ಹರಪನಹಳ್ಳಿ: ಡಾ.ಬಿ.ಆರ್.ಅಂಬೇಡ್ಕರ್ ಅವರು ರಚಿಸಿದ ಸಂವಿಧಾನವನ್ನು ರಚಿಸಿ ಜಾರಿಗೆತಂದ ಈ ಸುಂದರ ದಿನವನ್ನ ನಾವೆಲ್ಲ ಗಣರಾಜ್ಯೋತ್ಸವ ದಿನವನ್ನಾಗಿ ಸಂಭ್ರಮದಿಂದ ಆಚರಿಸುತ್ತೇವೆ’ ಎಂದು ಹೊಸಕೋಟೆ ಗ್ರಾ.ಪಂ.ಅಧ್ಯಕ್ಷ ಕಬ್ಬಳ್ಳಿ ಡಿ.ನಾಗಪ್ಪ ಹೇಳಿದರು.
ತಾಲೂಕಿನ ಹೊಸಕೋಟೆ ಗ್ರಾಮ ಪಂಚಾಯತಿ ಆವರಣದಲ್ಲಿ ಆಯೋಜಿಸಲಾಗಿದ್ದ 77ನೇ ಗಣರಾಜ್ಯೋತ್ಸವದ ಸಂಭ್ರಮದಲ್ಲಿ ರಾಷ್ಟ ಧ್ವಜಾರೋಹಣವನ್ನು ನೆರವೇರಿಸಿ ಅವರು ಮಾತನಾಡಿದರು.ಸರ್ಕಾರದ ಮೂಲ ಧ್ಯೇಯ ಸಮಾನತೆ ಮತ್ತು ಸಾಮಾಜಿಕ ನ್ಯಾಯವಾಗಿದೆ.ರಾಜ್ಯ ಸರ್ಕಾರವು ಭವ್ಯ ಸಂವಿಧಾನದ ಆಶಯಗಳನ್ನು ಗಟ್ಟಿಗೊಳಿಸುವುದು ನಮ್ಮೆಲರ ಜವಾಬ್ದಾರಿ ಎಂದು ತಿಳಿಸಿದರು.
ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹೇಮಂತ್ ಕುಮಾರ್ ಮಾತನಾಡಿ, ನಮ್ಮ ದೇಶವನ್ನ ಅಭಿವೃದ್ಧಿ ಪಥದಲ್ಲಿ ಮುನ್ನೆಡೆಸುವುದು ಪ್ರತಿಯೊಬ್ಬ ಭಾರತೀಯ ಕರ್ತವ್ಯ ಎಂದು ತಿಳಿಸಿದರು. ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಕವಿತಮ್ಮ ವಿರೇಶ್,ಬೂದಿಹಾಳ್ ಸಿದ್ದೇಶ್,ಬಸಮ್ಮ ಲೋಕಪ್ಪ,ಗೌರಮ್ಮ ಜಗದೀಶ್,ಹೊಸಕೋಟೆ ಬಿ.ಮಂಜಮ್ಮ ಆನಂದಪ್ಪ,ಜಯಮ್ಮ ಕೃಷ್ಣಪ್ಪ, ವಡ್ಡನಹಳ್ಳಿ ಕೆಂಚಪ್ಪ,ಮುಖಂಡರಾದ ಗುಡಿಹಳ್ಳಿ ವಿರೇಶ್,ಕೋಣನಕಟ್ಟೆ ಅಣ್ಣಪ್ಪ,ಕಾರ್ಯದರ್ಶಿ ರೇವಣ್ಣ,ಚನ್ನಬಸಪ್ಪ,ಹೊಸಕೋಟೆ ಸರ್ಕಾರಿ ಶಾಲೆಯ ಶಿಕ್ಷಕರಾದ ಕರಿಬಸಯ್ಯ,ಹರೀಶ್,ಶರಣಪ್ಪ,ನಾಗಪ್ಪ,ಅನಿತಾ ಸೇರಿದಂತ್ತೆ ಶಾಲೆಯ ಮಕ್ಕಳು ಮತ್ತು ಗ್ರಾಮಸ್ಥರು ಸೇರಿ ಸಿಬ್ಬಂದಿಗಳು ಇದ್ದರು.
