ಹರಪನಹಳ್ಳಿ: ತಾಲ್ಲೂಕಿನ ಮುತ್ತಿಗಿ ಗ್ರಾಮದಲ್ಲಿ ದುರ್ಗಾದೇವಿ ಜಾತ್ರೆ ಬುಧವಾರ ಅದ್ದೂರಿಯಾಗಿ ನೆರವೇರಿತು.
ರಾಮಘಟ್ಟ ರೇವಣಸಿದ್ದ ಶಿವಾಚಾರ್ಯ ಸ್ವಾಮೀಜಿ, ಹಾಲಸ್ವಾಮಿ ಮಠದ ಸದ್ಗುರು ಹಾಲಸ್ವಾಮೀಜಿ ಸಾನ್ನಿಧ್ಯವಹಿಸಿದ್ದರು. ರಾತ್ರಿ ಆಯೋಜಿಸಿದ್ದ ಸಾಮಾಜಿಕ ನಾಟಕವನ್ನು ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ವೈ.ಡಿ.ಅಣ್ಣಪ್ಪ ಉದ್ಘಾಟಿಸಿದರು.
ವೈ.ಡಿ.ಅಣ್ಣಪ್ಪ ಮಾತನಾಡಿ, ರಂಗಭೂಮಿ ಕಲೆ ಉಳಿಸಿ ಬೆಳೆಸುವ ಜವಾಬ್ದಾರಿ ಪ್ರತಿಯೊಬ್ಬರಿಗೂ ಸೇರಿದ್ದು. ಗ್ರಾಮೀಣ ಸೊಗಡಿನ ಸಂಕೇತವಾಗಿರುವ ಜನಪದ ಕಲೆಗಳನ್ನು ಮುಂದಿನ ಪೀಳಿಗೆಗೂ ಹಸ್ತಾಂತರಿಸುವ ಅಗತ್ಯವಿದೆ ಎಂದರು. ಬಿಜೆಪಿ ಮುಖಂಡ ಮುತ್ತಿಗಿ ವಾಗೀಶ, ಕಾಂಗ್ರೆಸ್ ಪಕ್ಷದ ಮುಖಂಡ ಮೈದೂರು ಒ.ರಾಮಪ್ಪ, ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಜಂಬಣ್ಣ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ತುಕ್ಕೇಶಪ್ಪ, ಬಾರಿಕರ ರಾಮಪ್ಪ, ಬಡಿಗೇರ ದುರುಗಪ್ಪ, ಬೋವಿ ದುರುಗಪ್ಪ, ಹೊನ್ನಪ್ಪ, ಶಿವಣ್ಣ ಇದ್ದರು.
