Home ಶಿಕ್ಷಣ ಆದರ್ಶ ವಿದ್ಯಾಲಯ : ಅಜಯ್‍ ಗುಪ್ತಾ ಮಕ್ಕಳೊಂದಿಗೆ ಸಂವಾದ
ಶಿಕ್ಷಣ

ಆದರ್ಶ ವಿದ್ಯಾಲಯ : ಅಜಯ್‍ ಗುಪ್ತಾ ಮಕ್ಕಳೊಂದಿಗೆ ಸಂವಾದ

Share
PMSHRI ADARSHA VIDYALYA
Share

ಹರಪನಹಳ್ಳಿ (ವಿಜಯನಗರ): ತಾಲೂಕಿನ ಅನಂತಹಳ್ಳಿ ಗ್ರಾಮದಲ್ಲಿರುವ ಪಿಎಂಶ್ರೀ ಆದರ್ಶ ವಿದ್ಯಾಲಯಕ್ಕೆ ಗುರುವಾರ ಕೇಂದ್ರ ಮತ್ತು ರಾಜ್ಯ ಸರ್ಕಾರದ ಉನ್ನತಮಟ್ಟದ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು. ಈ ವೇಳೆ ಶಾಲೆಯ ಅತ್ಯುತ್ತಮ ಸ್ಥಿತಿಗತಿ ಹಾಗೂ ಮಕ್ಕಳ ಶೈಕ್ಷಣಿಕ ಕಲಿಕಾ ಪ್ರಗತಿಯನ್ನು ಕಂಡು ಅಧಿಕಾರಿಗಳು ತೀವ್ರ ಮೆಚ್ಚುಗೆ ವ್ಯಕ್ತಪಡಿಸಿದರು.

ಕಾನೂನು ಮತ್ತು ನ್ಯಾಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಅಜಯ್ ಗುಪ್ತಾ ಹಾಗೂ ರಾಜ್ಯ ಸಮಗ್ರ ಶಿಕ್ಷಣ ಇಲಾಖೆ ಯೋಜನಾ ನಿರ್ದೇಶಕಿ ಕೆ.ವಿದ್ಯಾಕುಮಾರಿ ಅವರ ನೇತೃತ್ವದ ತಂಡ ಶಾಲೆಯಲ್ಲಿ ತಪಾಸಣೆ ನಡೆಸಿತು. ಆದರ್ಶ ವಿದ್ಯಾಲಯದಲ್ಲಿರುವ ವಿಜ್ಞಾನ, ಗಣಿತ ಹಾಗೂ ಸಮಾಜ ವಿಜ್ಞಾನ ಪ್ರಯೋಗಾಲಯಗಳಿಗೆ ತೆರಳಿ ವೀಕ್ಷಿಸಿದ ಅಧಿಕಾರಿಗಳು, ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ಪ್ರಶ್ನೆಗಳನ್ನು ಕೇಳಿ ಉತ್ತರ ಪಡೆದುಕೊಂಡರು.

ಶಾಲೆಯ ಸೇವಾದಳ, ಸ್ಕೌಟ್ ಮತ್ತು ಗೈಡ್‍, ಸಂಗೀತ, ಕ್ರೀಡೆ ಹಾಗೂ ಯೋಗಪಟುಗಳ ಪ್ರತಿಭೆಗಳನ್ನು ವೀಕ್ಷಿಸಿ ಅಧಿಕಾರಿಗಳು ಸಂತಸಪಟ್ಟರು. ಇದೇ ವೇಳೆ ಶಾಲೆಯ ಅಡಿಟೋರಿಯಂ, ಹೊರಾಂಗಣ, ಗ್ರಂಥಾಲಯ ಹಾಗೂ ಅಡುಗೆ ಕೋಣೆಯಲ್ಲಿನ ಅಚ್ಚುಕಟ್ಟಾದ ವ್ಯವಸ್ಥೆಗೆ ಶಭಾಷ್‌ಗಿರಿ ನೀಡಿದರು.

