Home ಕೊಟ್ಟೂರು: ಕಳುವಾಗಿದ್ದ ಹಸುಗಳ ಪತ್ತೆ, ಇಬ್ಬರು ಕಳ್ಳರ ಬಂಧನ
Homeಅಪರಾಧ

ಕೊಟ್ಟೂರು: ಕಳುವಾಗಿದ್ದ ಹಸುಗಳ ಪತ್ತೆ, ಇಬ್ಬರು ಕಳ್ಳರ ಬಂಧನ

Share
kottur-cattle-theft-arrest
Share

ಕೊಟ್ಟೂರು : ಪೊಲೀಸ್ ಠಾಣಾ ವ್ಯಾಪ್ತಿಯ ಸುಂಕದಕಲ್ಲು ಗ್ರಾಮದಲ್ಲಿ ನಡೆದಿದ್ದ ಜಾನುವಾರು ಕಳ್ಳತನ ಪ್ರಕರಣ ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ₹ 1.20 ಲಕ್ಷ ರೂ. ಮೌಲ್ಯದ ಎರಡು ಆಕಳುಗಳು ಹಾಗೂ 20 ಸಾವಿರ ರೂ. ನಗದನ್ನು ಜಪ್ತಿ ಮಾಡಲಾಗಿದೆ.

ಕೊಟ್ಟೂರು ತಾಲ್ಲೂಕಿನ ಸುಂಕದಕಲ್ಲು ಗ್ರಾಮದ ಬಂಡ್ರಿ ಅಣ್ಣಪ್ಪ, ಕೆ.ಸುದೀಪ್‌ ಬಂಧಿತ ಆರೋಪಿಗಳು.

ಘಟನೆ ಹಿನ್ನೆಲೆ : 

ಸುಂಕದಕಲ್ಲು ಗ್ರಾಮದ ನಿವಾಸಿ ಶ್ರೀ ಆರ್.ಎಂ. ರುದ್ರಯ್ಯ ಎಂಬುವವರ ಕಣದಲ್ಲಿ ಕಟ್ಟಿದ್ದ ಎರಡು ಆಕಳುಗಳನ್ನು ಮಾರ್ಚ್ 12, 2026 ರ ರಾತ್ರಿ 10:30 ರಿಂದ ಮಾರ್ಚ್ 13ರ ಬೆಳಿಗ್ಗೆ 05:00 ಗಂಟೆಯ ನಡುವಿನ ಅವಧಿಯಲ್ಲಿ ಯಾರೋ ಕಳ್ಳರು ಕದ್ದೊಯ್ದಿದ್ದರು. ಈ ಕುರಿತು ಆರ್.ಎಂ. ರುದ್ರಯ್ಯ ಅವರು ಮಾರ್ಚ್ 13 ರಂದು ಕೊಟ್ಟೂರು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರಿನ ಅನ್ವಯ ಠಾಣೆಯಲ್ಲಿ ಪ್ರಕರಣ (ಗುನ್ಹೆ ಸಂ. 56/2026) ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿತ್ತು.

ಪೊಲೀಸರ ಕಾರ್ಯಾಚರಣೆ:

ಪ್ರಕರಣದ ತನಿಖೆ ಕೈಗೊಂಡ ಪೊಲೀಸರು, ಕೊಟ್ಟೂರು ವೃತ್ತದ ಸಿ.ಪಿ.ಐ.  ಡಿ. ದುರುಗಪ್ಪ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದರು. ಕೊಟ್ಟೂರು ಪೊಲೀಸ್ ಠಾಣೆಯ ಪಿ.ಎಸ್.ಐ (ಕಾ&ಸು)  ಗೀತಾಂಜಲಿ ಶಿಂಧೆ ಹಾಗೂ ಸಿಬ್ಬಂದಿಗಳಾದ  ಬಸವರಾಜ ಹೆಚ್. (ಸಿಪಿಸಿ-204),  ಶಿಶಧರ (ಸಿಪಿಸಿ-494) ಮತ್ತು  ನಾಗಪ್ಪ ಯು. (ಹೆಚ್.ಸಿ 256) ಅವರನ್ನೊಳಗೊಂಡ ತಂಡವು ಜಾನುವಾರು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದೆ.

