ಹರಪನಹಳ್ಳಿ : ರಾಜ್ಯ ಸರ್ಕಾರಿ ನೌಕರರ ಸಂಘ ಪ್ರತಿಭಾವಂತ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಿದ್ದು ತಾಲ್ಲೂಕಿನ ಸರ್ಕಾರಿ ನೌಕರರ ಮಕ್ಕಳು ಆನ್ ಮೂಲಕ ಅರ್ಜಿ ಸಲ್ಲಿಸಲು ತಾಲ್ಲೂಕು ಸಂಘ ಕೋರಿದೆ.
2026ನೇ ಸಾಲಿನ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಯಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. https://powermedia.info ಆನ್ ಲೈನ್ ಮೂಲಕ ಮೇ 25ರ ಒಳಗಾಗಿ ಅರ್ಜಿ ಸಲ್ಲಿಸಬಹುದು. ಶೇ.90 ಕ್ಕಿಂತ ಹೆಚ್ಚು ಅಂಕಪಡೆದವರು ಅರ್ಜಿ ಸಲ್ಲಿಸಲು ಅರ್ಹರು ಎಂದು ತಾಲ್ಲೂಕು ಅಧ್ಯಕ್ಷ ಎನ್.ಜಿ.ಮನೋಹರ, ಗೌರವ ಅಧ್ಯಕ್ಷ ಎನ್.ಟಿ.ಸೋಮಣ್ಣ, ಕಾರ್ಯದರ್ಶಿ ಬಿ.ಸೂರ್ಯನಾಯ್ಕ, ರಾಜ್ಯ ಪರಿಷತ್ ಸದಸ್ಯರಾದ ಮಕರಬ್ಬಿ ಷರೀಪ್, ಮಂಜುನಾಥ್ ಪೂಜಾರ ಹಾಗೂ ಖಜಾಂಚಿ ಬಿ.ಬಸವರಾಜ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Leave a comment