Home ಸ್ಥಳೀಯ ಬಿಜೆಪಿ ಕಾರ್ಯಕರ್ತರ ಸಂಘಟನಾ ಸಮಾವೇಶ
Homeರಾಜಕೀಯ

ಸ್ಥಳೀಯ ಬಿಜೆಪಿ ಕಾರ್ಯಕರ್ತರ ಸಂಘಟನಾ ಸಮಾವೇಶ

Share
ಸ್ಥಳೀಯ ಬಿಜೆಪಿ ಕಾರ್ಯಕರ್ತರ ಸಂಘಟನಾ ಸಮಾವೇಶ
Share

ಹರಪನಹಳ್ಳಿ:  ಬಿಜೆಪಿ ಜಾರಿಗೆ ತಂದಿರುವ ವಿಬಿ ಜಿ ರಾಮ್ ಜಿ ಕಾಯ್ದೆಯಲ್ಲಿ ಲೋಪವಿಲ್ಲ ಇದರ  ಕುರಿತು ಅರಿವು ಮೂಡಿಸಲು ಕಾರ್ಯಕರ್ತರು ಮುಂದಾಗಬೇಕು ಎಂದು ಮಾಜಿ ಕೇಂದ್ರ ಸಚಿವ ಜಿ.ಎಂ ಸಿದ್ದೇಶ್ವರ ಕರೆ ನೀಡಿದರು.

ನಗರದ ತರಳಬಾಳು ಕಲ್ಯಾಣ ಮಂಟಪದಲ್ಲಿ ಶುಕ್ರವಾರ ವಿಬಿ ಜಿ ರಾಮ್ ಜಿ ಜನಜಾಗೃತಿ ಹಾಗೂ ಕಾಂಗ್ರೆಸ್ ಸರ್ಕಾರದ ದುರಾಡಳಿತ ಖಂಡಿಸಿ ಬಿಜೆಪಿ ಪಕ್ಷದಿಂದ ಆಯೋಜಿಸಿದ್ದ  ಕಾರ್ಯಕರ್ತರ ಸಂಘಟನಾ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಈಗಿನ ನರೇಗಾ ನಿರಂತರ ಬದಲಾವಣೆ ಆಗಿದೆ. ರಾಮನ ಹೆಸರನ್ನು ಅರಗಿಸಿಕೊಳ್ಳಲಾಗದ ಕಾಂಗ್ರೆಸ್ ಸರ್ಕಾರ ವಿರೋಧಿಸುತ್ತಿದೆ ಎಂದರು. ಹರಿಹರ ಶಾಸಕ ಬಿ.ಪಿ ಹರೀಶ್ ಮಾತನಾಡಿ, ‘ ಪ್ರಧಾನಿ ನರೇಂದ್ರ ಮೋದಿಯವರು ಕಾರ್ಯಕ್ಷಮತೆಯಿಂದ ದೇಶವನ್ನು ಆರ್ಥಿಕವಾಗಿ ಸಧೃಢದತ್ತ ಒಯ್ಯುತ್ತಿದ್ದಾರೆ ಎಂದು ತಿಳಿಸಿದರು. ಮಾಜಿ ಸಂಸದ ವೈ.ದೇವೇಂದ್ರಪ್ಪ ಮಾತನಾಡಿ, ‘ರಾಜ್ಯದಲ್ಲಿ ಮಧ್ಯಂತರ ವಿಧಾನಸಭಾ ಚುನಾವಣೆ ಘೋಷಣೆಯಾಗುವ ವಾತಾವರಣ ದಟ್ಟವಾಗಿದೆ. ಕಾರ್ಯಕರ್ತರು ಒಗ್ಗೂಡಬೇಕು ಎಂದು ಹೇಳಿದರು.