ಶಾಲೆಯ ನಿರ್ವಹಣೆಗೆ ಕೇಂದ್ರದ ಅಧಿಕಾರಿಗಳ ಶ್ಲಾಘನೆ

ಪರಿಶೀಲನೆ ಬಳಿಕ ಮಾತನಾಡಿದ ಕಾನೂನು ಮತ್ತು ನ್ಯಾಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಅಜಯ್ ಗುಪ್ತಾ, “ಕೇಂದ್ರ ಮತ್ತು ರಾಜ್ಯ ಸರ್ಕಾರದ ಅನುದಾನ ಪಡೆದು ನಡೆಯುತ್ತಿರುವ ಪಿಎಂ ಶ್ರೀ ಆದರ್ಶ ವಿದ್ಯಾಲಯದ ವ್ಯವಸ್ಥೆಗಳ ಬಗ್ಗೆ ಪರಿಶೀಲನೆ ನಡೆಸಲಾಯಿತು. ಇಲ್ಲಿ ಅತ್ಯಂತ ಅಚ್ಚುಕಟ್ಟಾದ ವ್ಯವಸ್ಥೆ ಇದೆ, ಜೊತೆಗೆ ಮಕ್ಕಳ ಕಲಿಕೆಯು ಉತ್ತಮವಾಗಿದೆ” ಎಂದು ತಮ್ಮ ಅಭಿಪ್ರಾಯ ಹಂಚಿಕೊಂಡರು.

ಹಾಸ್ಟೆಲ್ ಆರಂಭಕ್ಕೆ ಶಿಫಾರಸು: ಕೆ.ವಿದ್ಯಾಕುಮಾರಿ

ರಾಜ್ಯ ಸಮಗ್ರ ಶಿಕ್ಷಣ ಇಲಾಖೆ ಯೋಜನಾ ನಿರ್ದೇಶಕಿ ಕೆ.ವಿದ್ಯಾಕುಮಾರಿ ಮಾತನಾಡಿ, “ಪಿಎಂ ಶ್ರೀ ಶಾಲೆಗಳನ್ನು ಉನ್ನತೀಕರಣ ಮಾಡಲು ರಾಜ್ಯ ಮತ್ತು ಕೇಂದ್ರ ಸರ್ಕಾರದ ಅನುದಾನದಡಿ ರಾಜ್ಯದ ಒಟ್ಟು 575 ಶಾಲೆಗಳು ಮಂಜೂರಾಗಿವೆ. ಇಲ್ಲಿ ಅನುಷ್ಠಾನಗೊಂಡಿರುವ ಕಾಮಗಾರಿಗಳ ಗುಣಮಟ್ಟ ಮತ್ತು ಮಕ್ಕಳ ಶೈಕ್ಷಣಿಕ ಪ್ರಗತಿಯ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ಇದರ ಭಾಗವಾಗಿಯೇ ಕೇಂದ್ರ ಸರ್ಕಾರದಿಂದ ಅಜಯ್ ಗುಪ್ತಾ ಅವರು ಆಗಮಿಸಿ ಪರಿಶೀಲಿಸಿದ್ದಾರೆ. ಶಾಲೆಗಳ ಸಮಗ್ರ ಶಿಕ್ಷಣದ ಬಗ್ಗೆ ಉತ್ತಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ” ಎಂದು ತಿಳಿಸಿದರು.

“ರಾಜ್ಯದ ಆದರ್ಶ ಶಾಲೆಗಳಿಗೆ ಪ್ರಸ್ತುತ ವಸತಿ ನಿಲಯದ (ಹಾಸ್ಟೆಲ್) ವ್ಯವಸ್ಥೆಯಿಲ್ಲ. ಹೀಗಾಗಿ ಅಗತ್ಯವಿರುವ ಕಡೆಗಳಲ್ಲಿ ಹಾಸ್ಟೆಲ್ ಆರಂಭಿಸಲು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ಶೀಘ್ರವೇ ಶಿಫಾರಸ್ಸು ಪತ್ರ ಕಳಿಸಲಾಗುವುದು” ಎಂಬ ಮಹತ್ವದ ಮಾಹಿತಿಯನ್ನು ಅವರು ನೀಡಿದರು.

