Home ಮೂಲಸೌಕರ್ಯ ವಂಚಿತ ಅರಸೀಕೆರೆ ಹೋಬಳಿ: ಶಾಸಕರ ವಿರುದ್ಧ ಕಪ್ಪುಪಟ್ಟಿ ಪ್ರದರ್ಶನದ ಎಚ್ಚರಿಕೆ
Homeಸುದ್ದಿಗಳು

ಮೂಲಸೌಕರ್ಯ ವಂಚಿತ ಅರಸೀಕೆರೆ ಹೋಬಳಿ: ಶಾಸಕರ ವಿರುದ್ಧ ಕಪ್ಪುಪಟ್ಟಿ ಪ್ರದರ್ಶನದ ಎಚ್ಚರಿಕೆ

Share
arsikere
Share

ಹರಪನಹಳ್ಳಿ: ತಾಲ್ಲೂಕಿನ ಅತೀ ದೊಡ್ಡ ಹೋಬಳಿಯಾದ ಅರಸೀಕೆರೆಯು ಮೂಲಭೂತ ಸೌಕರ್ಯಗಳಿಂದ ಸಂಪೂರ್ಣವಾಗಿ ವಂಚಿತವಾಗಿದ್ದು, ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಈ ಭಾಗವನ್ನು ನಿರ್ಲಕ್ಷಿಸಿದ್ದಾರೆ ಎಂದು ಅಖಿಲ ಭಾರತ ಕಿಸಾನ್ ಸಭಾದ ಜಿಲ್ಲಾಧ್ಯಕ್ಷ ಕೆರೆಗುಡಿಹಳ್ಳಿ ಹಾಲೇಶ್ ಆಕ್ರೋಶ ವ್ಯಕ್ತಪಡಿಸಿದರು.

ಶುಕ್ರವಾರ ಅರಸೀಕೆರೆ ಗ್ರಾಮದಲ್ಲಿ ಅಖಿಲ ಭಾರತ ಕಿಸಾನ್ ಸಭಾ, ಕರ್ನಾಟಕ ರಾಜ್ಯ ರೈತ ಸಂಘ, ದಲಿತ ಸಂಘರ್ಷ ಸಮಿತಿ, ಎಐಎಸ್‌ಎಫ್ ಹಾಗೂ ಮಹಿಳಾ ಸಂಘಟನೆಗಳ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿದ್ದ ಬೃಹತ್ ಪ್ರತಿಭಟನಾ ರ‍್ಯಾಲಿಯನ್ನುದ್ದೇಶಿಸಿ ಅವರು ಮಾತನಾಡಿದರು.

ಶಾಸಕರ ವಿರುದ್ಧ ಆಕ್ರೋಶ:

“ನಿರಂತರ ಹೋರಾಟ ಮಾಡುತ್ತಾ ಬಂದರೂ ಜನಪ್ರತಿನಿಧಿಗಳು ಈ ಕಡೆ ಗಮನಹರಿಸಿಲ್ಲ. ನಮ್ಮ ಶಾಸಕರಾದ ಚಿಕ್ಕಮ್ಮನಹಟ್ಟಿ ದೇವೇಂದ್ರಪ್ಪನವರು ಕೂಡ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ಮುಂದಿನ ದಿನಗಳಲ್ಲಿ ಶಾಸಕರು ಈ ಭಾಗಕ್ಕೆ ಭೇಟಿ ನೀಡಿದರೆ ಅವರಿಗೆ ಕಪ್ಪು ಬಟ್ಟೆ ಪ್ರದರ್ಶಿಸಿ ಪ್ರತಿಭಟಿಸಲಾಗುವುದು. ಜಿಲ್ಲಾ ಮಟ್ಟದ ಅಧಿಕಾರಿಗಳು ಪ್ರತಿಭಟನಾ ಸ್ಥಳಕ್ಕೆ ಬಾರದಿರುವುದು ಈ ಭಾಗದ ಜನರ ಬಗ್ಗೆ ಅವರಿಗಿರುವ ನಿರ್ಲಕ್ಷ್ಯವನ್ನು ತೋರಿಸುತ್ತದೆ” ಎಂದು ಎಚ್ಚರಿಸಿದರು.

