Home ಅಪರಾಧ ಹಲುವಾಗಲು : ತಂದೆ ಕಣ್ಮುಂದೆಯೆ ಇಬ್ಬರು ಮಕ್ಕಳ ದುರ್ಮರಣ
ಅಪರಾಧ

ಹಲುವಾಗಲು : ತಂದೆ ಕಣ್ಮುಂದೆಯೆ ಇಬ್ಬರು ಮಕ್ಕಳ ದುರ್ಮರಣ

Share
Share

ಹರಪನಹಳ್ಳಿ: ತಾಲ್ಲೂಕಿನ ಹಲುವಾಗಲು ತುಂಗಭದ್ರಾ ನದಿಯಲ್ಲಿ ಈಜಲು ಹೋಗಿದ್ದಾಗ ನೀರಲ್ಲಿ ಮುಳುಗಿ ಅಣ್ಣ ತಮ್ಮ ಜಲಸಮಾಧಿ ಯಾಗಿದ್ದು, ಕಿರಿಯ ಮಗನನ್ನು ತಂದೆ ರಕ್ಷಿಸಿದ್ದಾರೆ.

ಹಲುವಾಗಲು ಗ್ರಾಮದ ನಿವಾಸಿ ಮಂಜಪ್ಪ ಅವರ ಪುತ್ರರಾದ ಎಂ.ಜಿ. ಮನು (19) ಹಾಗೂ ಎಂ.ಜಿ. ಪ್ರಜ್ವಲ್ (18) ಎಂದು ಗುರುತಿಸಲಾಗಿದೆ. ಮನು ಅವರು ಬಿ.ಇ. (ಎಂಜಿನಿಯರಿಂಗ್) ಮೊದಲ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದರೆ, ಪ್ರಜ್ವಲ್ ಪಿಯುಸಿ ಓದುತ್ತಿದ್ದ.

ಘಟನೆ ವಿವರ : ಗ್ರಾಮದ ಕೃಷಿಕರಾದ ಎನ್.ಜಿ. ಮಂಜಪ್ಪ ಅವರು ತಮ್ಮ ಮೂವರು ಮಕ್ಕಳೊಂದಿಗೆ ತೆರಳಿದ್ದಾಗ ಈ ದುರಂತ ಸಂಭವಿಸಿದೆ. ಮಕ್ಕಳು ನೀರಿನಲ್ಲಿ ಇಳಿದಾಗ ಆಯಾತಪ್ಪಿ ಮುಳುಗಲಾರಂಭಿಸಿದ್ದಾರೆ.
ತಕ್ಷಣವೇ ಕಾರ್ಯಪ್ರವೃತ್ತರಾದ ತಂದೆ ಮಂಜಪ್ಪ ಅವರು ತಮ್ಮ ಕಿರಿಯ ಮಗ ಚಿರಂಜೀವಿಯನ್ನು ಕಷ್ಟಪಟ್ಟು ನೀರಿನಿಂದ ಹೊರತಂದು ಪ್ರಾಣ ಉಳಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಆದರೆ, ದುರಾದೃಷ್ಟವಶಾತ್ ಉಳಿದ ಇಬ್ಬರು ಮಕ್ಕಳಾದ ಮನು ಹಾಗೂ ಪ್ರಜ್ವಲ್ ಅವರನ್ನು ರಕ್ಷಿಸಲು ಸಾಧ್ಯವಾಗದೆ, ಇಬ್ಬರೂ ನೀರಿನಲ್ಲಿ ಮುಳುಗಿ ಪ್ರಾಣ ಕಳೆದುಕೊಂಡಿದ್ದಾರೆ. ಮೃತದೇಹ ಹೊರತೆಗೆದು ಸರ್ಕಾರಿ ಆಸ್ಪತ್ರೆ ಶವಗಾರಕ್ಕೆ ಸಾಗಿಸಲಾಗಿದೆ.

ಘಟನೆ‌ ನಡೆದ ಸ್ಥಳಕ್ಕೆ ಎಸ್ಪಿ ಎಸ್.ಜಾಹ್ನವಿ ಬೇಟಿ ನೀಡಿ ಪರಿಶೀಲಿಸಿದರು‌. ಹಲುವಾಲು ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ.

 

Share

Leave a comment

Leave a Reply

Your email address will not be published. Required fields are marked *

Related Articles
Homeಅಪರಾಧ

ಹರಪನಹಳ್ಳಿ: ನಕಲಿ ದಾಖಲೆ ಸೃಷ್ಟಿಸಿ 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಹರಪನಹಳ್ಳಿ : ನಕಲಿ ದಾಖಲೆ ಸೃಷ್ಟಿಸಿಕೊಂಡು ತನ್ನ ಹೆಸರಿಗೆ ಆಸ್ತಿ ಪತ್ರಗಳನ್ನು ಮಾಡಿಕೊಂಡು ಪರಾರಿಯಾಗಿದ್ದ 12...

Homeಅಪರಾಧ

ಪೊಲೀಸ್ ಇಲಾಖೆಯಿಂದ ಭರ್ಜರಿ ಕಾರ್ಯಾಚರಣೆ : 4.57ಕೋಟಿ ಸ್ವತ್ತು ವಶ

ವಿಜಯನಗರ(ಹೊಸಪೇಟೆ) : 2025ರ ಜನವರಿ 1 ರಿಂದ ಜೂನ್ 30 ರವರೆಗೆ ಜಿಲ್ಲೆಯ್ಲಲಿ ಸ್ವತ್ತು ಕಳುವಾದ...

ಬಾಗಳಿಯಲ್ಲಿ ಬಾವಿಗೆ ಬಿದ್ದು ಬಾಲಕ ಸಾವು
Homeಅಪರಾಧ

ಬಾವಿಗೆ ಬಿದ್ದು ಬಾಲಕ ಸಾವು

ಹರಪನಹಳ್ಳಿ : ತಾಲೂಕಿನ ಬಾಗಳಿ ಗ್ರಾಮದ ಐತಿಹಾಸಿಕ ಕಲ್ಲೇಶ್ವರ ದೇವಸ್ಥಾನ ವೀಕ್ಷಣೆಗೆ ಬಂದಿದ್ದ 4ನೇ ತರಗತಿಯ...

sandeep kanivihalli
Homeಅಪರಾಧ

ವಿದ್ಯುತ್ ತಂತಿ ಸ್ಪರ್ಶಿಸಿ ಬಾಲಕ ಸಾವು

ಹರಪನಹಳ್ಳಿ : ತಾಲೂಕಿನ ಕಣಿವಿಹಳ್ಳಿಯಲ್ಲಿ ನೀರು ತರಲು ಹೋಗಿದ್ದ ಬಾಲಕ ಸಂದೀಪ್ (15) ಕೊಳವೆಬಾವಿ ಬಳಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.