ಉಪಸ್ಥಿತರಿದ್ದ ಗಣ್ಯರು:

ವಿಜಯನಗರ ಜಿಲ್ಲಾ ಉಪನಿರ್ದೇಶಕ ವೆಂಕಟೇಶ್ ರಾಮಚಂದ್ರಪ್ಪ, ಪಿಎಂಶ್ರೀ ನೋಡಲ್ ಅಧಿಕಾರಿ ಪಾರ್ವತಿ, ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಲೇಪಾಕ್ಷಪ್ಪ, ಶಾಲೆಯ ಮುಖ್ಯಶಿಕ್ಷಕ ಎಚ್.ಕೆ.ಚಂದ್ರಪ್ಪ, ಸಹಾಯಕ ನಿರ್ದೇಶಕ ನಾಗರಾಜ್, ಸಮನ್ವಯಾಧಿಕಾರಿ ಹೊನ್ನೆತ್ತೆಪ್ಪ, ಎಸ್‌ಡಿಎಂಸಿ ಅಧ್ಯಕ್ಷ ಜಿ.ಸಿದ್ದನಗೌಡ, ನಿಕಟಪೂರ್ವ ಅಧ್ಯಕ್ಷ ಶೀಲ್ಯಾನಾಯ್ಕ, ಉಪಾಧ್ಯಕ್ಷೆ ನೇತ್ರಾವತಿ, ಸದಸ್ಯರಾದ ಕವಿತಾ, ಜಿ.ಶಾರದಾ, ರಾಧಾ ಹಾಗೂ ಶಾಲಾ ಶಿಕ್ಷಣ ಇಲಾಖೆಯ ಎಚ್.ಸಲೀಂ, ಸಿಬ್ಬಂದಿ ವರ್ಗ ಮತ್ತು ಆದರ್ಶ ಶಾಲೆಯ ಶಿಕ್ಷಕರು ಹಾಜರಿದ್ದರು.

 