ಸಮಸ್ಯೆಗಳ ಮಹಾಪೂರ:

ರೈತ ಮುಖಂಡ ಬೂದಿಹಾಳು ಸಿದ್ದೇಶ್ ಮಾತನಾಡಿ, “ರೈತರು ಬೆಳೆದ ಬೆಳೆಗಳಿಗೆ ಬೆಂಬಲ ಬೆಲೆ ಸಿಗುತ್ತಿಲ್ಲ, ಕೂಡಲೇ ರಾಗಿ ಖರೀದಿ ಕೇಂದ್ರ ತೆರೆಯಬೇಕು. ಜಲ ಜೀವನ್ ಮಿಷನ್ ಕಾಮಗಾರಿ ಅರ್ಧಕ್ಕೆ ನಿಂತಿದೆ. ಅರಸೀಕೆರೆಯಿಂದ ಉಚ್ಚಂಗಿದುರ್ಗದವರೆಗಿನ ರಸ್ತೆ ಸಂಚಾರಕ್ಕೆ ಅಯೋಗ್ಯವಾಗಿದೆ. ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರು ಹಾಗೂ ಮೆಡಿಸಿನ್ ಕೊರತೆಯಿದ್ದು, ರಾತ್ರಿ ವೇಳೆಯಲ್ಲಿ ರೋಗಿಗಳಿಗೆ ಚಿಕಿತ್ಸೆ ಸಿಗುತ್ತಿಲ್ಲ” ಎಂದು ದೂರಿದರು.

ದಲಿತ ಸಂಘರ್ಷ ಸಮಿತಿಯ ಕಬ್ಬಳ್ಳಿ ಮೈಲಪ್ಪ ಮಾತನಾಡಿ, “ಹಳ್ಳಿಗಳಿಂದ ಬರುವ ವಿದ್ಯಾರ್ಥಿಗಳಿಗೆ ಸರಿಯಾದ ಬಸ್ ವ್ಯವಸ್ಥೆಯಿಲ್ಲ ಹಾಗೂ ಹಾಸ್ಟೆಲ್ ಸೌಲಭ್ಯವಿಲ್ಲದೆ ಶೈಕ್ಷಣಿಕವಾಗಿ ಹಿಂದುಳಿಯುವಂತಾಗಿದೆ” ಎಂದರು.

ಅಧಿಕಾರಿಗಳ ಭರವಸೆ:

ಸ್ಥಳಕ್ಕೆ ಆಗಮಿಸಿ ಮನವಿ ಸ್ವೀಕರಿಸಿದ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿ ವೈ.ಹೆಚ್. ಚಂದ್ರಶೇಖರ್ ಮಾತನಾಡಿ, “ವಸತಿ ರಹಿತರ ಬಗ್ಗೆ ಈಗಾಗಲೇ ಶಾಸಕರ ಗಮನಕ್ಕೆ ತರಲಾಗಿದೆ. 2024-25ನೇ ಸಾಲಿನಲ್ಲಿ 121 ಮನೆಗಳು ಮಂಜೂರಾಗಿದ್ದು, ಬಜೆಟ್ ಘೋಷಣೆಯಂತೆ ಹೆಚ್ಚಿನ ಮನೆಗಳು ಬರುವ ನಿರೀಕ್ಷೆಯಿದೆ. ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗುವುದು” ಎಂದು ತಿಳಿಸಿದರು.

ಸರ್ಕಾರಿ ಆಸ್ಪತ್ರೆಯಿಂದ ಬಸ್ ನಿಲ್ದಾಣದವರೆಗೆ ಸುಡು ಬಿಸಿಲಿನಲ್ಲಿ ಭ್ರಷ್ಟ ಅಧಿಕಾರಿಗಳು ಹಾಗೂ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ ಪ್ರತಿಭಟನಾಕಾರರು ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆ ನಡೆಸಿದರು.

