ಹರಪನಹಳ್ಳಿ : ನಗರದ ರಾಮಾಂಜನೇಯ ದೇವಸ್ಥಾನ ಹತ್ತಿರ ಇರುವ ಭಾರತೀಯ ಜನತಾ ಪಾರ್ಟಿ ಕಚೇರಿಯಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ ಅವರ 69ನೇ ಮಹಾ ಪರಿನಿರ್ವಾಣ ದಿನ ಪೂಜೆ ಸಲ್ಲಿಸಲಾಯಿತು.
ಬಿಜೆಪಿ ಜಿಲ್ಲಾ ಎಸ್ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಕಣಿವಿಹಳ್ಳಿ ಮಂಜುನಾಥ ಮಾತನಾಡಿ, ಡಾ.ಬಿ.ಆರ್.ಅಂಬೇಡ್ಕರ ಅವರು ವಿಶ್ವವಿಜ್ಞಾನಿ. ಸಮ ಸಮಾಜದ ನಿರ್ಮಾಣದ ಹಿತದೃಷ್ಟಿಯಿಂದ ಶ್ರೇಷ್ಠ ಸಂವಿಧಾನ ರೂಪಿಸಿದ್ದಾರೆ. ಅವರೊಬ್ಬ ಶ್ರೇಷ್ಠ ವ್ಯಕ್ತಿತ್ವ ಹೊಂದಿದ್ದವರು ಎಂದು ಹೇಳಿದರು.
ಅಂಬೇಡ್ಕರ ಭಾವಚಿತ್ರವಿಟ್ಟು ಪೂಜೆ ಸಲ್ಲಿಸಿದರು. ಸಹಕಾರಿ ಸೌಹಾರ್ಧ ಬ್ಯಾಂಕ್ ಅಧ್ಯಕ್ಷ ಜಿ.ನಂಜನಗೌಡ, ಬಿಜೆಪಿ ನಿಕಟಪೂರ್ವ ಅಧ್ಯಕ್ಷ ಕೆ.ಲಕ್ಷ್ಮಣ, ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯ ಕಾರ್ಯದರ್ಶಿ ಎಸ್.ಪಿ.ಲಿಂಬ್ಯನಾಯ್ಕ, ಅವರು, ಅಂಬೇಡ್ಕರ ಜೀವನ ಕಥೆ ಮತ್ತು ಸಾಧನೆಗಳನ್ನು ಸ್ಮರಿಸಿದರು.
ಮುಖಂಡರಾದ ಓಂಕಾರಗೌಡ, ಇಜಂತಕರ್ ಮಂಜುನಾಥ, ಎಲ್.ಮಂಜನಾಯ್ಕ, ಮೈದೂರು ಮಲ್ಲಿಕಾರ್ಜುನ, ಕೆ.ಲಿಂಗಾನಂದ, ಪ್ರಾಣೇಶ್, ಬೂದಿ ನವೀನ್ ಎಸ್. ಸುರೇಶ್, ಮೇಘ್ಯ ನಾಯಕ್, ನಂದಿಬೇವೂರು ಚಾರಪ್ಪ ,ಸಾಮಿ ನಾಯಕ್, ನಾಗರಾಜ್, ಅಂಜಿನಪ್ಪ, ಭದ್ರಿ ನಾರಾಯಣ ಶೆಟ್ಟಿ ಇದ್ದರು.
Leave a comment