Home ದೇವಸ್ಥಾನಗಳು ಸೌಹಾರ್ದತೆ ಬೆಳೆಸುವ ಶಕ್ತಿಕೇಂದ್ರಗಳು : ಉಜ್ಜಯಿನಿ ಜಗದ್ಗುರು
Home

ದೇವಸ್ಥಾನಗಳು ಸೌಹಾರ್ದತೆ ಬೆಳೆಸುವ ಶಕ್ತಿಕೇಂದ್ರಗಳು : ಉಜ್ಜಯಿನಿ ಜಗದ್ಗುರು

Share
ADAVIHALLI
Share

ಹರಪನಹಳ್ಳಿ : ಮೊಬೈಲ್‌ಗೆ ನೆಟ್‌ವರ್ಕ್ ಟವರ್‌ ಹೇಗೆ ಮುಖ್ಯವೋ, ಹಾಗೆಯೇ ದೇವಸ್ಥಾನದ ಗೋಪುರಕ್ಕೆ ಕಳಸ ಬಹುಮುಖ್ಯ. ದೇವಸ್ಥಾನಗಳು ಸಮಾಜದಲ್ಲಿ ಸೌಹಾರ್ದತೆ ಮತ್ತು ಒಗ್ಗಟ್ಟನ್ನು ಬೆಳೆಸುವ ಶಕ್ತಿಕೇಂದ್ರಗಳಾಗಿವೆ” ಎಂದು ಉಜ್ಜಯಿನಿ ಪೀಠದ ಜಗದ್ಗುರು ಸಿದ್ಧಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿ ಬಣ್ಣಿಸಿದರು.

ತಾಲ್ಲೂಕಿನ ಅಡವಿಹಳ್ಳಿ ಗ್ರಾಮದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಉಜ್ಜಯಿನಿ ಪೀಠದ ಜಗದ್ಗುರುಗಳ ಅಡ್ಡಪಲ್ಲಕ್ಕಿ ಮಹೋತ್ಸವ, ಬಸವೇಶ್ವರ ದೇವಸ್ಥಾನದ ನೂತನ ಗೋಪುರದ ಕಳಸಾರೋಹಣ ಹಾಗೂ ಧರ್ಮಸಭೆಯ ಸಾನ್ನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು.

ಗೋಪುರದ ಮೇಲಿರುವ ಕಳಸವು ದೇವಸ್ಥಾನದ ಪವಿತ್ರ ಶಕ್ತಿಯ ಸಂಕೇತವಾಗಿದೆ. ಭಗವಂತನ ದಿವ್ಯಶಕ್ತಿಯು ಈ ಕಳಸದ ಮೂಲಕ ಇಡೀ ಊರಿಗೆ ಹರಡುತ್ತದೆ ಹಾಗೂ ಪ್ರಕೃತಿಯಲ್ಲಿ ಧನಾತ್ಮಕ ಶಕ್ತಿಯನ್ನು ಹೆಚ್ಚಿಸುತ್ತದೆ. ಗ್ರಾಮಸ್ಥರು ಪ್ರತಿದಿನ ದೇವರ ಸ್ಮರಣೆ ಮಾಡಬೇಕು. ಭಗವಂತನನ್ನು ಅರಿತಾಗ ಮಾತ್ರ ಅರಿವಿನ ನಿಜವಾದ ಜ್ಞಾನ ಉಂಟಾಗುತ್ತದೆ” ಎಂದು ಶ್ರೀಗಳು ತಿಳಿಸಿದರು.

