Home ಸುದ್ದಿಗಳು ಕಲೆ ಜಾನಪದ ಕಲಾ ಸೊಬಗಿನೊಂದಿಗೆ ತಾಯಿ‌ ಭುವನೇಶ್ವರಿ ದೇವಿ ಭವ್ಯ ಮೆರವಣಿ
ಕಲೆಸುದ್ದಿಗಳು

ಜಾನಪದ ಕಲಾ ಸೊಬಗಿನೊಂದಿಗೆ ತಾಯಿ‌ ಭುವನೇಶ್ವರಿ ದೇವಿ ಭವ್ಯ ಮೆರವಣಿ

Share
Share
ವಿಜಯನಗರ:
ಹಂಪಿ ಉತ್ಸವದ ಅಂತಿಮ ದಿನವಾದ ಭಾನುವಾರ ಸಂಜೆ ಉದ್ದಾನ ವೀರಭದ್ರೇಶ್ವರ ದೇವಸ್ಥಾದಿಂದ ವಿರೂಪಾಕ್ಷೇಶ್ವರ ದೇವಸ್ಥಾನದವರೆಗೆ ಜಾನಪದ ವಾಹಿನಿ ಮೆರವಣಿಗೆ ನಡೆಯಿತು. ಶಾಸಕ  ಹೆಚ್.ಆರ್.ಗವಿಯಪ್ಪ ಹಾಗೂ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಸೇರಿದಂತೆ ಗಣ್ಯರು ಮೆರವಣಿಗೆಯಲ್ಲಿ ಪಾಗ್ಗೊಂಡು ವಿರೂಪಾಕ್ಷೇಶ್ವರ ದೇವಾಲಯದ ಬಳಿ ನಾಡದೇವಿ ಭುವನೇಶ್ವರಿ ದೇವಿಗೆ ಪೂಜೆ ಸಲ್ಲಿಸಿದರು.

ಜಾನಪದ ವಾಹಿನಿ ಕಲಾ ತಂಡಗಳ ಮೆರವಣಿಗೆ ನಾಡಿನ ಗ್ರಾಮೀಣ ಭಾಗದ ಸಾಂಸ್ಕೃತಿಕ ವೈವಿಧ್ಯತೆಗೆ ಸಾಕ್ಷಿಯಾಯಿತು. ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಜಾನಪದ ಕಲಾತಂಡಗಳು ಮೆರವಣಿಯಲ್ಲಿ ಪಾಲ್ಗೊಂಡಿದ್ದವು. ಜಾನಪದ ಕಲಾ ಸೊಬಗಿನೊಂದಿಗೆ ತಾಯಿ‌ ಭುವನೇಶ್ವರಿ ದೇವಿಯನ್ನು  ಮೆರವಣಿಗೆ ಮಾಡಲಾಯಿತು. ಹಲಗೆವಾದನ, ವೀರಗಾಸೆ, ಹಗಲುವೇಷ, ಸಿಂಧೋಳ್ ಕುಣಿತ, ನಂದಿಧ್ವಜ, ಕಹಳೆ ವಾದನ, ಹಕ್ಕಿಪಿಕ್ಕಿ ನೃತ್ಯ, ಕರಡಿ ಮೇಳ, ಪುರವಂತಿಕೆ, ಪೂಜಾ ಕುಣಿತ, ನಗಾರಿ, ಲಂಭಾಣಿ ವೃತ್ತ, ಕಂಸಾಳೆ, ಚಂಡೆವಾದ್ಯ, ಸೋಮನ ಕುಣಿತ, ಗೊರವರ ಕುಣಿತ, ಕಲಾತಂಡಗಳು‌ ಮೆರವಣಿಯಲ್ಲಿ ಪಾಲ್ಗೊಂಡಿದ್ದವು.

 
ಉಪವಿಭಾಗಾಧಿಕಾರಿ ವಿವೇಕ್, ತಹಶೀಲ್ದಾರ್ ಶೃತಿ, ಸೇರಿದಂತೆ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.
Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಬರಪೀಡಿತ ತಾಲೂಕು ಘೋಷಣೆಗೆ ಆಗ್ರಹ: ತಹಸೀಲ್ದಾರರಿಗೆ ಬಿಜೆಪಿ ವತಿಯಿಂದ ಮನವಿ ಸಲ್ಲಿಕೆ

 ಹರಪನಹಳ್ಳಿ : ಇಂದು ಮಂಡಲ ಬಿಜೆಪಿ ವತಿಯಿಂದ ಬರಗಾಲದ ಕಾರಣದಿಂದ ಹರಪನಹಳ್ಳಿ ತಾಲೂಕನ್ನು ಬರಪೀಡಿತ ತಾಲೂಕನ್ನಾಗಿ...

Homeಸುದ್ದಿಗಳು

ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ವಿಜಯನಗರ(ಹೊಸಪೇಟೆ) : ತಾಲೂಕಿನ ವಿವಿಧ ಗ್ರಾಮ ಪಂಚಾಯತಿ, ಪಟ್ಟಣ ಪಂಚಾಯತಿ, ಪುರಸಭೆ, ನಗರಸಭೆ ವ್ಯಾಪ್ತಿಯಲ್ಲಿ ಖಾಲಿಯಿರುವ...

Homeಸುದ್ದಿಗಳು

ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ವಿಜಯನಗರ(ಹೊಸಪೇಟೆ) : ಹೊಸಪೇಟೆ ತಾಲೂಕಿನ ಸಮಗ್ರ ಗಣಿ ಪರಿಸರ ಪುನಶ್ಚೇತನ ಯೋಜನೆಯಡಿ ತೋಟಗಾರಿಕೆ ಇಲಾಖೆ ವತಿಯಿಂದ...

Homeಸುದ್ದಿಗಳು

ಲಾಕಪ್ ಡೆತ್ ಪ್ರಕರಣ ಸಿಬಿಐ ತನಿಖೆಗೆ ಆಗ್ರಹ

ಹರಪನಹಳ್ಳಿ: ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ನಡೆದ ಯುವಕನ ಲಾಕಪ್ ಡೆತ್ ಪ್ರಕರಣವನ್ನು ತೀವ್ರವಾಗಿ ಖಂಡಿಸಿ ಹಾಗೂ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು  ಸಿಪಿಐ(ಎಂಎಲ್) ಹಾಗೂ ಪ್ರಗತಿಪರ ಕಟ್ಟಡ ಕಾರ್ಮಿಕರ ಸಂಘಗಳ ಮುಖಂಡರು ಆಗ್ರಹಿಸಿದ್ದಾರೆ. ಚಿತ್ತಾರಗೇರಿಯಲ್ಲಿರುವ  ಮೃತ ಖಲೀಲ್‌ ಅವರ ಮನೆಗೆ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.