್ಟ್, ಕಡಗಂಚಿ, ಅಲ್...

Homeಸುದ್ದಿಗಳು

ಕ್ರೀಡಾಕೂಟಗಳು ಸ್ಪರ್ಧೆಯಾಗದೆ,ಹಬ್ಬದ ಸಂಭ್ರಮವಾಗಲಿ:ಶಾಸಕ ಬಿ.ದೇವೇಂದ್ರಪ್ಪ ಅಭಿಮತ.

ಹರಪನಹಳ್ಳಿ : ಗ್ರಾಮೀಣ ಭಾಗದಲ್ಲಿ ಕ್ರೀಡಾಕೂಟಗಳು ಕೇವಲ ಸ್ಪರ್ಧೆಯಾಗದೆ, ಹಬ್ಬದ ಸಂಭ್ರಮ ಮನೆಮಾಡಬೇಕು ಎಂದು ಶಾಸಕ...

Homeಸುದ್ದಿಗಳು

ಸೆ.19ರಂದು ಹರಪನಹಳ್ಳಿಯಲ್ಲಿ ತಾಲ್ಲೂಕು ಮಟ್ಟದ ಪ್ರಜಾಸೇವಾ ಕಾರ್ಯಕ್ರಮ

ವಿಜಯನಗರ : ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ, ಅವುಗಳಿಗೆ ಸೂಕ್ತ ಪರಿಹಾರ ಕಲ್ಪಿಸುವ ಉದ್ದೇಶದಿಂದ ಜಿಲ್ಲೆಯ...

Homeಸುದ್ದಿಗಳು

ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ : ಕಾಲಮಿತಿಯಲ್ಲಿ ಅರ್ಜಿಗಳ ವಿಲೇವಾರಿಗೆ ಕ್ರಮ

ವಿಜಯನಗರ : ಸಾರ್ವಜನಿಕರು ತಮ್ಮ ದಿನನಿತ್ಯದ ಸಮಸ್ಯೆಗಳು, ಬೇಡಿಕೆಗಳು ಹಾಗೂ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಕುಂದುಕೊರತೆಗಳಿಗಾಗಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.