Share

Leave a comment

Leave a Reply

Your email address will not be published. Required fields are marked *

Related Articles
nivrutta
Homeಕಲೆಕ್ರೀಡೆಶಿಕ್ಷಣ

ನೌಕರರ ಹಿತರಕ್ಷಣೆಗೆ ಸಂಘ ಸದಾ ಬದ್ಧ: ಎನ್.ಜಿ. ಮನೋಹರ ಭರವಸೆ

ಹರಪನಹಳ್ಳಿ: "ಸರ್ಕಾರಿ ನೌಕರರಿಗೆ ಯಾವುದೇ ರೀತಿಯ ಸಮಸ್ಯೆಗಳು ಎದುರಾಗದಂತೆ ನೋಡಿಕೊಳ್ಳಲು ರಾಜ್ಯ ನೌಕರರ ಸಂಘ ಹಾಗೂ ತಾಲೂಕು ಘಟಕವು ಸದಾ ನಿಮ್ಮ ಬೆನ್ನೆಲುಬಾಗಿ ನಿಲ್ಲಲಿದೆ" ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷರಾದ ಎನ್.ಜಿ. ಮನೋಹರ ಅವರು ಭರವಸೆ ನೀಡಿದರು. ಇಲ್ಲಿನ ಸರ್ಕಾರಿ ನೌಕರರ ಸಂಘದ ಸಭಾಂಗಣದಲ್ಲಿ ಭಾನುವಾರ ತಾಲೂಕು ಘಟಕದ ವತಿಯಿಂದ ಆಯೋಜಿಸಲಾಗಿದ್ದ ವಿವಿಧ ಇಲಾಖೆಗಳ ನಿವೃತ್ತ ನೌಕರರು, ನಿವೃತ್ತ ಶಿಕ್ಷಕರು ಹಾಗೂ ಬಡ್ತಿ ಹೊಂದಿದ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಸನ್ಮಾನ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. "ಶಿಕ್ಷಕರು ವೃತ್ತಿಯಿಂದ ನಿವೃತ್ತರಾಗುತ್ತಿದ್ದಾರೆಯೇ ವಿನಃ ಅವರ ಅನುಭವದಿಂದಲ್ಲ. ನಿವೃತ್ತಿಯ ನಂತರವೂ ನಾವು ಮತ್ತು ನಿವೃತ್ತ ನೌಕರರ ಸಂಘ ಸದಾ ನಿಮ್ಮ ಜೊತೆಗಿರುತ್ತೇವೆ. ನಿವೃತ್ತ ಜೀವನದಲ್ಲಿ ಪ್ರತಿಯೊಬ್ಬರೂ ಪ್ರತಿದಿನ ವ್ಯಾಯಾಮ, ಪುಸ್ತಕ ಓದುವುದು, ತೋಟಗಾರಿಕೆ, ಸಂಗೀತ, ಕಲೆ, ಯೋಗ ಅಥವಾ ವಾಕಿಂಗ್ ಮಾಡುವ ಮೂಲಕ ತಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಉತ್ತಮವಾಗಿ ಕಾಪಾಡಿಕೊಳ್ಳಬೇಕು" ಎಂದು ಮನೋಹರ ಅವರು ಕಿವಿಮಾತು ಹೇಳಿದರು. ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ಜಿಲ್ಲಾಧ್ಯಕ್ಷೆ ಲತಾ ಟಿ.ಎಚ್.ಎಂ ಮಾತನಾಡಿ, "ಮಹಿಳಾ ನೌಕರರಿಗೆ ಋತುಚಕ್ರದ ರಜೆ ಘೋಷಿಸುವಂತೆ ಸರ್ಕಾರಕ್ಕೆ ನಮ್ಮ ಸಂಘಟನೆಯು ಮೊದಲೇ ಧ್ವನಿಗೂಡಿಸಿ ಒತ್ತಾಯಿಸಿತ್ತು. ಹರಪನಹಳ್ಳಿ ತಾಲೂಕಿನಲ್ಲಿ ಈ ಹಿಂದೆ ನೌಕರರ ಪರವಾಗಿ ಇಂತಹ ಸಕ್ರಿಯ ಕಾರ್ಯಕ್ರಮಗಳು ನಡೆದಿರಲಿಲ್ಲ. ಆದರೆ ಪ್ರಸ್ತುತ ಅಧ್ಯಕ್ಷರಾದ ಮನೋಹರ್ ಅವರು ಹತ್ತಾರು ಜನಪರ ಕಾರ್ಯಕ್ರಮಗಳ ಮೂಲಕ ತಾಲೂಕು ಸಂಘಟನೆಯನ್ನು ಇಡೀ ರಾಜ್ಯಕ್ಕೆ ಮಾದರಿಯಾಗಿಸಿದ್ದಾರೆ. ಸಂಘಟನೆಗಳು ವೃತ್ತಿಯ ಜೊತೆಗೆ ಪ್ರವೃತ್ತಿಯಾಗಬೇಕೇ ಹೊರತು, ಸಂಘಟನೆಯೇ ವೃತ್ತಿಯಾಗಬಾರದು. ನಾವೆಲ್ಲರೂ ಸೇರಿ ತಾಲೂಕಿನ ಶೈಕ್ಷಣಿಕ ಗುಣಮಟ್ಟವನ್ನು ಹೆಚ್ಚಿಸಿ, ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಶ್ರಮಿಸೋಣ" ಎಂದರು. ಮಂಜುನಾಥ ಪೂಜಾರ್ ಅವರು ಮಾತನಾಡಿ, "ಶಾಲೆಗಳಲ್ಲಿ ೩೦ ವರ್ಷಗಳಿಗೂ ಹೆಚ್ಚು ಕಾಲ ಸುದೀರ್ಘ ಸೇವೆ ಸಲ್ಲಿಸಿ, ಸಾವಿರಾರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿರುವ ಶಿಕ್ಷಕರ ಸಮಯಪಾಲನೆ, ಕರ್ತವ್ಯ ನಿಷ್ಠೆ ಮತ್ತು ಮಕ್ಕಳೊಂದಿಗಿನ ಮಧುರ ಬಾಂಧವ್ಯ ನಿಜಕ್ಕೂ ಶ್ಲಾಘನೀಯ. ಇವರ ನಿವೃತ್ತ ಜೀವನ ಸುಖಕರವಾಗಿರಲಿ" ಎಂದು ಹಾರೈಸಿದರು. ಬಿಇಒ ಕಚೇರಿಯ ಇಸಿಒ ವೀರೇಶ್ ಮಾತನಾಡಿ, ನಿವೃತ್ತ ಹಾಗೂ ಬಡ್ತಿ ಪಡೆದ ಮುಖ್ಯ ಶಿಕ್ಷಕರನ್ನು ಕರೆಸಿ ಗೌರವಿಸುತ್ತಿರುವ ನೌಕರರ ಸಂಘದ ಕಾರ್ಯ ಸ್ತುತ್ಯರ್ಹ ಎಂದರು. ಶಿಕ್ಷಕ ಬಿ. ಆಂಜನೇಯ ಅವರೂ ಸಹ ವೇದಿಕೆಯಲ್ಲಿ ಅನಿಸಿಕೆಗಳನ್ನು ಹಂಚಿಕೊಂಡರು. ಇದೇ ವೇಳೆ ನಿವೃತ್ತ ಶಿಕ್ಷಕ ಸಲಾಂ ಅವರು "ಪ್ರೀತಿಯ ಗಾಳಿ ಬೀಸುತ್ತಿದೆ..." ಎಂಬ ಗೀತೆಯನ್ನು ಹಾಡಿ ನೆರೆದಿದ್ದವರನ್ನು ರಂಜಿಸಿದರು.  ಸರ್ಕಾರಿ ನೌಕರರ ಸಂಘದ ರಾಜ್ಯ...

