Home ಸುದ್ದಿಗಳು ಬೆಣ್ಣೆಹಳ್ಳಿ: ನಾಳೆ ಆಂಜನೇಯ ಸ್ವಾಮಿ ರಥೋತ್ಸವ
ಸುದ್ದಿಗಳು

ಬೆಣ್ಣೆಹಳ್ಳಿ: ನಾಳೆ ಆಂಜನೇಯ ಸ್ವಾಮಿ ರಥೋತ್ಸವ

Share
Share

ಹರಪನಹಳ್ಳಿ: ತಾಲ್ಲೂಕಿನ ಬೆಣ್ಣೆಹಳ್ಳಿ ಗ್ರಾಮದ ಐತಿಹಾಸಿಕ ಪ್ರಸಿದ್ಧ ಶ್ರೀ ಆಂಜನೇಯ ಸ್ವಾಮಿ ರಥೋತ್ಸವ ಹಾಗೂ ವಿಶೇಷ ಹರಕೆಯಾದ ‘ಮುಳ್ಳಿನ ಪವಾಡ’ ಕಾರ್ಯಕ್ರಮಗಳು ಮಾರ್ಚ್ 18ರಿಂದ 20ರವರೆಗೆ ವಿಜೃಂಭಣೆಯಿಂದ ಜರುಗಲಿವೆ.

ಜಾತ್ರಾ ಮಹೋತ್ಸವದ ಅಂಗವಾಗಿ ಬುಧವಾರ (ಮಾ. 18) ಸಂಜೆ 7 ಗಂಟೆಗೆ ರಥಕ್ಕೆ ಕಳಸಾರೋಹಣ ನೆರವೇರಲಿದೆ. ಬಳಿಕ ಮುಳ್ಳಿನ ಪವಾಡ ನಡೆಸಿಕೊಡುವ ಆರ್. ಜಗದೀಶ್ ಗೌಡ ಅವರಿಗೆ ಕಂಕಣ ಕಟ್ಟುವ ಧಾರ್ಮಿಕ ವಿಧಿವಿಧಾನಗಳು ನಡೆಯಲಿವೆ.

ಸಡಗರದ ರಥೋತ್ಸವ: ಮಾ. 19ರ ಗುರುವಾರ ಬೆಳಗಿನ ಜಾವ 4 ಗಂಟೆಗೆ ಶ್ರೀ ಆಂಜನೇಯ ಸ್ವಾಮಿಗೆ ರುದ್ರಾಭಿಷೇಕ ಪೂಜೆ ನೆರವೇರಲಿದೆ. ಪರಾಭವ ಸಂವತ್ಸರದ ರೇವತಿ ನಕ್ಷತ್ರದ ಯುಗಾದಿ ಪಾಡ್ಯದ ಶುಭ ದಿನದಂದು ಸಂಜೆ 5.30ಕ್ಕೆ ದೇವಸ್ಥಾನದ ಆವರಣದಲ್ಲಿ ರಥೋತ್ಸವಕ್ಕೆ ಚಾಲನೆ ನೀಡಲಾಗುವುದು. ಈ ಹಿನ್ನೆಲೆಯಲ್ಲಿ ಇಡೀ ಗ್ರಾಮ ಹಾಗೂ ದೇವಸ್ಥಾನವನ್ನು ತಳಿರು ತೋರಣ ಮತ್ತು ವಿದ್ಯುತ್ ದೀಪಗಳಿಂದ ಶೃಂಗರಿಸಲಾಗಿದೆ.