ಪ್ರತಿಭಟನೆಯಲ್ಲಿ ರೈತ ಮುಖಂಡರಾದ ನಿಚ್ಚವ್ವನಹಳ್ಳಿ ಭೀಮಪ್ಪ, ಪುಣಭಘಟ್ಟ ಮಂಜು, ಡಿ.ಎಸ್.ಎಸ್. ಮುಖಂಡ ದೊಡ್ಡ ಬಸವರಾಜ್, ಎಐಎಸ್‌ಎಫ್ ಮುಖಂಡರಾದ ಡಿ.ಹೆಚ್. ಅರುಣ, ಆಕಾಶ್ ಗುರುಬಸವರಾಜ, ನಾಗರಾಜ್ ಗೌಡ, ಮಲ್ಲನಗೌಡ, ಸತ್ತೂರು ಮಹಾದೇವಪ್ಪ, ಹೆಚ್.ಹಾಲಪ್ಪ, ಅರಸಾಪುರದ ಕಾಳಪ್ಪ, ನಿರ್ಮಲ, ಪ್ರೇಮಾ, ವಿಶಾಲಮ್ಮ, ಹರಿಯಮ್ಮನಹಳ್ಳಿ ಬಸವರಾಜ್, ರಾಮಣ್ಣ, ಶಿವರಾಮ್, ರಂಗಪ್ಪ, ಕಾರ್ಯನಿರ್ವಾಹಣಾಧಿಕಾರಿ ವೈ. ಹೆಚ್. ಚಂದ್ರಶೇಖರ್, ಆರೋಗ್ಯ ಇಲಾಖೆಯ ಅಧಿಕಾರಿ ಪೃಥ್ವಿ, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಗಂಗಪ್ಪ, ಸಹಾಯಕ ಕಾರ್ಯ ಅಧೀಕ್ಷಕರು ಜಗದೀಶ್ ನಾಯಕ್,ರಾಘವೇಂದ್ರ, ಏಳು ಗ್ರಾಮ ಪಂಚಾಯಿತಿಗಳ ರೈತ ಮುಖಂಡರು, ಪ್ರಗತಿಪರ ಸಂಘಟನೆಕಾರರು, ಮಹಿಳೆಯರು ಹಾಗೂ ಕಾಲೇಜ್ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಕಲಬುರಗಿಯ ಸೇಂಟ್ ಮೇರಿಸ್ ಶಾಲೆಯಲ್ಲಿ ಉಚಿತ ದಂತ ತಪಾಸಣಾ ಶಿಬಿರ

ಕಲಬುರಗಿ: ಕೊಟನೂರಿನ ಸೇಂಟ್ ಮೇರಿಸ್ ಶಾಲೆಯಲ್ಲಿ ಕಾರ್ಮೆಲ್ ಜ್ಯೋತಿ ಪಬ್ಲಿಕ್ ಚಾರಿಟಬಲ್ ಟ್ರಸ್ಟ್, ಕಡಗಂಚಿ, ಅಲ್...

Homeಸುದ್ದಿಗಳು

ಕ್ರೀಡಾಕೂಟಗಳು ಸ್ಪರ್ಧೆಯಾಗದೆ,ಹಬ್ಬದ ಸಂಭ್ರಮವಾಗಲಿ:ಶಾಸಕ ಬಿ.ದೇವೇಂದ್ರಪ್ಪ ಅಭಿಮತ.

ಹರಪನಹಳ್ಳಿ : ಗ್ರಾಮೀಣ ಭಾಗದಲ್ಲಿ ಕ್ರೀಡಾಕೂಟಗಳು ಕೇವಲ ಸ್ಪರ್ಧೆಯಾಗದೆ, ಹಬ್ಬದ ಸಂಭ್ರಮ ಮನೆಮಾಡಬೇಕು ಎಂದು ಶಾಸಕ...

Homeಸುದ್ದಿಗಳು

ಸೆ.19ರಂದು ಹರಪನಹಳ್ಳಿಯಲ್ಲಿ ತಾಲ್ಲೂಕು ಮಟ್ಟದ ಪ್ರಜಾಸೇವಾ ಕಾರ್ಯಕ್ರಮ

ವಿಜಯನಗರ : ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ, ಅವುಗಳಿಗೆ ಸೂಕ್ತ ಪರಿಹಾರ ಕಲ್ಪಿಸುವ ಉದ್ದೇಶದಿಂದ ಜಿಲ್ಲೆಯ...

Homeಸುದ್ದಿಗಳು

ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ : ಕಾಲಮಿತಿಯಲ್ಲಿ ಅರ್ಜಿಗಳ ವಿಲೇವಾರಿಗೆ ಕ್ರಮ

ವಿಜಯನಗರ : ಸಾರ್ವಜನಿಕರು ತಮ್ಮ ದಿನನಿತ್ಯದ ಸಮಸ್ಯೆಗಳು, ಬೇಡಿಕೆಗಳು ಹಾಗೂ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಕುಂದುಕೊರತೆಗಳಿಗಾಗಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.