harapanahalli-muslim-employees-aid-to-students
ಶಿಕ್ಷಣಸುದ್ದಿಗಳು

ಹರಪನಹಳ್ಳಿ ಮುಸ್ಲಿಂ ನೌಕರರಿಂದ ವಿದ್ಯಾರ್ಥಿಗಳಿಗೆ ನೆರವು

ಹರಪನಹಳ್ಳಿ: ‘ದಾನಧರ್ಮ ಮಾಡುವುದು ಇಸ್ಲಾಂ ಧರ್ಮದ ಪ್ರಮುಖ ತತ್ವಗಳಲ್ಲಿ ಒಂದಾಗಿದೆ. ಆರ್ಥಿಕವಾಗಿ ಹಿಂದುಳಿದವರಿಗೆ ಮತ್ತು ಅರ್ಹರಿಗೆ...

ಶಿಕ್ಷಣ

ಡಿಪ್ಲೋಮಾ ಕೋರ್ಸುಗಳಿಗೆ ಅರ್ಜಿ ಆಹ್ವಾನ

ವಿಜಯನಗರ (ಹೊಸಪೇಟೆ) :  ತಾಲೂಕಿನ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಿಂದ (ಜಿಟಿಟಿಸಿ) ಪ್ರಸಕ್ತ ಸಾಲಿನಲ್ಲಿ...

ಶಿಕ್ಷಣಸುದ್ದಿಗಳು

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆ ದಿಢೀರ್ ಸ್ಥಗಿತ! ಕಾರಣವೇನು?**

ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿದ್ದ 2026-31ನೇ ಸಾಲಿನ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.