ಕಾರ್ಯಕ್ರಮದಲ್ಲಿ ತೆಗ್ಗಿನಮಠ ಸಂಸ್ಥಾನದ ವರಸದ್ಯೋಜಾತ ಶಿವಾಚಾರ್ಯ ಸ್ವಾಮೀಜಿ ಮತ್ತು ಅಡವಿಹಳ್ಳಿಯ ಸದ್ಗುರು ಶಿವಯೋಗಿ ವೀರ ಗಂಗಾಧರ ಹಾಲಸ್ವಾಮೀಜಿ ದಿವ್ಯ ಸಾನ್ನಿಧ್ಯ ವಹಿಸಿದ್ದರು. ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ವೈ.ಡಿ.ಅಣ್ಣಪ್ಪ, ರಾಜ್ಯ ಸೌಹಾರ್ದ ಸಹಕಾರಿ ಬ್ಯಾಂಕ್ ಅಧ್ಯಕ್ಷ ಜಿ.ನಂಜನಗೌಡ.  ಅಧ್ಯಕ್ಷ ಎ.ಜೆ.ಮಂಜುನಾಥ ಗೌಡ, ಉಪಾಧ್ಯಕ್ಷ ಹಾವನೂರು ಹಾಲಪ್ಪ, ಪ್ರಧಾನ ಕಾರ್ಯದರ್ಶಿ ಗುಬ್ಬವ್ವರ ಪೂಜಾರ್ ಬಸವರಾಜ, ಖಜಾಂಚಿ ಬಿ.ಜಿ.ಶರಣಪ್ಪ, ಸಹ ಕಾರ್ಯದರ್ಶಿ ನಿಂಬಳಗೇರಿ ಬಸವರಾಜ,  ಮಲ್ಲಿಕಾರ್ಜುನ ಕಲ್ಮಠ, ಕರಿಬಸವರಾಜ, ಓಂಕಾರಗೌಡ, ಸುರೇಶ, ಪಿ.ಅರುಣ್ ಕುಮಾರ ಸೇರಿದಂತೆ ಅಪಾರ ಸಂಖ್ಯೆಯಲ್ಲಿ ಗ್ರಾಮಸ್ಥರು ಉಪಸ್ಥಿತರಿದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಕಲಬುರಗಿಯ ಸೇಂಟ್ ಮೇರಿಸ್ ಶಾಲೆಯಲ್ಲಿ ಉಚಿತ ದಂತ ತಪಾಸಣಾ ಶಿಬಿರ

ಕಲಬುರಗಿ: ಕೊಟನೂರಿನ ಸೇಂಟ್ ಮೇರಿಸ್ ಶಾಲೆಯಲ್ಲಿ ಕಾರ್ಮೆಲ್ ಜ್ಯೋತಿ ಪಬ್ಲಿಕ್ ಚಾರಿಟಬಲ್ ಟ್ರಸ್ಟ್, ಕಡಗಂಚಿ, ಅಲ್...

Homeಸುದ್ದಿಗಳು

ಕ್ರೀಡಾಕೂಟಗಳು ಸ್ಪರ್ಧೆಯಾಗದೆ,ಹಬ್ಬದ ಸಂಭ್ರಮವಾಗಲಿ:ಶಾಸಕ ಬಿ.ದೇವೇಂದ್ರಪ್ಪ ಅಭಿಮತ.

ಹರಪನಹಳ್ಳಿ : ಗ್ರಾಮೀಣ ಭಾಗದಲ್ಲಿ ಕ್ರೀಡಾಕೂಟಗಳು ಕೇವಲ ಸ್ಪರ್ಧೆಯಾಗದೆ, ಹಬ್ಬದ ಸಂಭ್ರಮ ಮನೆಮಾಡಬೇಕು ಎಂದು ಶಾಸಕ...

Homeಸುದ್ದಿಗಳು

ಸೆ.19ರಂದು ಹರಪನಹಳ್ಳಿಯಲ್ಲಿ ತಾಲ್ಲೂಕು ಮಟ್ಟದ ಪ್ರಜಾಸೇವಾ ಕಾರ್ಯಕ್ರಮ

ವಿಜಯನಗರ : ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ, ಅವುಗಳಿಗೆ ಸೂಕ್ತ ಪರಿಹಾರ ಕಲ್ಪಿಸುವ ಉದ್ದೇಶದಿಂದ ಜಿಲ್ಲೆಯ...

Homeಸುದ್ದಿಗಳು

ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ : ಕಾಲಮಿತಿಯಲ್ಲಿ ಅರ್ಜಿಗಳ ವಿಲೇವಾರಿಗೆ ಕ್ರಮ

ವಿಜಯನಗರ : ಸಾರ್ವಜನಿಕರು ತಮ್ಮ ದಿನನಿತ್ಯದ ಸಮಸ್ಯೆಗಳು, ಬೇಡಿಕೆಗಳು ಹಾಗೂ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಕುಂದುಕೊರತೆಗಳಿಗಾಗಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.