ರೋಚಕ ಮುಳ್ಳಿನ ಪವಾಡ: ಮಾ. 20ರ ಶುಕ್ರವಾರ ಸಂಜೆ 5.30ಕ್ಕೆ ಜಾತ್ರೆಯ ಪ್ರಮುಖ ಆಕರ್ಷಣೆಯಾದ ‘ಮುಳ್ಳಿನ ಪವಾಡ’ ನಡೆಯಲಿದೆ. ಈ ಪವಾಡ ನಡೆಸುವ ಜಗದೀಶ್ ಗೌಡ ಅವರು ಮೂರು ದಿನಗಳ ಕಾಲ ಕಠಿಣ ವ್ರತ ಆಚರಿಸಲಿದ್ದಾರೆ. ಹರಿತವಾದ ಕಾರಿ ಮುಳ್ಳಿನಿಂದ ಸಿದ್ಧಪಡಿಸಿದ ಪಲ್ಲಕ್ಕಿಯ ಮೇಲೆ ಮಲಗುವ ಇವರನ್ನು ಭಕ್ತರು ಹೊತ್ತು ದೇವಸ್ಥಾನ ಹಾಗೂ ಓಕುಳಿ ಗುಂಡಿಯ ಸುತ್ತ ಮೆರವಣಿಗೆ ಮಾಡಲಿದ್ದಾರೆ.

ಅಂದು ಬೆಳಿಗ್ಗೆ ಭೇಟಿ ಮರ ತರುವುದು ಹಾಗೂ ಓಕುಳಿ ಗುಂಡಿಗೆ ನೀರು ತುಂಬಿಸುವ ಕಾರ್ಯಕ್ರಮ ನಡೆಯಲಿದೆ. ಸಂಜೆ ಮುಳ್ಳಿನ ಪವಾಡದ ಬಳಿಕ ಓಕುಳಿ ಆಟ, ಕಾಯಿ ಹರಿಯುವ ಸ್ಪರ್ಧೆ ಹಾಗೂ ಚಂದ್ರ ದರ್ಶನ ಕಾರ್ಯಕ್ರಮಗಳು ಜರುಗಲಿವೆ. ಜಾತ್ರೆಯ ಸಂಪ್ರದಾಯದಂತೆ ಓಕುಳಿ ಗುಂಡಿಯಲ್ಲಿ ಮಕ್ಕಳು ಹಾಗೂ ಯುವಕರು ಹಾರಿ ಸಂಭ್ರಮಿಸಲಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ರಸ್ತೆ ನಿರ್ಮಾಣಕ್ಕೆ ಜಾಗ ತ್ಯಾಗ ಮಾಡಿದ ಗ್ರಾಮಸ್ಥರ ಋಣ ತೀರಿಸಲಾಗದು: ಶಾಸಕ ಹೆಚ್.ಆರ್. ಗವಿಯಪ್ಪ

ವಿಜಯನಗರ (ಹೊಸಪೇಟೆ) : ಊರಿನ ಸಾರ್ವಜನಿಕ ರಸ್ತೆ ನಿರ್ಮಾಣ ಹಾಗೂ ಮೂಲಸೌಕರ್ಯ ಅಭಿವೃದ್ಧಿಗಾಗಿ ತಮ್ಮ ಜಾಗ...

Homeಸುದ್ದಿಗಳು

ಕೊಪ್ಪಳ : ಪ್ರತಿಭಾ ಪುರಸ್ಕಾರಕ್ಕೆ ಬನ್ನಿ

ಹರಪನಹಳ್ಳಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಹರಪನಹಳ್ಳಿ ತಾಲೂಕು ಘಟಕದ ವತಿಯಿಂದ 2026-27ನೇ ಸಾಲಿನ...

Homeಸುದ್ದಿಗಳು

ಜಿಲ್ಲೆಯ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಶೇ.100 ಇ-ಫಾರ್ಮ್ ವಿತರಣೆ ಪೂರ್ಣ

ವಿಜಯನಗರ (ಹೊಸಪೇಟೆ)  : ಜಿಲ್ಲೆಯ ಐದು ತಾಲೂಕಿನಿಂದ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ...

Homeಸುದ್ದಿಗಳು

ಜಿಲ್ಲಾ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸದಸ್ಯರ ಆಯ್ಕೆಗೆ ಅರ್ಜಿ ಆಹ್ವಾನ

ವಿಜಯನಗರ(ಹೊಸಪೇಟೆ) : 2026ನೇ ಸಾಲಿಗೆ ಜಿಲ್ಲೆಯಲ್ಲಿ ಅನುಸೂಚಿತ ಜಾತಿಗಳ ಮತ್ತು ಅನುಸೂಚಿತ ಬುಡಕಟ್ಟು ಜಿಲ್ಲಾ ಮಟ್ಟದ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.