ಆರೋಪಿತರನ್ನು ದಸ್ತಗಿರಿ ಮಾಡಿರುವ ಪೊಲೀಸರು, ಅವರಿಂದ ಅಂದಾಜು ₹ 1,20,000 ರೂಪಾಯಿ ಬೆಲೆಬಾಳುವ 2 ಆಕಳು  ಮತ್ತು ₹ 20,000 ರೂಪಾಯಿ ನಗದು ಹಣ  ವಶಪಡಿಸಿಕೊಂಡಿದ್ದಾರೆ ಎಂದು ವಿಜಯನಗರ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಛೇರಿ ಪತ್ರಿಕಾ ಪ್ರಕಟಣೆ (ದೂರವಾಣಿ: 08394-200202) ತಿಳಿಸಿದೆ.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಕಲಬುರಗಿಯ ಸೇಂಟ್ ಮೇರಿಸ್ ಶಾಲೆಯಲ್ಲಿ ಉಚಿತ ದಂತ ತಪಾಸಣಾ ಶಿಬಿರ

ಕಲಬುರಗಿ: ಕೊಟನೂರಿನ ಸೇಂಟ್ ಮೇರಿಸ್ ಶಾಲೆಯಲ್ಲಿ ಕಾರ್ಮೆಲ್ ಜ್ಯೋತಿ ಪಬ್ಲಿಕ್ ಚಾರಿಟಬಲ್ ಟ್ರಸ್ಟ್, ಕಡಗಂಚಿ, ಅಲ್...

Homeಸುದ್ದಿಗಳು

ಕ್ರೀಡಾಕೂಟಗಳು ಸ್ಪರ್ಧೆಯಾಗದೆ,ಹಬ್ಬದ ಸಂಭ್ರಮವಾಗಲಿ:ಶಾಸಕ ಬಿ.ದೇವೇಂದ್ರಪ್ಪ ಅಭಿಮತ.

ಹರಪನಹಳ್ಳಿ : ಗ್ರಾಮೀಣ ಭಾಗದಲ್ಲಿ ಕ್ರೀಡಾಕೂಟಗಳು ಕೇವಲ ಸ್ಪರ್ಧೆಯಾಗದೆ, ಹಬ್ಬದ ಸಂಭ್ರಮ ಮನೆಮಾಡಬೇಕು ಎಂದು ಶಾಸಕ...

Homeಸುದ್ದಿಗಳು

ಸೆ.19ರಂದು ಹರಪನಹಳ್ಳಿಯಲ್ಲಿ ತಾಲ್ಲೂಕು ಮಟ್ಟದ ಪ್ರಜಾಸೇವಾ ಕಾರ್ಯಕ್ರಮ

ವಿಜಯನಗರ : ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ, ಅವುಗಳಿಗೆ ಸೂಕ್ತ ಪರಿಹಾರ ಕಲ್ಪಿಸುವ ಉದ್ದೇಶದಿಂದ ಜಿಲ್ಲೆಯ...

Homeಸುದ್ದಿಗಳು

ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ : ಕಾಲಮಿತಿಯಲ್ಲಿ ಅರ್ಜಿಗಳ ವಿಲೇವಾರಿಗೆ ಕ್ರಮ

ವಿಜಯನಗರ : ಸಾರ್ವಜನಿಕರು ತಮ್ಮ ದಿನನಿತ್ಯದ ಸಮಸ್ಯೆಗಳು, ಬೇಡಿಕೆಗಳು ಹಾಗೂ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಕುಂದುಕೊರತೆಗಳಿಗಾಗಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.