ಕರ್ನಾಟಕ ರಾಜ್ಯ ಸಂಯುಕ್ತ ಸೌಹಾರ್ದ ಸಹಕಾರಿ ರಾಜ್ಯಾಧ್ಯಕ್ಷ ಜಿ ನಂಜನಗೌಡ ಮಾತನಾಡಿ, ಕೇಂದ್ರದ ಯೋಜನೆ ಅನುಷ್ಠಾನ ಮಾಡುವಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ ಎಂದರು. ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ವೈ.ಡಿ ಅಣ್ಣಪ್ಪ ಮಾತನಾಡಿ, ಬಿಜೆಪಿ ಸರ್ಕಾರ ರೈತರ ಬೆಳೆಗೆ ಬೆಂಬಲ ಬೆಲೆ ಘೋಷಣೆ ಮಾಡಿದ್ದರೂ ಕಾಂಗ್ರೆಸ್ ಜಾರಿಗೊಳಿಸದೆ ರೈತರ ಜೀವದ ಜೊತೆ ಚೆಲ್ಲಾಟ ಅಡುತ್ತಿದೆ’ ಎಂದು ಆರೋಪಿಸಿದರು.

ಗಾಯತ್ರಿ ಸಿದ್ದೇಶ್ವರ, ಡಾ.ರಮೇಶ್, ಮುತ್ತಿಗೆ ವಾಗೇಶ್, ಕಂಚಿಕೆರೆ ಕೆಂಚಪ್ಪ ಮಾತಾನಾಡಿದರು. ಬಿಜೆಪಿ ರಾಜ್ಯ ಎಸ್.ಟಿ ಘಟಕದ  ಉಪಾಧ್ಯಕ್ಷ  ಶ್ರೀನಿವಾಸ ದಾಸಕರಿಯಪ್ಪ, ಜಿಲ್ಲಾ ಬಿಜೆಪಿ ಎಸ್ ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಕಣಿವಿಹಳ್ಳಿ, ಮಾಜಿ ಮಂಡಲ ಅಧ್ಯಕ್ಷ ಸತ್ತೂರು ಹಾಲೇಶ್, ಎಸ್.ಪಿ ನಾಯ್ಕ, ಓಂಕಾರ ಗೌಡ, ಬಂದೋಳ ಮಂಜುನಾಥ್, ಪಾಟೀಲ್ ಕೆಂಚನಗೌಡ, ಮಂಜುನಾಥ್ ಇಜಂತಕರ್, ಸಣ್ಣ ಹಾಲಪ್ಪ, ಕುಸುಮಾ ಜಗದೀಶ್, ಕೆ.ಎಂ ಪ್ರಾಣೇಶ್, ಕೆ.ಮಲ್ಲಿಕಾರ್ಜುನ, ಕೆ.ಲಿಂಗಾನಂದ ಇತರರಿದ್ದರು.

ವಲಸಿಗ ರಾಜಕಾರಣಿಗೆ ಗೋಬ್ಯಾಕ್ ಕಾಲ ಸಮೀಪಿಸುತ್ತಿದೆ

‘ಹರಪನಹಳ್ಳಿಗೆ 2008ರ ವಿಧಾನಸಭಾ ಚುನಾವಣೆಯಲ್ಲಿ ಜಿ.ಕರುಣಾಕರ ರೆಡ್ಡಿಯವರನ್ನು ಬ್ರಿಟಿಷರಂತೆ ಪರಿಚಯಿಸಿ ಕ್ಷೇತ್ರಕ್ಕೆ ಅನ್ಯಾಯ ಮಾಡಿದ್ದು, ಕ್ಷೇತ್ರದ ಬೂತ್ ಮಟ್ಟದ ಜನತೆಯಲ್ಲಿ ಕ್ಷಮೆ ಕೋರುತ್ತೆನೆ ಎಂದು ಹೂವಿನ ಹಡಗಲಿ ಮಾಜಿ ಶಾಸಕ ನಂದಿಹಳ್ಳಿ ಹಾಲಪ್ಪ ಬೇಸರ ವ್ಯಕ್ತಪಡಿಸಿದರು.

