ಹರಪನಹಳ್ಳಿ : ಪರಿನಿರ್ವಾಣ ದಿನ ವಿಶ್ವಜ್ಞಾನಿ ಬಾಬಾ ಸಾಹೇಬ್ ಅಂಬೇಡ್ಕರ ಅವರ ಭಾವಚಿತ್ರವಿಟ್ಟು ಪೂಜಿಸಬೇಕು ಎಂದು ತಹಶೀಲ್ದಾರ ಅವರು ಡಿ.4ರಂದೇ ಆದೇಶ ಮಾಡಿದ್ದಾರೆ. ಆದರೆ ಪರಿನಿರ್ವಾಣ ಆಚರಣೆ ನಿರ್ಲಕ್ಷಿಸಿರುವ ಶಾಲಾ ಶಿಕ್ಷಣ ಇಲಾಖೆ ಬಿಇಒ ಲೇಪಾಕ್ಷಪ್ಪ ಅವರ ವಿರುದ್ಧ ತಾಲ್ಲೂಕು ಆಡಳಿತ ಮತ್ತು ಜಿಲ್ಲಾಧಿಕಾರಿಗಳು ಶಿಸ್ತು ಕ್ರಮ ಜರುಗಿಸಬೇಕು ಎಂದು ದಲಿತ ಸಂಘರ್ಷ ಸಮಿತಿ (ಭೀಮವಾದ) ತಾಲ್ಲೂಕು ಅಧ್ಯಕ್ಷ ಕೆ.ಸುಭಾಷ್ ಆಗ್ರಹಿಸಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಗೆ ಬೇಟಿಕೊಟ್ಟಿದ್ದ ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳು, ಅಲ್ಲಿನ ಅಧಿಕಾರಿಗಳನ್ನು ಪ್ರಶ್ನಿಸಿದಾಗ ಅವರು ಹಾರಿಕೆ ಉತ್ತರ ಕೊಟ್ಟಿದ್ದಾರೆ. ಇದನ್ನು ಖಂಡಿಸಿದ ಪದಾಧಿಕಾರಿಗಳು ಪರಿನಿರ್ವಾಣ ಆಚರಿಸುವ ತನಕ ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದು ದೂರಿದರು.
ಕೃಷಿ ಇಲಾಖೆ, ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ ಸೇರಿ ಆಚರಣೆ ಮಾಡಿ, ವರದಿ ಸಲ್ಲಿಸದ ಎಲ್ಲ ಇಲಾಖೆಗಳ ತಾಲ್ಲೂಕು ಮಟ್ಟದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಲೇಪಾಕ್ಷಪ್ಪ ಅವರು ಅಂಬೇಡ್ಕರ ಭಾವಚಿತ್ರವಿರಿಸಿ ಪೂಜೆ ಸಲ್ಲಿಸಿದ ಬಳಿಕ ಮಾತನಾಡಿ, ಅಚಾತುರ್ಯದಿಂದ ಪರಿನಿರ್ವಾಣ ಆಚರಣೆ ವಿಳಂಬವಾಗಿದೆ. ಮುಂದಿನ ದಿನಗಳಲ್ಲಿ ಈ ರೀತಿ ಆಗದಂತೆ ಎಚ್ಚರಿಕೆ ವಹಿಸಲಾಗುವುದು, ವಿಳಂಬ ಆಗಿದ್ದಕ್ಕೆ ಕ್ಷಮೆಯಾಚಿಸಿದ್ದಾರೆ. ಬಳಿಕ ಸಂಘಟಕರು ಪ್ರತಿಭಟನೆ ಹಿಂಪಡೆದು, ಅಲ್ಲಿಂದ ತೆರಳಿದ್ದಾರೆ.
ಡಾ.ಬಿ.ಆರ್.ಅಂಬೇಡ್ಕರ ಸರ್ಕಲ್ ನಲ್ಲಿ ಆಚರಣೆ
ದಲಿತ ಸಂಘರ್ಷ ಸಮಿತಿ(ಭೀಮವಾದ)ದಿಂದ ಆಚರಿಸಿದ 69ನೇ ಪರಿನಿರ್ವಾಣ ಆಚರಣೆಯಲ್ಲಿ ಸಹಾಯಕ ನಿರ್ದೇಶಕ ಎಸ್.ಆರ್.ಗಂಗಪ್ಪ, ಮುಖ್ಯಾಧಿಕಾರಿ ರೇಣುಕಾ ಎಸ್.ದೇಸಾಯಿ, ನಿಲಯ ಮೇಲ್ವಿಚಾರಕ ಎನ್.ಜಿ.ಬಸವರಾಜ್, ತಾಲ್ಲೂಕು ಅಧ್ಯಕ್ಷ ಕೆ.ಸುಭಾಷ್, ಛತ್ರಪತಿ, ಬಿದ್ದಾಡಿ ನಾಗರಾಜ್, ಜಯರಾಜ್, ಭರತ್, ಶ್ರೀಕಾಂತ, ರಮೇಶ್,ಕೋಟೆಪ್ಪ ಇದ್ದರು.
