Home ಸುದ್ದಿಗಳು  ಅರಸೀಕೆರೆ : ಗ್ರಾಮೀಣ ಬ್ಯಾಂಕ್‌ ನಲ್ಲಿ ಹಣಕ್ಕಾಗಿ ಪರದಾಟ
ಸುದ್ದಿಗಳು

 ಅರಸೀಕೆರೆ : ಗ್ರಾಮೀಣ ಬ್ಯಾಂಕ್‌ ನಲ್ಲಿ ಹಣಕ್ಕಾಗಿ ಪರದಾಟ

Share
ಕರ್ನಾಟಕ ಗ್ರಾಮೀಣ ಬ್ಯಾಂಕ್‌, ಅರಸೀಕೆರೆ
Share

ಹರಪನಹಳ್ಳಿ : ತಾಲ್ಲೂಕಿನ ಅರಸೀಕೆರೆ ದಂಡಿನ ದುರುಗಮ್ಮ ದೇವಿ ಜಾತ್ರೆಯ ಖರ್ಚಿಗಾಗಿ ತಮ್ಮ ಖಾತೆಯಿಂದ ಹಣ ಪಡೆಯಲು ಬರುವ ಗ್ರಾಹಕರಿಗೆ ಕರ್ನಾಟಕ ಗ್ರಾಮೀಣ ಬ್ಯಾಂಕ್‌ ಸಕಾಲಕ್ಕೆ ಒದಗಿಸುತ್ತಿಲ್ಲ ಎಂದು ಸಾರ್ವಜನಿಕರು ದೂರಿದ್ದಾರೆ.

ಹತ್ತು ವರ್ಷದಿಂದ ಕಾರ್ಯನಿರ್ವಹಿಸುತ್ತಿರುವ ಕರ್ನಾಟಕ ಗ್ರಾಮೀಣ ಬ್ಯಾಂಕ್‌ 15 ಸಾವಿರ  ಖಾತೆದಾರರನ್ನು ಹೊಂದಿದೆ. ಇದರ ವ್ಯಾಪ್ತಿಗೆ 4 ಗ್ರಾಮ ಪಂಚಾಯಿತಿಗಳು ಒಳಪಟ್ಟಿವೆ. ಉದ್ಯೋಗ ಖಾತ್ರಿ ಫಲಾನುಭವಿಗಳು, ಖಾತೆದಾರರು, ಬ್ಯಾಂಕಿನಲ್ಲಿ ಸಾಲ ಪಡೆಯುವ ರೈತರು, ಗ್ರಾಹಕರು, ಬಂಗಾರ ಅಡವಿಡುವ ಗ್ರಾಹಕರು ಬ್ಯಾಂಕ್‌ ಗೆ ಬರುತ್ತಾರೆ. ಆದರೆ ಸಕಾಲಕ್ಕೆ ಅಧಿಕಾರಿಗಳು ಹಣ ಒದಗಿಸುತ್ತಿಲ್ಲ. ದಿನವೊಂದಕ್ಕೆ ಕೇವಲ 50 ಲಕ್ಷ ವ್ಯವಹರಿಸಿ, ವಹಿವಾಟು ನಿಲ್ಲಿಸಿ ಬಿಡುತ್ತಾರೆ. ಬ್ಯಾಂಕ್‌ ವ್ಯಾಪ್ತಿಗೆ 40 ಹಳ್ಳಿಗಳು ಒಳಪಡುತ್ತವೆ. ನಿತ್ಯ ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಹಣವಿಲ್ಲದೇ ನಿರಾಸೆಯಿಂದ ವಾಪಾಸು ಹೋಗುತ್ತಿದ್ದಾರೆ. ಬ್ಯಾಂಕ್‌ ನಲ್ಲಿ ಹೆಚ್ಚುವರಿ ಕೌಂಟರ್‌ ತೆರೆಯಬೇಕು ಇಲ್ಲದಿದ್ದರೆ ಬ್ಯಾಂಕ್‌ ಮುಂದೆ ಧರಣಿ ನಡೆಸಬೇಕಾಗುತ್ತದೆ ಎಂದು ಅಖಿಲ ಭಾರತ ಕಿಸಾನ್‌ ಸಭಾ ಜಿಲ್ಲಾಧ್ಯಕ್ಷ ಕೆರೆಗುಡಿಹಳ್ಳಿ ಹಾಲೇಶ್‌ ಎಚ್ಚರಿಸಿದ್ದಾರೆ. ಗ್ರಾಹಕರಾದ ಹನುಮಂತಪ್ಪ, ರತ್ನಮ್ಮ, ಮಲ್ಲಪ್ಪ,ಮಹೇಶ್‌ ಇತರರಿದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeರಾಜಕೀಯಸುದ್ದಿಗಳು

ಅಡವಿಹಳ್ಳಿಯಲ್ಲಿ ಬಸವೇಶ್ವರ ದೇವಸ್ಥಾನದ ಕಳಸಾರೋಹಣ

ಹರಪನಹಳ್ಳಿ: ಮೊಬೈಲ್ಗೆ ಹೇಗೆ ನೆಟ್ವರ್ಕ್ ಟವರ್ ಮುಖ್ಯವೋ, ಹಾಗೆಯೇ ದೇವಸ್ಥಾನದ ಗೋಪುರಕ್ಕೆ ಕಳಸ ಬಹುಮುಖ್ಯ, ದೇವಸ್ಥಾನಗಳು...

Homeಸುದ್ದಿಗಳು

ಕೋಟೆ ಅಂಜನೇಯ ದೇವಸ್ಥಾನ ಜಾಗ ಒತ್ತುವರಿ ತೆರವುಗೊಳಿಸದಿದ್ದರೆ ಹೋರಾಟದ ಎಚ್ಚರಿಕೆ

ಹರಪನಹಳ್ಳಿ (ವಿಜಯನಗರ ಜಿಲ್ಲೆ ) : ಪಾಳೆಗಾರ ರಾಜಸೋಮಶೇಖರ ನಾಯಕರ ಕಾಲದ ನಿರ್ಮಾಣವಾದ ಕೋಟೆ ಅಂಜನೇಯ...

ssm dvg
ಸುದ್ದಿಗಳು

ಶಾಮನೂರು ಶಿವಶಂಕರಪ್ಪ ಜನ್ಮದಿನ: ಜೂನ್‌ 17ಕ್ಕೆ  ಉಚಿತ ಸಾಮೂಹಿಕ ವಿವಾಹ  

ಹರಪನಹಳ್ಳಿ : ಮಾಜಿ ಶಾಸಕ ದಿವಂಗತ ಶಾಮನೂರು ಶಿವಶಂಕರಪ್ಪ ಅವರ 96ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಜೂನ್...

vijaya vikrama
Homeಸುದ್ದಿಗಳು

ದೇಶದ ಬದಲಾವಣೆಯಲ್ಲಿ ಪತ್ರಕರ್ತರ ಪಾತ್ರ ದೊಡ್ಡದು : ಕೋಡಿಹಳ್ಳಿ ಭೀಮಪ್ಪ

ಹರಪನಹಳ್ಳಿ : ಪತ್ರಿಕೋದ್ಯಮದಲ್ಲಿ ನಿಷ್ಠೆ, ಧೈರ್ಯ ಮತ್ತು ಪ್ರಾಮಾಣಿಕತೆ ಇದ್ದರೆ ಸಮಾಜದ ದಿಕ್ಕು ಬದಲಾಯಿಸಲು ಸಾಧ್ಯವಾಗುತ್ತದೆ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.