Home ಸುದ್ದಿಗಳು ಹರಪನಹಳ್ಳಿ : ಬಿಜೆಪಿಯಿಂದ ಅಂಬೇಡ್ಕರ ಪರಿನಿರ್ವಾಣ
ಸುದ್ದಿಗಳು

ಹರಪನಹಳ್ಳಿ : ಬಿಜೆಪಿಯಿಂದ ಅಂಬೇಡ್ಕರ ಪರಿನಿರ್ವಾಣ

Share
ಹರಪನಹಳ್ಳಿ ಬಿಜೆಪಿ
Share

ಹರಪನಹಳ್ಳಿ : ನಗರದ ರಾಮಾಂಜನೇಯ ದೇವಸ್ಥಾನ ಹತ್ತಿರ ಇರುವ ಭಾರತೀಯ ಜನತಾ ಪಾರ್ಟಿ ಕಚೇರಿಯಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ ಅವರ 69ನೇ ಮಹಾ ಪರಿನಿರ್ವಾಣ ದಿನ ಪೂಜೆ ಸಲ್ಲಿಸಲಾಯಿತು.

ಬಿಜೆಪಿ ಜಿಲ್ಲಾ ಎಸ್ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಕಣಿವಿಹಳ್ಳಿ ಮಂಜುನಾಥ ಮಾತನಾಡಿ, ಡಾ.ಬಿ.ಆರ್.ಅಂಬೇಡ್ಕರ ಅವರು ವಿಶ್ವವಿಜ್ಞಾನಿ. ಸಮ ಸಮಾಜದ ನಿರ್ಮಾಣದ ಹಿತದೃಷ್ಟಿಯಿಂದ ಶ್ರೇಷ್ಠ ಸಂವಿಧಾನ ರೂಪಿಸಿದ್ದಾರೆ. ಅವರೊಬ್ಬ ಶ್ರೇಷ್ಠ ವ್ಯಕ್ತಿತ್ವ ಹೊಂದಿದ್ದವರು ಎಂದು ಹೇಳಿದರು.

ಅಂಬೇಡ್ಕರ ಭಾವಚಿತ್ರವಿಟ್ಟು ಪೂಜೆ ಸಲ್ಲಿಸಿದರು. ಸಹಕಾರಿ ಸೌಹಾರ್ಧ ಬ್ಯಾಂಕ್ ಅಧ್ಯಕ್ಷ ಜಿ.ನಂಜನಗೌಡ, ಬಿಜೆಪಿ ನಿಕಟಪೂರ್ವ ಅಧ್ಯಕ್ಷ ಕೆ.ಲಕ್ಷ್ಮಣ, ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯ ಕಾರ್ಯದರ್ಶಿ ಎಸ್.ಪಿ.ಲಿಂಬ್ಯನಾಯ್ಕ, ಅವರು, ಅಂಬೇಡ್ಕರ ಜೀವನ ಕಥೆ ಮತ್ತು ಸಾಧನೆಗಳನ್ನು ಸ್ಮರಿಸಿದರು.

ಮುಖಂಡರಾದ ಓಂಕಾರಗೌಡ, ಇಜಂತಕರ್ ಮಂಜುನಾಥ,  ಎಲ್.ಮಂಜನಾಯ್ಕ, ಮೈದೂರು ಮಲ್ಲಿಕಾರ್ಜುನ, ಕೆ.ಲಿಂಗಾನಂದ, ಪ್ರಾಣೇಶ್, ಬೂದಿ ನವೀನ್ ಎಸ್. ಸುರೇಶ್, ಮೇಘ್ಯ ನಾಯಕ್, ನಂದಿಬೇವೂರು ಚಾರಪ್ಪ ,ಸಾಮಿ ನಾಯಕ್, ನಾಗರಾಜ್, ಅಂಜಿನಪ್ಪ, ಭದ್ರಿ ನಾರಾಯಣ ಶೆಟ್ಟಿ ಇದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಜೂ.18 ರಂದು ಪರಿಶಿಷ್ಟ ಜಾತಿ ಜನಾಂಗದವರ ಕುಂದು-ಕೊರತೆ ಆಲಿಕೆ ಸಭೆ

ಬಳ್ಳಾರಿ : ಜಿಲ್ಲೆಯ ಪರಿಶಿಷ್ಟ ಜಾತಿ ಜನಾಂಗದವರ ಸಮಸ್ಯೆಗಳನ್ನು ಆಲಿಸಿ, ಪರಿಹರಿಸಲು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ...

ಹರಪನಹಳ್ಳಿ ಪೊಲೀಸ್‌
Homeಸುದ್ದಿಗಳು

ಹರಪನಹಳ್ಳಿಯಲ್ಲಿ ಪೊಲೀಸರ ‘ಕಾಲ್ನಡಿಗೆ ಗಸ್ತು’

ಹರಪನಹಳ್ಳಿ : ನಗರದಲ್ಲಿ ಅಪರಾಧ ಪ್ರಕರಣಗಳಿಗೆ ಬ್ರೇಕ್ ಹಾಕಲು ನಮ್ಮ ಪೊಲೀಸ್ ಇಲಾಖೆ ಒಂದು ಸೂಪರ್...

dc hosapete
Homeಸುದ್ದಿಗಳು

ನಿರ್ಲಕ್ಷ್ಯ ತೋರಿದರೆ ಕಠಿಣ ಕ್ರಮ – ಕವಿತಾ ಎಸ್. ಮನ್ನಿಕೇರಿ ಖಡಕ್ ಎಚ್ಚರಿಕೆ

ಹೊಸಪೇಟೆ (ವಿಜಯನಗರ): ಜಿಲ್ಲೆಯಲ್ಲಿ ಕುಂಠಿತಗೊಂಡಿರುವ 7ನೇ ಸಣ್ಣ ನೀರಾವರಿ ಹಾಗೂ 2ನೇ ಜಲಮೂಲಗಳ ಗಣತಿಯನ್ನು ಸರ್ಕಾರದ...

harapanahallipdo
ಸುದ್ದಿಗಳು

ಪಂಚಾಯತ್ ಇಲಾಖೆ ನೌಕರರ ಸಂಘಕ್ಕೆ ಆಯ್ಕೆ

ಹರಪನಹಳ್ಳಿ :  ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಇಲಾಖೆಯ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷರಾಗಿ ಹಲವಾಗಲು...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.