ಈಗ ಅಂತಹವರನ್ನು ಕ್ಷೇತ್ರದಿಂದ ಉಚ್ಛಾಟನೆ ಮಾಡಿ, ಗೋ ಬ್ಯಾಕ್ ಮಾಡುವ ಕಾಲ ಸಮೀಪಿಸುತ್ತಿದೆ. ಎಲ್ಲರೂ ಒಗ್ಗಟ್ಟಾಗಬೇಕು. ಈಗಿರುವ ಶಾಸಕಿ ನಮ್ಮ ಕ್ಷೇತ್ರದ ಮಗಳು ಆಗಿದ್ದಾರೆ, ಅವರನ್ನು ಬೈಯೋದು ಬೇಡ, ಅವರಲ್ಲಿ ಆಂತರಿಕ ಕಲಹದಿಂದ ಸೊರಗಿದ್ದಾರೆ. ಹಾಗಾಗಿ ಬಿಜೆಪಿ ಪಕ್ಷವನ್ನು ಬೂತ್ ಮಟ್ಟದಿಂದಲೇ ಸಂಘಟಿಸಲು ಮುಂದಾಗಬೇಕು ಎಂದರು.

 

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಕಲಬುರಗಿಯ ಸೇಂಟ್ ಮೇರಿಸ್ ಶಾಲೆಯಲ್ಲಿ ಉಚಿತ ದಂತ ತಪಾಸಣಾ ಶಿಬಿರ

ಕಲಬುರಗಿ: ಕೊಟನೂರಿನ ಸೇಂಟ್ ಮೇರಿಸ್ ಶಾಲೆಯಲ್ಲಿ ಕಾರ್ಮೆಲ್ ಜ್ಯೋತಿ ಪಬ್ಲಿಕ್ ಚಾರಿಟಬಲ್ ಟ್ರಸ್ಟ್, ಕಡಗಂಚಿ, ಅಲ್...

Homeಸುದ್ದಿಗಳು

ಕ್ರೀಡಾಕೂಟಗಳು ಸ್ಪರ್ಧೆಯಾಗದೆ,ಹಬ್ಬದ ಸಂಭ್ರಮವಾಗಲಿ:ಶಾಸಕ ಬಿ.ದೇವೇಂದ್ರಪ್ಪ ಅಭಿಮತ.

ಹರಪನಹಳ್ಳಿ : ಗ್ರಾಮೀಣ ಭಾಗದಲ್ಲಿ ಕ್ರೀಡಾಕೂಟಗಳು ಕೇವಲ ಸ್ಪರ್ಧೆಯಾಗದೆ, ಹಬ್ಬದ ಸಂಭ್ರಮ ಮನೆಮಾಡಬೇಕು ಎಂದು ಶಾಸಕ...

Homeಸುದ್ದಿಗಳು

ಸೆ.19ರಂದು ಹರಪನಹಳ್ಳಿಯಲ್ಲಿ ತಾಲ್ಲೂಕು ಮಟ್ಟದ ಪ್ರಜಾಸೇವಾ ಕಾರ್ಯಕ್ರಮ

ವಿಜಯನಗರ : ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ, ಅವುಗಳಿಗೆ ಸೂಕ್ತ ಪರಿಹಾರ ಕಲ್ಪಿಸುವ ಉದ್ದೇಶದಿಂದ ಜಿಲ್ಲೆಯ...

Homeಸುದ್ದಿಗಳು

ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ : ಕಾಲಮಿತಿಯಲ್ಲಿ ಅರ್ಜಿಗಳ ವಿಲೇವಾರಿಗೆ ಕ್ರಮ

ವಿಜಯನಗರ : ಸಾರ್ವಜನಿಕರು ತಮ್ಮ ದಿನನಿತ್ಯದ ಸಮಸ್ಯೆಗಳು, ಬೇಡಿಕೆಗಳು ಹಾಗೂ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಕುಂದುಕೊರತೆಗಳಿಗಾಗಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.