Home ಕೊಟ್ಟೂರು: ಕಳುವಾಗಿದ್ದ ಹಸುಗಳ ಪತ್ತೆ, ಇಬ್ಬರು ಕಳ್ಳರ ಬಂಧನ
Homeಅಪರಾಧ

ಕೊಟ್ಟೂರು: ಕಳುವಾಗಿದ್ದ ಹಸುಗಳ ಪತ್ತೆ, ಇಬ್ಬರು ಕಳ್ಳರ ಬಂಧನ

Share
kottur-cattle-theft-arrest
Share

ಕೊಟ್ಟೂರು : ಪೊಲೀಸ್ ಠಾಣಾ ವ್ಯಾಪ್ತಿಯ ಸುಂಕದಕಲ್ಲು ಗ್ರಾಮದಲ್ಲಿ ನಡೆದಿದ್ದ ಜಾನುವಾರು ಕಳ್ಳತನ ಪ್ರಕರಣ ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ₹ 1.20 ಲಕ್ಷ ರೂ. ಮೌಲ್ಯದ ಎರಡು ಆಕಳುಗಳು ಹಾಗೂ 20 ಸಾವಿರ ರೂ. ನಗದನ್ನು ಜಪ್ತಿ ಮಾಡಲಾಗಿದೆ.

ಕೊಟ್ಟೂರು ತಾಲ್ಲೂಕಿನ ಸುಂಕದಕಲ್ಲು ಗ್ರಾಮದ ಬಂಡ್ರಿ ಅಣ್ಣಪ್ಪ, ಕೆ.ಸುದೀಪ್‌ ಬಂಧಿತ ಆರೋಪಿಗಳು.

ಘಟನೆ ಹಿನ್ನೆಲೆ : 

ಸುಂಕದಕಲ್ಲು ಗ್ರಾಮದ ನಿವಾಸಿ ಶ್ರೀ ಆರ್.ಎಂ. ರುದ್ರಯ್ಯ ಎಂಬುವವರ ಕಣದಲ್ಲಿ ಕಟ್ಟಿದ್ದ ಎರಡು ಆಕಳುಗಳನ್ನು ಮಾರ್ಚ್ 12, 2026 ರ ರಾತ್ರಿ 10:30 ರಿಂದ ಮಾರ್ಚ್ 13ರ ಬೆಳಿಗ್ಗೆ 05:00 ಗಂಟೆಯ ನಡುವಿನ ಅವಧಿಯಲ್ಲಿ ಯಾರೋ ಕಳ್ಳರು ಕದ್ದೊಯ್ದಿದ್ದರು. ಈ ಕುರಿತು ಆರ್.ಎಂ. ರುದ್ರಯ್ಯ ಅವರು ಮಾರ್ಚ್ 13 ರಂದು ಕೊಟ್ಟೂರು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರಿನ ಅನ್ವಯ ಠಾಣೆಯಲ್ಲಿ ಪ್ರಕರಣ (ಗುನ್ಹೆ ಸಂ. 56/2026) ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿತ್ತು.

ಪೊಲೀಸರ ಕಾರ್ಯಾಚರಣೆ:

ಪ್ರಕರಣದ ತನಿಖೆ ಕೈಗೊಂಡ ಪೊಲೀಸರು, ಕೊಟ್ಟೂರು ವೃತ್ತದ ಸಿ.ಪಿ.ಐ.  ಡಿ. ದುರುಗಪ್ಪ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದರು. ಕೊಟ್ಟೂರು ಪೊಲೀಸ್ ಠಾಣೆಯ ಪಿ.ಎಸ್.ಐ (ಕಾ&ಸು)  ಗೀತಾಂಜಲಿ ಶಿಂಧೆ ಹಾಗೂ ಸಿಬ್ಬಂದಿಗಳಾದ  ಬಸವರಾಜ ಹೆಚ್. (ಸಿಪಿಸಿ-204),  ಶಿಶಧರ (ಸಿಪಿಸಿ-494) ಮತ್ತು  ನಾಗಪ್ಪ ಯು. (ಹೆಚ್.ಸಿ 256) ಅವರನ್ನೊಳಗೊಂಡ ತಂಡವು ಜಾನುವಾರು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದೆ.

ಆರೋಪಿತರನ್ನು ದಸ್ತಗಿರಿ ಮಾಡಿರುವ ಪೊಲೀಸರು, ಅವರಿಂದ ಅಂದಾಜು ₹ 1,20,000 ರೂಪಾಯಿ ಬೆಲೆಬಾಳುವ 2 ಆಕಳು  ಮತ್ತು ₹ 20,000 ರೂಪಾಯಿ ನಗದು ಹಣ  ವಶಪಡಿಸಿಕೊಂಡಿದ್ದಾರೆ ಎಂದು ವಿಜಯನಗರ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಛೇರಿ ಪತ್ರಿಕಾ ಪ್ರಕಟಣೆ (ದೂರವಾಣಿ: 08394-200202) ತಿಳಿಸಿದೆ.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ರಸ್ತೆ ನಿರ್ಮಾಣಕ್ಕೆ ಜಾಗ ತ್ಯಾಗ ಮಾಡಿದ ಗ್ರಾಮಸ್ಥರ ಋಣ ತೀರಿಸಲಾಗದು: ಶಾಸಕ ಹೆಚ್.ಆರ್. ಗವಿಯಪ್ಪ

ವಿಜಯನಗರ (ಹೊಸಪೇಟೆ) : ಊರಿನ ಸಾರ್ವಜನಿಕ ರಸ್ತೆ ನಿರ್ಮಾಣ ಹಾಗೂ ಮೂಲಸೌಕರ್ಯ ಅಭಿವೃದ್ಧಿಗಾಗಿ ತಮ್ಮ ಜಾಗ...

Homeಅಪರಾಧ

ಹರಪನಹಳ್ಳಿ: ನಕಲಿ ದಾಖಲೆ ಸೃಷ್ಟಿಸಿ 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಹರಪನಹಳ್ಳಿ : ನಕಲಿ ದಾಖಲೆ ಸೃಷ್ಟಿಸಿಕೊಂಡು ತನ್ನ ಹೆಸರಿಗೆ ಆಸ್ತಿ ಪತ್ರಗಳನ್ನು ಮಾಡಿಕೊಂಡು ಪರಾರಿಯಾಗಿದ್ದ 12...

Homeಸುದ್ದಿಗಳು

ಕೊಪ್ಪಳ : ಪ್ರತಿಭಾ ಪುರಸ್ಕಾರಕ್ಕೆ ಬನ್ನಿ

ಹರಪನಹಳ್ಳಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಹರಪನಹಳ್ಳಿ ತಾಲೂಕು ಘಟಕದ ವತಿಯಿಂದ 2026-27ನೇ ಸಾಲಿನ...

Homeಕೃಷಿ

ಹರಪನಹಳ್ಳಿ ತಾಲ್ಲೂಕನ್ನು ಬರಪೀಡಿತ ಎಂದು ಘೋಷಿಸಲು ಆಗ್ರಹಿಸಿ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ

ಹರಪನಹಳ್ಳಿ : ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲ್ಲೂಕನ್ನು ಬರಪೀಡಿತ ತಾಲ್ಲೂಕು ಎಂದು ಘೋಷಿಸಬೇಕು ಎಂದು ಆಗ್ರಹಿಸಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.